Featured

ಸುನೀತಾ ವಿಲಿಯಮ್ಸ್‌ ಗಗನಯಾತ್ರೆ ಮುಂದೂಡಿಕೆ : ತಾಂತ್ರಿಕ ವೈಫಲ್ಯದಿಂದ ಉಡಾವಣೆ ರದ್ದು – Vishwanews24

ಸುನೀತಾ ವಿಲಿಯಮ್ಸ್‌ ಗಗನಯಾತ್ರೆ ಮುಂದೂಡಿಕೆ : ತಾಂತ್ರಿಕ ವೈಫಲ್ಯದಿಂದ ಉಡಾವಣೆ ರದ್ದು

ಫ್ಲೋರಿಡಾ: ಫ್ಲೋರಿಡಾದ ಕೇಪ್‌ ಕೆನವರೆಲ್‌ನಲ್ಲಿರುವ ಕೆನ್ನಡಿ ಸ್ಪೇಸ್‌ ಸೆಂಟರ್‌ನಿಂದ ಇಂದು ಭಾರತೀಯ ಮೂಲದ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ ಅವರನ್ನು ಹೊತ್ತೊಯ್ಯಲಿದ್ದ ಬೋಯಿಂಗ್‌ ಸ್ಟಾರಲೈನರ್‌ ಗಗನನೌಕೆಯ ಉಡಾವಣೆಯು ನಿಗದಿತ ಸಮಯಕ್ಕಿಂತ 90 ನಿಮಿಷ ಮುಂಚಿತವಾಗಿ ತಾಂತ್ರಿಕ ಸಮಸ್ಯೆಯ ಕಾರಣ ಮುಂದೂಡಲಾಯಿತು. ಭಾರತೀಯ ಕಾಲಮಾನದ ಪ್ರಕಾರ ಬೆಳಿಗ್ಗೆ 8.04ಕ್ಕೆ ಗಗನನೌಕೆ ಉಡಾವಣೆಯಾಗಬೇಕಿತ್ತು.

ಆದರೆ ನಿಗದಿತ ಸಮಯದ ಒಂದೂವರೆ ಗಂಟೆ ಮುಂಚಿತವಾಗಿ ಗಗನನೌಕೆಯನ್ನು ಹೊತ್ತೊಯ್ಯುವ ಅಟ್ಲಾಸ್‌ ವಿ ರಾಕೆಟ್‌ ಉಡಾವಣೆ ರದ್ದುಗೊಂಡಿತು. ಆಕ್ಸಿಜನ್‌ ರಿಲೀಫ್‌ ವಾಲ್ವ್‌ನಲ್ಲಿ ಆಫ್-ನಾಮಿನಲ್‌ ಸ್ಥಿತಿ ಇದ್ದುದರಿಂದ ಹೀಗೆ ಮಾಡಬೇಕಾಯಿತು ಎಂಬ ಮಾಹಿತಿ ನೀಡಲಾಯಿತು.

ಸುನೀತಾ ವಿಲಿಯಮ್ಸ್‌ ಹಾಗೂ ಅವರ ಜೊತೆ ತೆರಳಲಿದ್ದ ನಾಸಾದ ಬ್ಯಾರಿ ವಿಲ್ಮೋರ್‌ ಅವರು ಸುರಕ್ಷಿತವಾಗಿ ಗಗನನೌಕೆಯಿಂದ ಹೊರಬಂದರು.

ಈಗಾಗಲೇ ಎರಡು ಬಾರಿ ಬಾಹ್ಯಾಕಾಶಕ್ಕೆ ತೆರಳಿ 322 ದಿನಗಳ ಕಾಲ ಬಾಹ್ಯಾಕಾಶದಲ್ಲಿ ತಂಗಿರುವ ಸುನೀತಾ ಅವರಿಗೆ ಇದು ಮೂರನೇ ಪ್ರಯಾಣವಾಗಿದೆ. ಬಾಹ್ಯಾಕಾಶದಲ್ಲಿ ಮಹಿಳೆಯೊಬ್ಬರು ನಡೆಸಿದ ಗರಿಷ್ಠ ಗಂಟೆಗಳ ಸ್ಪೇಸ್‌ವಾಕ್‌ ದಾಖಲೆಯೂ ಸುನೀತಾ ವಿಲಿಯಮ್ಸ್‌ ಹೆಸರಿನಲ್ಲಿದೆ.

ಸುನೀತಾ ವಿಲಿಯಮ್ಸ್‌ ಮೊದಲ ಬಾರಿಗೆ ಡಿಸೆಂಬರ್‌ 9, 2006ರಲ್ಲಿ ಬಾಹ್ಯಾಕಾಶಕ್ಕೆ ತೆರಳಿ ಜೂನ್22, 2007 ತನಕ ಅಲ್ಲಿದ್ದರು.

Vishwa News 24

Recent Posts

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

15 minutes ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

25 minutes ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

37 minutes ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

44 minutes ago

ಉಡುಪಿ: ಎಸ್.ಟಿ ಮೋರ್ಚಾದ ನೂತನ ಪದಾಧಿಕಾರಿಗಳಿಗೆ ನಿಯುಕ್ತಿ ಪತ್ರ ವಿತರಣೆ – vishwanews24

ಉಡುಪಿ: ಎಸ್.ಟಿ ಮೋರ್ಚಾದ ನೂತನ ಪದಾಧಿಕಾರಿಗಳಿಗೆ ನಿಯುಕ್ತಿ ಪತ್ರ ವಿತರಣೆ ಉಡುಪಿ: ಭಾರತೀಯ ಜನತಾ ಪಾರ್ಟಿಯ ಎಸ್.ಟಿ ಮೋರ್ಚಾ ಜಿಲ್ಲಾ…

52 minutes ago

ಮೊದಲ ಬಾರಿಗೆ NCERT 9ನೇ ಕ್ಲಾಸ್‌ನಲ್ಲಿ ತುರ್ತು ಪರಿಸ್ಥಿತಿ ಪಠ್ಯ ಅಧಿಕೃತವಾಗಿ ಸೇರ್ಪಡೆ – vishwanews24

ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ.. ಮೊದಲ ಬಾರಿಗೆ NCERT 9ನೇ ಕ್ಲಾಸ್‌ನಲ್ಲಿ ತುರ್ತು ಪರಿಸ್ಥಿತಿ ಪಠ್ಯ…

4 hours ago