ಬೆಂಗಳೂರು : ಸರ್ಕಾರವನ್ನು ಉಳಿಸಿಕೊಳ್ಳಲು ಮೈತ್ರಿ ನಾಯಕರು ವಿಪ್ ಅಧಿಕಾರದ ಬಗ್ಗೆ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ, ಆದರೆ, ಸುಪ್ರೀಂಕೋರ್ಟ್ ಈಗಾಗಲೇ ಅತೃಪ್ತರು ಸದನಕ್ಕೆ ಬರಲು ಒತ್ತಾಯಿಸುವಂತಿಲ್ಲ ಎಂದು ಹೇಳುವ ಮೂಲಕ ವಿಪ್ ಪರಮಾಧಿಕಾರಕ್ಕೆ ಕವಡೆ ಕಾಸಿನ ಕಿಮ್ಮತ್ತಿಲ್ಲದಂತೆ ಮಾಡಿದೆ ಎಂದು ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ರೆಸಾರ್ಟ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್ ವೈ, ಸೋಮವಾರ ಮೈತ್ರಿ ಸರ್ಕಾರ ಬೀಳುವುದು ಖಚಿತ, ಸೋಮವಾರ ಸುಪ್ರೀಂಕೋರ್ಟ್ ಮೈತ್ರಿ ಸರ್ಕಾರದ ಪರವಾಗಿ ತೀರ್ಪು ನೀಡಲಿದೆ ಎಂಬುದು ಭ್ರಮೆಯಷ್ಟೇ ಎಂದು ಅಭಿಪ್ರಾಯಪಟ್ಟಿದ್ದಾರೆ. ಅಧಿಕಾರದಲ್ಲಿ ಮುಂದುವರಿಯುವ ನೈತಿಕ ಹಕ್ಕು ನಿಮಗಿಲ್ಲ. ನೈತಿಕತೆ ಇದ್ದರೆ ಅಧಿಕಾರದಿಂದ ಇಳಿದು ಬಿಟ್ಟುಹೋಗಿ. ರಾಜ್ಯಪಾಲರ ಸೂಚನೆಗಳಿಗೆ ಕ್ಯಾರೇ ಅನ್ನುತ್ತಿಲ್ಲ. ರಾಜ್ಯದಲ್ಲಿ ಬರ ಪರಿಸ್ಥಿತಿ ಇದೆ. ಅದಕ್ಕೂ ಆದ್ಯತೆ ನೀಡುತ್ತಿಲ್ಲ ಎಂದು ದೂರಿದರು.
ಮುಂಬೈನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾಂಗ್ರೆಸ್ ಶಾಸಕ ಶ್ರೀಮಂತ ಪಾಟೀಲ್ ಅವರೇ ಯಾರೂ ನನ್ನನ್ನು ಕರೆದುಕೊಂಡು ಬಂದಿಲ್ಲ ಎಂದು ತಿಳಿಸಿದ್ದಾರೆ. ಆದರೆ, ಡಿ.ಕೆ.ಶಿವಕುಮಾರ್ ಸಭೆಯಲ್ಲಿ ಅವರ ಫೋಟೋ ಹಿಡಿದು ಗದ್ದಲವನ್ನೇ ಮಾಡಿದ್ದಾರೆ. ಹೀಗಾಗಿ ಸದನಕ್ಕೆ ತಪ್ಪು ಮಾಹಿತಿ ಕೊಟ್ಟ ಕಾರಣ ಡಿ.ಕೆ.ಶಿವಕುಮಾರ್ ಸದನದ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…