Featured

ಸುಬ್ರಹ್ಮಣ್ಯ :  ಕುಮಾರ ಪರ್ವತಕ್ಕೆ ಚಾರಣಿಗರ ಪ್ರವೇಶಕ್ಕೆ ನಿಷೇಧ ; ಆದೇಶ ಉಲ್ಲಂಘಿಸಿದರೆ ಕಠಿಣ ಕ್ರಮ : ಅರಣ್ಯ ಇಲಾಖೆ ಎಚ್ಚರಿಕೆ – Vishwanews24

ಸುಬ್ರಹ್ಮಣ್ಯ :  ಕುಮಾರ ಪರ್ವತಕ್ಕೆ ಚಾರಣಿಗರ ಪ್ರವೇಶಕ್ಕೆ ನಿಷೇಧ ; ಆದೇಶ ಉಲ್ಲಂಘಿಸಿದರೆ ಕಠಿಣ ಕ್ರಮ : ಅರಣ್ಯ ಇಲಾಖೆ ಎಚ್ಚರಿಕೆ

ಸುಬ್ರಹ್ಮಣ್ಯ (Vishwanews24): ಕರಾವಳಿಯ ಕುಮಾರ ಪರ್ವತಕ್ಕೆ ಚಾರಣಿಗರ ಪ್ರವೇಶಕ್ಕೆ ನಿಷೇಧ ವಿಧಿಸಲಾಗಿದ್ದು ಆದೇಶ ಉಲ್ಲಂಘಿಸಿದವರಿಗೆ ಅರಣ್ಯ ಇಲಾಖೆ ಕಠಿಣ ಕ್ರಮದ ಎಚ್ಚರಿಕೆಯನ್ನು ನೀಡಿದೆ.

ಕುಮಾರ ಪರ್ವತ ಪ್ರದೇಶದಲ್ಲಿ ವನ್ಯಜೀವಿ ಸಂರಕ್ಷಿತಾರಣ್ಯಗಳಾಗಿದ್ದು ಇಂತಹ ಕಡೆ ಜನ ಸಂಚರಿಸುವುದರಿಂದ ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ. ಕೆಲವರು ಅಲ್ಲಿಯೇ ಟೆಂಟ್‌ ಹಾಕಿ ಉಳಿಯುತ್ತಿರುವುದು ಅಲ್ಲಿರುವ ಸಾವಿರಾರು ಅಪರೂಪದ ಜೀವ ಸಂಕುಲಕ್ಕೆ ಇದು ಮಾರಕವಾಗುತ್ತಿದೆ. ಹೀಗಾಗಿ ಅರಣ್ಯ ಇಲಾಖೆ ಈ ಬಗ್ಗೆ ಸಮಗ್ರ ಅಧ್ಯಯನ ನಡೆಸಿ ಪರಿಸರಕ್ಕೆ ಮಾರಕವಾಗದಂತೆ ನಿರ್ಧಾರ ಕೈಗೊಳ್ಳಲಿದೆ.

ವಾರಾಂತ್ಯದಲ್ಲಿ ಸುಮಾರು 400 ರಿಂದ 500 ಮಂದಿ ಭೇಟಿ ನೀಡುತ್ತಿದ್ದು ಈ ಪರ್ವತಕ್ಕೆ ವಾರಗಳ ಹಿಂದೆ ಸುಬ್ರಹ್ಮಣ್ಯದ ಮೂಲಕ ಸಾವಿರಾರು ಮಂದಿ ಹೋಗಿದ್ದು ಇದರಿಂದ ಟಿಕೆಟ್‌ ಕೌಂಟರ್‌ನಲ್ಲಿ ನೂಕು ನುಗ್ಗಲು ಉಂಟಾದ ವೀಡಿಯೋ ವೈರಲ್‌ ಆಗಿತ್ತು. ಈ ವಿಚಾರ ಅರಣ್ಯ ಸಚಿವ ಈಶ್ವರ ಖಂಡ್ರೆ ಗಮನಕ್ಕೆ ಬಂದು ರಾಜ್ಯದ ಎಲ್ಲಾ ಟ್ರಕ್ಕಿಂಗ್‌ ಪಾಯಿಂಟ್‌ಗಳಲ್ಲಿಯೂ ಎಸ್‌ಒಪಿ ರೂಪಿಸುವ ಅಗತ್ಯವಿದ್ದು, ಅಲ್ಲಿಯವರೆಗೂ ಅನ್‌ಲೈನ್‌ ಬುಕ್ಕಿಂಗ್‌ ಇಲ್ಲದ ತಾಣಗಳಲ್ಲಿ ಟ್ರಕ್ಕಿಂಗ್‌ ನಿರ್ಬಂಧಿಸುವಂತೆ ಸೂಚಿಸಿದ್ದರು. ಅದರಂತೆ ಇದೀಗ ಕುಮಾರ ಪರ್ವತ ಪ್ರವೇಶ ಸ್ಥಳದಲ್ಲೂ ಅರಣ್ಯ ಇಲಾಖೆ ಪ್ರವಾಸಿಗರ ಎಂಟ್ರಿಗೆ ನಿರ್ಬಂಧ ವಿಧಿಸಿರುವ ಬ್ಯಾನರ್ ಅಳವಡಿಸಿದೆ.

ಕುಮಾರ ಪರ್ವತದಲ್ಲಿ ಅರಣ್ಯ, ಹುಲ್ಲುಗಾವಲು ಸಂಪೂರ್ಣವಾಗಿ ಒಣಗಿರುವುದರಿಂದ ಈ ಅವಧಿಯಲ್ಲಿ ವನ್ಯಧಾಮದೊಳಗೆ ಸಾರ್ವಜನಿಕರು ಪ್ರವೇಶಿಸಿ ಚಟುವಟಿಕೆ ನಡೆಸಿದರೆ ವನ್ಯಧಾಮಕ್ಕೆ ಬೆಂಕಿ ಬೀಳುವ ಸಾಧ್ಯತೆ ಮತ್ತು ಚಾರಣಿಗರಿಗೂ ಅಪಾಯ ಇದೆ ಎಂಬ ಕಾರಣಕ್ಕಾಗಿ ಪ್ರವಾಸಿಗರಿಗೆ ನಿಷೇಧಿಸಲಾಗಿದೆ ಎಂದು ಹೇಳಿದ್ದಾರೆ.

Vishwa News 24

Recent Posts

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 minutes ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

51 minutes ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 hour ago

ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! vishwanews24

ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…

1 hour ago

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ – vishwanews24

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ ಕೊಪ್ಪಳ: ಗೂಡ್ಸ್‌ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…

2 hours ago

ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು – vishwanews24

ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ…

2 hours ago