Featured

ಸುಬ್ರಹ್ಮಣ್ಯ :  ಕುಮಾರ ಪರ್ವತಕ್ಕೆ ಚಾರಣಿಗರ ಪ್ರವೇಶಕ್ಕೆ ನಿಷೇಧ ; ಆದೇಶ ಉಲ್ಲಂಘಿಸಿದರೆ ಕಠಿಣ ಕ್ರಮ : ಅರಣ್ಯ ಇಲಾಖೆ ಎಚ್ಚರಿಕೆ – Vishwanews24

ಸುಬ್ರಹ್ಮಣ್ಯ :  ಕುಮಾರ ಪರ್ವತಕ್ಕೆ ಚಾರಣಿಗರ ಪ್ರವೇಶಕ್ಕೆ ನಿಷೇಧ ; ಆದೇಶ ಉಲ್ಲಂಘಿಸಿದರೆ ಕಠಿಣ ಕ್ರಮ : ಅರಣ್ಯ ಇಲಾಖೆ ಎಚ್ಚರಿಕೆ

ಸುಬ್ರಹ್ಮಣ್ಯ (Vishwanews24): ಕರಾವಳಿಯ ಕುಮಾರ ಪರ್ವತಕ್ಕೆ ಚಾರಣಿಗರ ಪ್ರವೇಶಕ್ಕೆ ನಿಷೇಧ ವಿಧಿಸಲಾಗಿದ್ದು ಆದೇಶ ಉಲ್ಲಂಘಿಸಿದವರಿಗೆ ಅರಣ್ಯ ಇಲಾಖೆ ಕಠಿಣ ಕ್ರಮದ ಎಚ್ಚರಿಕೆಯನ್ನು ನೀಡಿದೆ.

ಕುಮಾರ ಪರ್ವತ ಪ್ರದೇಶದಲ್ಲಿ ವನ್ಯಜೀವಿ ಸಂರಕ್ಷಿತಾರಣ್ಯಗಳಾಗಿದ್ದು ಇಂತಹ ಕಡೆ ಜನ ಸಂಚರಿಸುವುದರಿಂದ ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ. ಕೆಲವರು ಅಲ್ಲಿಯೇ ಟೆಂಟ್‌ ಹಾಕಿ ಉಳಿಯುತ್ತಿರುವುದು ಅಲ್ಲಿರುವ ಸಾವಿರಾರು ಅಪರೂಪದ ಜೀವ ಸಂಕುಲಕ್ಕೆ ಇದು ಮಾರಕವಾಗುತ್ತಿದೆ. ಹೀಗಾಗಿ ಅರಣ್ಯ ಇಲಾಖೆ ಈ ಬಗ್ಗೆ ಸಮಗ್ರ ಅಧ್ಯಯನ ನಡೆಸಿ ಪರಿಸರಕ್ಕೆ ಮಾರಕವಾಗದಂತೆ ನಿರ್ಧಾರ ಕೈಗೊಳ್ಳಲಿದೆ.

ವಾರಾಂತ್ಯದಲ್ಲಿ ಸುಮಾರು 400 ರಿಂದ 500 ಮಂದಿ ಭೇಟಿ ನೀಡುತ್ತಿದ್ದು ಈ ಪರ್ವತಕ್ಕೆ ವಾರಗಳ ಹಿಂದೆ ಸುಬ್ರಹ್ಮಣ್ಯದ ಮೂಲಕ ಸಾವಿರಾರು ಮಂದಿ ಹೋಗಿದ್ದು ಇದರಿಂದ ಟಿಕೆಟ್‌ ಕೌಂಟರ್‌ನಲ್ಲಿ ನೂಕು ನುಗ್ಗಲು ಉಂಟಾದ ವೀಡಿಯೋ ವೈರಲ್‌ ಆಗಿತ್ತು. ಈ ವಿಚಾರ ಅರಣ್ಯ ಸಚಿವ ಈಶ್ವರ ಖಂಡ್ರೆ ಗಮನಕ್ಕೆ ಬಂದು ರಾಜ್ಯದ ಎಲ್ಲಾ ಟ್ರಕ್ಕಿಂಗ್‌ ಪಾಯಿಂಟ್‌ಗಳಲ್ಲಿಯೂ ಎಸ್‌ಒಪಿ ರೂಪಿಸುವ ಅಗತ್ಯವಿದ್ದು, ಅಲ್ಲಿಯವರೆಗೂ ಅನ್‌ಲೈನ್‌ ಬುಕ್ಕಿಂಗ್‌ ಇಲ್ಲದ ತಾಣಗಳಲ್ಲಿ ಟ್ರಕ್ಕಿಂಗ್‌ ನಿರ್ಬಂಧಿಸುವಂತೆ ಸೂಚಿಸಿದ್ದರು. ಅದರಂತೆ ಇದೀಗ ಕುಮಾರ ಪರ್ವತ ಪ್ರವೇಶ ಸ್ಥಳದಲ್ಲೂ ಅರಣ್ಯ ಇಲಾಖೆ ಪ್ರವಾಸಿಗರ ಎಂಟ್ರಿಗೆ ನಿರ್ಬಂಧ ವಿಧಿಸಿರುವ ಬ್ಯಾನರ್ ಅಳವಡಿಸಿದೆ.

ಕುಮಾರ ಪರ್ವತದಲ್ಲಿ ಅರಣ್ಯ, ಹುಲ್ಲುಗಾವಲು ಸಂಪೂರ್ಣವಾಗಿ ಒಣಗಿರುವುದರಿಂದ ಈ ಅವಧಿಯಲ್ಲಿ ವನ್ಯಧಾಮದೊಳಗೆ ಸಾರ್ವಜನಿಕರು ಪ್ರವೇಶಿಸಿ ಚಟುವಟಿಕೆ ನಡೆಸಿದರೆ ವನ್ಯಧಾಮಕ್ಕೆ ಬೆಂಕಿ ಬೀಳುವ ಸಾಧ್ಯತೆ ಮತ್ತು ಚಾರಣಿಗರಿಗೂ ಅಪಾಯ ಇದೆ ಎಂಬ ಕಾರಣಕ್ಕಾಗಿ ಪ್ರವಾಸಿಗರಿಗೆ ನಿಷೇಧಿಸಲಾಗಿದೆ ಎಂದು ಹೇಳಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

20 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

22 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

23 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

23 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

23 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

23 hours ago