ಸುಬ್ರಹ್ಮಣ್ಯ: ಗಾಳಿ – ಮಳೆಗೆ ಮರ ಬಿದ್ದು ವೃದ್ಧೆಯೋರ್ವರು ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ಮೆ ೧೫ ರ ಸಂಜೆ ಸಂಭವಿಸಿದೆ.
ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ ಬಸವನಮೂಲೆ ನಿವಾಸಿ ದಿ|ಶೇಷಪ್ಪ ಎಂಬವರ ಪತ್ನಿ ಮೀನಾಕ್ಷಿ (65) ಮೃತರು. ಮೃತರು ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
ಮೀನಾಕ್ಷಿ ಅವರು ತಮ್ಮ ತೋಟದಲ್ಲಿ ಕಟ್ಟಿದ್ದ ದನವನ್ನು ಬಿಡಿಸಿ ತರಲು ಸಂಜೆ ತೆರಳಿದ್ದ ವೇಳೆ ಗಾಳಿ-ಮಳೆಗೆ ತೋಟದಲ್ಲಿನ ಉಪ್ಪಳಿಗೆ ಮರವೊಂದು ಇವರ ಮೇಲೆ ಬಿದ್ದಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಮೀನಾಕ್ಷಿ ಸ್ಥಳದಲ್ಲೇ ಮೃತರಾಗಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಕಡಬ ಕಂದಾಯ ನಿರೀಕ್ಷಕ ಪ್ರಥ್ವಿರಾಜ್ ಸೇರಿದಂತೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…