Featured

ಸುಬ್ರಹ್ಮಣ್ಯ: ಗ್ರಾ.ಪಂ ಸದಸ್ಯೆ ನಾಪತ್ತೆ ಪ್ರಕರಣ – ಪ್ರಿಯಕರನೊಂದಿಗೆ ಠಾಣೆಗೆ ಹಾಜರು – Vishwanews24

ಸುಬ್ರಹ್ಮಣ್ಯ: ಗ್ರಾ.ಪಂ ಸದಸ್ಯೆ ನಾಪತ್ತೆ ಪ್ರಕರಣ – ಪ್ರಿಯಕರನೊಂದಿಗೆ ಠಾಣೆಗೆ ಹಾಜರು

ಸುಬ್ರಹ್ಮಣ್ಯ : ಎರಡು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್‌ ಸದಸ್ಯೆ ಭಾರತಿ ಮೂಕಮಲೆ ಅವರು ಜ. 5ರಂದು ಸುಬ್ರಹ್ಮಣ್ಯ ಠಾಣೆಗೆ ಪ್ರಿಯಕರನೊಂದಿಗೆ ಹಾಜರಾಗಿ ಆತನೊಂದಿಗೆ ವಾಪಾಸ್ ತೆರಳಿದ್ದಾರೆ.

ಭಾರತಿ ಮೂಕಮಲೆ ತನ್ನ ಪ್ರಿಯಕರ ನಂದನ್‌ ಮತ್ತು ಅವರ ನ್ಯಾಯವಾದಿ ಮುಖಾಂತರ ಸುಬ್ರಹ್ಮಣ್ಯ ಠಾಣೆಗೆ ಹಾಜರಾಗಿ ಹೇಳಿಕೆ ನೀಡಿದ್ದಾರೆ. ನಂದನ್‌ನೊಂದಿಗೆ ಜೀವನ ಮುಂದುವರೆಸುವ ನಿರ್ಧಾರ ಪ್ರಕಟಿಸಿದ್ದಾರೆ. ಠಾಣೆಯಲ್ಲಿ ತನ್ನ ನಿರ್ಧಾರವನ್ನು ಲಿಖೀತ ರೂಪದಲ್ಲಿ ಬರೆದು ಕೊಟ್ಟು ನಂದನ್‌ನೊಂದಿಗೆ ತೆರಳಿದ್ದಾರೆ.

ತನ್ನಿಬ್ಬರು ಸಣ್ಣ ಹೆಣ್ಣು ಮಕ್ಕಳನ್ನು, ಪತಿಯನ್ನು ತೊರೆದು ಎರಡು ತಿಂಗಳ ಹಿಂದೆ ಕಾಣೆಯಾಗಿದ್ದ ಭಾರತಿ ಮತ್ತವರ ಪ್ರಿಯಕರ ನಂದನ್‌ ಎಷ್ಟೇ ಹುಡುಕಾಡಿದರೂ ಸಿಕ್ಕಿರಲಿಲ್ಲ. ತಿಂಗಳ ಹಿಂದೆ ವೀಡಿಯೋ ಮಾಡಿ ಹರಿಯಬಿಟ್ಟಿದ್ದ ಭಾರತಿ, ತಾನು ಪ್ರಿಯಕರನೊಂದಿಗೆ ಇರುವುದಾಗಿ ತಿಳಿಸಿದ್ದು, ತನ್ನನ್ನು ಹುಡುಕುವ ಕಾರ್ಯ ಮಾಡಬೇಡಿ ಎಂದು ಕೇಳಿ ಕೊಂಡಿದ್ದರು.

ಅದರೂ ಸುಬ್ರಹ್ಮಣ್ಯ ಪೊಲೀಸರು ಅವರ ಇರುವಿಕೆಯನ್ನು ಪತ್ತೆ ಮಾಡಲು ಕಾರ್ಯಾಚರಣೆ ನಡೆಸಿದ್ದರು. ಆದರೆ ಆ ಕಾರ್ಯ ಫ‌ಲಪ್ರದವಾಗಿರಲಿಲ್ಲ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

18 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

18 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago