ಸುಬ್ರಹ್ಮಣ್ಯ: ಕಡಬ ತಾಲೂಕಿನ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ. 10ರಿಂದ 24ರ ವರೆಗೆ ಚಂಪಾಷಷ್ಠಿ ಮಹೋತ್ಸವ, ವಾರ್ಷಿಕ ಉತ್ಸವಾದಿಗಳು ಜರಗಲಿವೆ.
ಡಿ. 9ರಂದು ಮೂಲ ಮೃತ್ತಿಕಾ ಪ್ರಸಾದ ವಿತರಣೆ ಜರಗಲಿದೆ. ಡಿ. 10ರಿಂದ 12ರ ವರೆಗೆ ಭಕ್ತರು ಕ್ಷೇತ್ರಕ್ಕೆ ಹಸುರು ಕಾಣಿಕೆ ಸಮರ್ಪಿಸಬಹುದು.
ಡಿ. 10ರಂದು ಕೊಪ್ಪರಿಗೆ ಏರುವ ಮೂಲಕ ಚಂಪಾಷಷ್ಠಿ ಮಹೋತ್ಸವ ಆರಂಭಗೊಳ್ಳಲಿದೆ. ಡಿ. 16ರಂದು ರಾತ್ರಿ ಹೂವಿನ ತೇರಿನ ಉತ್ಸವ, ಡಿ. 17ರಂದು ರಾತ್ರಿ ಪಂಚಮಿ ರಥೋತ್ಸವ, ತೈಲಾಭ್ಯಂಜನ, ಡಿ. 18ರಂದು ಪ್ರಾತಃಕಾಲ ಚಂಪಾಷಷ್ಠಿ ಮಹಾರಥೋತ್ಸವ, ಡಿ. 19ರಂದು ಅವಭೃಥ ಉತ್ಸವ, ನೌಕಾವಿಹಾರ, ಡಿ. 24ರಂದು ಕೊಪ್ಪರಿಗೆ ಇಳಿಯುವುದು, ರಾತ್ರಿ ನೀರುಬಂಡಿ ಉತ್ಸವ, ದೈವಗಳ ನಡಾವಳಿ ಜರಗಲಿದೆ. 2024ರ ಜ. 16ರಂದು ಕಿರುಷಷ್ಠಿ ಮಹೋತ್ಸವ ಜರಗಲಿದೆ.
ಭಕ್ತರಿಗೆ ಸೂಚನೆ
ಡಿ. 9ರಂದು ಮೂಲಮೃತ್ತಿಕಾ ಪ್ರಸಾದ ತೆಗೆ ಯುವ ಕಾರ್ಯಕ್ರಮ ಇರುವುದರಿಂದ ಭಕ್ತರಿಗೆ ಬೆಳಗ್ಗಿನಿಂದ ಅಪರಾಹ್ನ ಗಂಟೆ 2ರ ವರೆಗೆ ಶ್ರೀ ದೇವರ ದರ್ಶನ ಹಾಗೂ ಸೇವೆ ನೆರವೇರಿಸಲು ಅವಕಾಶ ಇಲ್ಲ ಎಂದು ಪ್ರಕಟನೆ ತಿಳಿಸಿದೆ.
ಡಿ. 8ರಿಂದ ಸರ್ಪಸಂಸ್ಕಾರ ಸೇವೆ ಇಲ್ಲ
ಚಂಪಾಷಷ್ಠಿ ಮಹೋತ್ಸವ ನಿಮಿತ್ತ ಡಿ. 8ರಿಂದ 24ರ ವರೆಗೆ ಸರ್ಪ ಸಂಸ್ಕಾರ ಸೇವೆ, ಡಿ. 10ರಿಂದ 24ರ ವರೆಗೆ ಸಾಯಂಕಾಲದ ಆಶ್ಲೇಷಾ ಬಲಿ ಸೇವೆ ನೆರವೇರುವುದಿಲ್ಲ. ಡಿ. 12ರ ಲಕ್ಷದೀಪೋತ್ಸವ, ಡಿ. 16ರ ಚೌತಿ, ಡಿ. 17ರ ಪಂಚಮಿ ದಿನಗಳಲ್ಲಿ ಭಕ್ತರ ಪ್ರಾರ್ಥನೆ ಸೇವೆ ರಾತ್ರಿ ಹೊತ್ತಿನಲ್ಲಿ ಇರುವುದಿಲ್ಲ. ಡಿ. 18ರ ಚಂಪಾಷಷ್ಠಿಯಂದು ಮಧ್ಯಾಹ್ನ ಪ್ರಾರ್ಥನೆ, ಡಿ. 18ರಂದು ಚಂಪಾಷಷ್ಠಿ ದಿನ ಆಶ್ಲೇಷಾ ಬಲಿ ಮತ್ತು ನಾಗಪ್ರತಿಷ್ಠೆ ಸೇವೆಗಳು ಇರುವುದಿಲ್ಲ. ಡಿ. 12ರ ಲಕ್ಷದೀಪೋತ್ಸವ), ಡಿ. 16ರಂದು (ಚೌತಿ), ಡಿ. 17ರಂದು (ಪಂಚಮಿ), ಡಿ. 18ರಂದು (ಚಂಪಾಷಷ್ಠಿ) ಮತ್ತು ಡಿ. 27ರಂದು ಪಂಚಾಮೃತ ಮಹಾಭಿಷೇಕ ಸೇವೆ ನೆರವೇರುವುದಿಲ್ಲ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…