ಸುಬ್ರಹ್ಮಣ್ಯ,: ಇತ್ತೀಚೆಗೆ ನಾಪತ್ತೆಯಾದ ಸುಬ್ರಹ್ಮಣ್ಯ ಗ್ರಾ.ಪಂ. ಸದಸ್ಯೆ ಭಾರತಿ ಮೂಕಮಲೆ (33) ವಿಡಿಯೋ ಒಂದು ವೈರಲ್ ಆಗುತ್ತಿದ್ದು, ನನ್ನನ್ನು ಯಾರು ಅಪಹರಿಸಿಲ್ಲ, ನಾನು ಪ್ರೀತಿಸಿದವರೊಂದಿಗೆ ಬಂದಿದ್ದೇನೆ ಎಂದು ಹೇಳಿಕೊಂಡಿದ್ದಾರೆ.
ಐನೆಕಿದು ಗ್ರಾಮದ ಮೂಕಮಲೆ ಮನೆ ನಿವಾಸಿ ಶಶಿಕಾಂತ್ ಎಂಬವರ ಪತ್ನಿ ಭಾರತಿ ಮೂಕಮಲೆ (33) ಅವರು ಅ. 29ರಂದು ನಾಪತ್ತೆಯಾಗಿದ್ದು. ಶಶಿಕಾಂತ್ ಅವರು ಅ. 29ರ ಮಧ್ಯಾಹ್ನ ತನಕ ಕೆಲಸಕ್ಕೆ ಹೋಗಿ ಬಳಿಕ ಮನೆಗೆ ಹೋಗಿ ತಾಯಿ ಹಾಗೂ ಅತ್ತೆಗೆ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಕೊಡಿಸಿ ವಾಪಸ್ ರಾತ್ರಿ ಮನೆಗೆ ಬಂದ ವೇಳೆ ಪತ್ನಿ ಮನೆಯಲ್ಲಿ ಇರಲಿಲ್ಲ. ಆ ಬಳಿಕ ಮಕ್ಕಳಲ್ಲಿ ವಿಚಾರಿಸಿದಾಗ ಅವರು ಎಲ್ಲಿಯೋ ಹೋಗಿ ಬರುವುದಾಗಿ ತಿಳಿಸಿ ಹೋಗಿರುತ್ತಾಳೆ ಎಂದು ತಿಳಿಸಿದ್ದು, ಬಳಿಕ ಪತ್ನಿಗೆ ಕರೆ ಮಾಡಿದಾಗ ಫೋನ್ ಸ್ವೀಚ್ ಆಫ್ ಆಗಿತ್ತು. ಈ ಬಗ್ಗೆ ಸಂಬಂಧಿಕರಲ್ಲಿ, ನೆರೆಕರೆಯವರಲ್ಲಿ ವಿಚಾರಿಸಿದಾಗ ಎಲ್ಲಿಯೂ ಸಿಗಲಿಲ್ಲ ಎಂದು ಪತಿ ಶಶಿಕಾಂತ್ ಅವರು ಸುಬ್ರಹ್ಮಣ್ಯ ಠಾಣೆಯಲ್ಲಿ ನೀಡಿದ ದೂರಿನಲ್ಲಿ ತಿಳಿಸಲಾಗಿತ್ತು.
ಭಾರತಿ ನಾಪತ್ತೆಯಾಗಿ ದಿನ 20 ಕಳೆದರೂ ಪತ್ತೆಯಾಗದ ಹಿನ್ನಲೆ ಸುಬ್ರಹ್ಮಣ್ಯ ಅಧ್ಯಕ್ಷ ಸದಸ್ಯರ ತಂಡ ಪೊಲೀಸ್ ಠಾಣೆಗೆ ಬೇಟಿ ಇತ್ತು ಶೀಘ್ರ ಪತ್ತೆಗೆ ಮನವಿ ಸಲ್ಲಿಸಿತ್ತು.
ಇದೀಗ ಭಾರತಿ ಅವರ ವಿಡಿಯೋ ವೈರಲ್ ಆಗಿದ್ದು, ಅದರಲ್ಲಿ ” ನಾನು ನಾನಾಗಿಯೇ ಬಂದಿದ್ದೇನೆ. ನನ್ನನ್ನು ಯಾರೂ ಅಪಹರಿಸಿಲ್ಲ. ನಾನು ಅವರನ್ನು ಮನೆಯ ಹತ್ತಿರ ಬರಲು ಹೇಳಿದ್ದೆ. ಅವರು ಬಂದು ನನ್ನನ್ನು ಕರೆದುಕೊಂಡು ಹೋದರು. 5 ವರ್ಷದಿಂದ ನಾನು ಲವ್ ಮಾಡ್ತಾ ಇದ್ದೆ. ಈಗಲೂ ಮಾಡ್ತಾ ಇದ್ದೇನೆ. ಮದುವೆಗೆ ಮುಂಚೆನೂ ಲವ್ ಮಾಡ್ತಿದ್ದೆ. ಇದರಿಂದಾಗಿ ಯಾರಿಗೂ ತೊಂದರೆ ಕೊಡಬೇಡಿ. ಯಾರತ್ರ ಕೇಳುವುದೂ ಬೇಡ. ನಮಗೆ ತೊಂದರೆ ಕೊಡಬೇಡಿ. ಹಾಗೇನಾದ್ರೂ ಮಾಡಿದ್ರೆ ನಾವಿಬ್ಬರೂ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ. ನನ್ನನ್ನು ಯಾರೂ ಕಿಡ್ನಾಪ್ ಮಾಡಿಲ್ಲ. ನಾನು ಖುಷಿಯಾಗಿಯೇ ಇದ್ದೇನೆ. ಆಮೇಲೆ ಏನಾದ್ರೂ ಆದರೆ ನೀವೇ ಜವಾಬ್ದಾರರು ಎಂದು ಅವರು ವೀಡಿಯೋದಲ್ಲಿ ಹೇಳಿಕೊಂಡಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…