Featured

ಸುಬ್ರಹ್ಮಣ್ಯ : ನನ್ನನ್ನು ಯಾರು ಅಪಹರಿಸಿಲ್ಲ, ನಾನು ಪ್ರೀತಿಸಿದವರೊಂದಿಗೆ ಬಂದಿದ್ದೇನೆ : ನಾಪತ್ತೆಯಾದ ಗ್ರಾ.ಪಂ. ಸದಸ್ಯೆಯ ವಿಡಿಯೋ ವೈರಲ್ – Vishwanews24

ಸುಬ್ರಹ್ಮಣ್ಯ : ನನ್ನನ್ನು ಯಾರು ಅಪಹರಿಸಿಲ್ಲ, ನಾನು ಪ್ರೀತಿಸಿದವರೊಂದಿಗೆ ಬಂದಿದ್ದೇನೆ : ನಾಪತ್ತೆಯಾದ ಗ್ರಾ.ಪಂ. ಸದಸ್ಯೆಯ ವಿಡಿಯೋ ವೈರಲ್

ಸುಬ್ರಹ್ಮಣ್ಯ,: ಇತ್ತೀಚೆಗೆ ನಾಪತ್ತೆಯಾದ ಸುಬ್ರಹ್ಮಣ್ಯ ಗ್ರಾ.ಪಂ. ಸದಸ್ಯೆ ಭಾರತಿ ಮೂಕಮಲೆ (33) ವಿಡಿಯೋ ಒಂದು ವೈರಲ್ ಆಗುತ್ತಿದ್ದು, ನನ್ನನ್ನು ಯಾರು ಅಪಹರಿಸಿಲ್ಲ, ನಾನು ಪ್ರೀತಿಸಿದವರೊಂದಿಗೆ ಬಂದಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

ಐನೆಕಿದು ಗ್ರಾಮದ ಮೂಕಮಲೆ ಮನೆ ನಿವಾಸಿ ಶಶಿಕಾಂತ್‌ ಎಂಬವರ ಪತ್ನಿ ಭಾರತಿ ಮೂಕಮಲೆ (33) ಅವರು ಅ. 29ರಂದು ನಾಪತ್ತೆಯಾಗಿದ್ದು. ಶಶಿಕಾಂತ್‌ ಅವರು ಅ. 29ರ ಮಧ್ಯಾಹ್ನ ತನಕ ಕೆಲಸಕ್ಕೆ ಹೋಗಿ ಬಳಿಕ ಮನೆಗೆ ಹೋಗಿ ತಾಯಿ ಹಾಗೂ ಅತ್ತೆಗೆ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಕೊಡಿಸಿ ವಾಪಸ್‌ ರಾತ್ರಿ ಮನೆಗೆ ಬಂದ ವೇಳೆ ಪತ್ನಿ ಮನೆಯಲ್ಲಿ ಇರಲಿಲ್ಲ. ಆ ಬಳಿಕ ಮಕ್ಕಳಲ್ಲಿ ವಿಚಾರಿಸಿದಾಗ ಅವರು ಎಲ್ಲಿಯೋ ಹೋಗಿ ಬರುವುದಾಗಿ ತಿಳಿಸಿ ಹೋಗಿರುತ್ತಾಳೆ ಎಂದು ತಿಳಿಸಿದ್ದು, ಬಳಿಕ ಪತ್ನಿಗೆ ಕರೆ ಮಾಡಿದಾಗ ಫೋನ್‌ ಸ್ವೀಚ್‌ ಆಫ್‌ ಆಗಿತ್ತು. ಈ ಬಗ್ಗೆ ಸಂಬಂಧಿಕರಲ್ಲಿ, ನೆರೆಕರೆಯವರಲ್ಲಿ ವಿಚಾರಿಸಿದಾಗ ಎಲ್ಲಿಯೂ ಸಿಗಲಿಲ್ಲ ಎಂದು ಪತಿ ಶಶಿಕಾಂತ್‌ ಅವರು ಸುಬ್ರಹ್ಮಣ್ಯ ಠಾಣೆಯಲ್ಲಿ ನೀಡಿದ ದೂರಿನಲ್ಲಿ ತಿಳಿಸಲಾಗಿತ್ತು.

✴️ ಧರ್ಮಸ್ಥಳ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿ ಮಂಜುನಾಥ ಸ್ವಾಮಿ ದರ್ಶನ ಪಡೆದ ಕೇಂದ್ರ ಸಚಿವೆ ಸ್ಮೃತಿ ಇರಾನಿ – Vishwanews24

ಭಾರತಿ ನಾಪತ್ತೆಯಾಗಿ ದಿನ 20 ಕಳೆದರೂ ಪತ್ತೆಯಾಗದ ಹಿನ್ನಲೆ ಸುಬ್ರಹ್ಮಣ್ಯ ಅಧ್ಯಕ್ಷ ಸದಸ್ಯರ ತಂಡ ಪೊಲೀಸ್ ಠಾಣೆಗೆ ಬೇಟಿ ಇತ್ತು ಶೀಘ್ರ ಪತ್ತೆಗೆ ಮನವಿ ಸಲ್ಲಿಸಿತ್ತು.

ಇದೀಗ ಭಾರತಿ ಅವರ ವಿಡಿಯೋ ವೈರಲ್ ಆಗಿದ್ದು, ಅದರಲ್ಲಿ ” ನಾನು ನಾನಾಗಿಯೇ ಬಂದಿದ್ದೇನೆ. ನನ್ನನ್ನು ಯಾರೂ ಅಪಹರಿಸಿಲ್ಲ. ನಾನು ಅವರನ್ನು ಮನೆಯ ಹತ್ತಿರ ಬರಲು ಹೇಳಿದ್ದೆ. ಅವರು ಬಂದು ನನ್ನನ್ನು ಕರೆದುಕೊಂಡು ಹೋದರು. 5 ವರ್ಷದಿಂದ ನಾನು ಲವ್ ಮಾಡ್ತಾ ಇದ್ದೆ. ಈಗಲೂ ಮಾಡ್ತಾ ಇದ್ದೇನೆ. ಮದುವೆಗೆ ಮುಂಚೆನೂ ಲವ್ ಮಾಡ್ತಿದ್ದೆ. ಇದರಿಂದಾಗಿ ಯಾರಿಗೂ ತೊಂದರೆ ಕೊಡಬೇಡಿ. ಯಾರತ್ರ ಕೇಳುವುದೂ ಬೇಡ. ನಮಗೆ ತೊಂದರೆ ಕೊಡಬೇಡಿ. ಹಾಗೇನಾದ್ರೂ ಮಾಡಿದ್ರೆ ನಾವಿಬ್ಬರೂ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ. ನನ್ನನ್ನು ಯಾರೂ ಕಿಡ್ನಾಪ್ ಮಾಡಿಲ್ಲ. ನಾನು ಖುಷಿಯಾಗಿಯೇ ಇದ್ದೇನೆ. ಆಮೇಲೆ ಏನಾದ್ರೂ ಆದರೆ ನೀವೇ ಜವಾಬ್ದಾರರು ಎಂದು ಅವರು ವೀಡಿಯೋದಲ್ಲಿ ಹೇಳಿಕೊಂಡಿದ್ದಾರೆ.

🌀 ಉಡುಪಿ :ಪರೇಶ್ ಮೇಸ್ತ ಪ್ರಕರಣ :- ಬಿಜೆಪಿಗರ ನೈಜ ಬಣ್ಣ ಬಯಲು ಮಾಡುವ ಉದ್ದೇಶದಿಂದ ನ 24ರಂದು ಕುಮಟಾದಲ್ಲಿ 🌐 ಕಾಂಗ್ರೆಸ್ ನಿಂದ ಬೃಹತ್ ಸಮಾವೇಶ : ಐವನ್ ಡಿ’ಸೋಜಾ – Vishwanews24

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

3 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

4 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

6 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

6 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

7 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

7 hours ago