ಸುಬ್ರಹ್ಮಣ್ಯ: ಸುಪ್ರಸಿದ್ದ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿಯ ಸಂಭ್ರಮ ಮನೆಮಾಡಿದೆ. ಡಿ.1ರಂದು ಕೊಪ್ಪರಿಗೆ ಏರುವ ಮೂಲಕ ಜಾತ್ರೋತ್ಸವ ಆರಂಭವಾಗಿದ್ದು, ನಿನ್ನೆ ರಾತ್ರಿ ಪಂಚಮಿ ರಥೋತ್ಸವ ನಡೆಯಿತು. ರಾತ್ರಿ ದೇವರಿಗೆ ಪಲ್ಲಕ್ಕಿ ಉತ್ಸವ, ಬಂಡಿ ಉತ್ಸವ ದೇವಸ್ಥಾನದ ಹೊರಾಂಗಣದಲ್ಲಿ ವೈಭವದಿಂದ ನೆರವೇರಿತು.
ತಡರಾತ್ರಿ ನಡೆದ ಪಂಚಮಿ ರಥೋತ್ಸವವನ್ನು ಸಾವಿರಾರು ಭಕ್ತರು ಕಣ್ತುಂಬಿಕೊಂಡರು. ಪಂಚಮಿ ರಥವೂ ಬಹಳ ವಿಶೇಷವಾಗಿದ್ದು, ವಿದ್ಯುತ್ ದೀಪಾಲಂಕಾರದಿಂದ ರಾರಾಜಿಸಿದ ರಥದಲ್ಲಿ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಉತ್ಸವ ಮೂರ್ತಿಯನ್ನಿಟ್ಟು ತೇರನ್ನು ಎಳೆಯಲಾಯಿತು.
ರಥೋತ್ಸವದ ಬಳಿಕ ಸವಾರಿಕಟ್ಟೆಯಲ್ಲಿ ಕಟ್ಟೆ ಪೂಜೆ ಮತ್ತು ಆಕರ್ಷಣೀಯ “ಕುಕ್ಕೆ ಬೆಡಿ” ಪ್ರದರ್ಶನಗೊಂಡಿತು.ಕೊರೊನಾ ಕಾರಣದಿಂದ ಮುನ್ನೆಚ್ಚರಿಕೆ ಕ್ರಮ ಪಾಲಿಸಿಕೊಂಡು ರಥೋತ್ಸವ ನಡೆಸಲಾಯಿತು. ಹರಕೆಯ ಎಡೆಸ್ನಾನ ರದ್ದುಗೊಳಿಸಿ, ಬೀದಿ ಮಡೆಸ್ನಾನಕ್ಕೆ ಮಾತ್ರ ಅವಕಾಶ ನೀಡಲಾಗಿತ್ತು
ಚಂಪಾ ಷಷ್ಠೀ ರಥೋತ್ಸವದ ಮತ್ತೊಂದು ಪ್ರಮುಖ ಆಕರ್ಷಣೆ ಎಂದರೆ ಅದು ಮಡೆ ಮಡೆ ಸ್ನಾನ. ಶ್ರೀ ಕ್ಷೇತ್ರದ ಪುಣ್ಯ ನದಿ ಕುಮಾರಧಾರದಿಂದ ಸನ್ನಿಧಾನದವರೆಗೆ ಸುಮಾರು ೫ ಕಿ.ಮೀ ಉರುಳು ಸೇವೆ ಮಾಡುವ ಮೂಲಕ ಭಕ್ತಾದಿಗಳು ಹರಕೆ ಸಲ್ಲಿಸುವುದು ವಾಡಿಕೆ. ರಸ್ತೆಯಲ್ಲಿ ಈ ಭಕ್ತಾದಿಗಳಿಗೆಂದೇ ವಿಶೇಷವಾಗಿ ಉರುಳು ಸೇವೆ ಪಥವನ್ನು ನಿರ್ಮಾಣ ಮಾಡಲಾಗುತ್ತದೆ. ಕಲ್ಲು, ಮಣ್ಣಿನ ನಡುವೆ ಜಾಗಟೆ, ಶಂಖ, ವಿಷ಼ಲ್ ಮುಂತಾದವುಗಳ ಜೊತೆ, ಸುಬ್ರಹ್ಮಣ್ಯ ದೇವರ ನಾಮ ಸ್ಮರಣೆ ಮಾಡುತ್ತಾ ಭಕ್ತಾದಿಗಳು ಉರುಳು ಸೇವೆ ಮಾಡುತ್ತಾರೆ.
ಎಸ್ಎಸ್ಎಲ್ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ ಉಡುಪಿ : ಈ ಬಾರಿಯ ಎಸ್ಎಸ್ಎಲ್ಸಿ…
ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್ ಮಂಗಳೂರು : ಕರಾವಳಿ ಕರ್ನಾಟಕವು ಪ್ರಸ್ತುತ ತೀವ್ರ…
SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…
ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…
ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ…
ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…