ಸುಬ್ರಹ್ಮಣ್ಯ: ಸುಪ್ರಸಿದ್ದ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿಯ ಸಂಭ್ರಮ ಮನೆಮಾಡಿದೆ. ಡಿ.1ರಂದು ಕೊಪ್ಪರಿಗೆ ಏರುವ ಮೂಲಕ ಜಾತ್ರೋತ್ಸವ ಆರಂಭವಾಗಿದ್ದು, ನಿನ್ನೆ ರಾತ್ರಿ ಪಂಚಮಿ ರಥೋತ್ಸವ ನಡೆಯಿತು. ರಾತ್ರಿ ದೇವರಿಗೆ ಪಲ್ಲಕ್ಕಿ ಉತ್ಸವ, ಬಂಡಿ ಉತ್ಸವ ದೇವಸ್ಥಾನದ ಹೊರಾಂಗಣದಲ್ಲಿ ವೈಭವದಿಂದ ನೆರವೇರಿತು.
ತಡರಾತ್ರಿ ನಡೆದ ಪಂಚಮಿ ರಥೋತ್ಸವವನ್ನು ಸಾವಿರಾರು ಭಕ್ತರು ಕಣ್ತುಂಬಿಕೊಂಡರು. ಪಂಚಮಿ ರಥವೂ ಬಹಳ ವಿಶೇಷವಾಗಿದ್ದು, ವಿದ್ಯುತ್ ದೀಪಾಲಂಕಾರದಿಂದ ರಾರಾಜಿಸಿದ ರಥದಲ್ಲಿ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಉತ್ಸವ ಮೂರ್ತಿಯನ್ನಿಟ್ಟು ತೇರನ್ನು ಎಳೆಯಲಾಯಿತು.
ರಥೋತ್ಸವದ ಬಳಿಕ ಸವಾರಿಕಟ್ಟೆಯಲ್ಲಿ ಕಟ್ಟೆ ಪೂಜೆ ಮತ್ತು ಆಕರ್ಷಣೀಯ “ಕುಕ್ಕೆ ಬೆಡಿ” ಪ್ರದರ್ಶನಗೊಂಡಿತು.ಕೊರೊನಾ ಕಾರಣದಿಂದ ಮುನ್ನೆಚ್ಚರಿಕೆ ಕ್ರಮ ಪಾಲಿಸಿಕೊಂಡು ರಥೋತ್ಸವ ನಡೆಸಲಾಯಿತು. ಹರಕೆಯ ಎಡೆಸ್ನಾನ ರದ್ದುಗೊಳಿಸಿ, ಬೀದಿ ಮಡೆಸ್ನಾನಕ್ಕೆ ಮಾತ್ರ ಅವಕಾಶ ನೀಡಲಾಗಿತ್ತು
ಚಂಪಾ ಷಷ್ಠೀ ರಥೋತ್ಸವದ ಮತ್ತೊಂದು ಪ್ರಮುಖ ಆಕರ್ಷಣೆ ಎಂದರೆ ಅದು ಮಡೆ ಮಡೆ ಸ್ನಾನ. ಶ್ರೀ ಕ್ಷೇತ್ರದ ಪುಣ್ಯ ನದಿ ಕುಮಾರಧಾರದಿಂದ ಸನ್ನಿಧಾನದವರೆಗೆ ಸುಮಾರು ೫ ಕಿ.ಮೀ ಉರುಳು ಸೇವೆ ಮಾಡುವ ಮೂಲಕ ಭಕ್ತಾದಿಗಳು ಹರಕೆ ಸಲ್ಲಿಸುವುದು ವಾಡಿಕೆ. ರಸ್ತೆಯಲ್ಲಿ ಈ ಭಕ್ತಾದಿಗಳಿಗೆಂದೇ ವಿಶೇಷವಾಗಿ ಉರುಳು ಸೇವೆ ಪಥವನ್ನು ನಿರ್ಮಾಣ ಮಾಡಲಾಗುತ್ತದೆ. ಕಲ್ಲು, ಮಣ್ಣಿನ ನಡುವೆ ಜಾಗಟೆ, ಶಂಖ, ವಿಷ಼ಲ್ ಮುಂತಾದವುಗಳ ಜೊತೆ, ಸುಬ್ರಹ್ಮಣ್ಯ ದೇವರ ನಾಮ ಸ್ಮರಣೆ ಮಾಡುತ್ತಾ ಭಕ್ತಾದಿಗಳು ಉರುಳು ಸೇವೆ ಮಾಡುತ್ತಾರೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…