Featured

ಸುಭದ್ರ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಕೇಂದ್ರ ಬಿಜೆಪಿ ಸರ್ಕಾರದಿಂದ ಷಡ್ಯಂತ್ರ : ಸಿಎಂ ವಾಗ್ದಾಳಿ – vishwanews24

ಸುಭದ್ರ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಕೇಂದ್ರ ಬಿಜೆಪಿ ಸರ್ಕಾರದಿಂದ ಷಡ್ಯಂತ್ರ : ಸಿಎಂ ವಾಗ್ದಾಳಿ

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣದಲ್ಲಿ ರಾಜಕೀಯ ದುರುದ್ದೇಶದ ಸ್ವಯಂ ಪ್ರೇರಣೆಯಿಂದ ತನಿಖೆ ಕೈಗೆತ್ತಿಕೊಂಡಿರುವ ಜಾರಿ ನಿರ್ದೇಶನಾಲಯವು, ಪ್ರಕರಣದಲ್ಲಿ ಮಾಜಿ ಸಚಿವರಾದ ನಾಗೇಂದ್ರ ಅವರ ಹೆಸರನ್ನು ಹೇಳುವಂತೆ ನಿಗಮದ ಅಧಿಕಾರಿಗಳಿಗೆ ಇನ್ನಿಲ್ಲದ ಕಿರುಕುಳ ನೀಡುತ್ತಿರುವುದು ಅತ್ಯಂತ ಖಂಡನೀಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲಿಗೆ ಸರ್ಕಾರದ ವಿರುದ್ದ ಸುಳ್ಳು ಆರೋಪಗಳನ್ನು ಸೃಷ್ಟಿಸುವುದು, ನಂತರ ತಮ್ಮ ಜೀತದಾಳುಗಳಂತಿರುವ ಸಿಬಿಐ, ಇಡಿ ಮೊದಲಾದ ತನಿಖಾ ಸಂಸ್ಥೆಗಳಿಂದ ತನಿಖೆ ಮಾಡಿಸಿ ನಿರಪರಾಧಿಗಳನ್ನು ಅಪರಾಧಿಗಳೆಂದು ಬಿಂಬಿಸಿ ಜನರಲ್ಲಿ ಕೆಟ್ಟ ಅಭಿಪ್ರಾಯ ಮೂಡಿಸುವುದು, ಈ‌ ಮೂಲಕ ಸುಭದ್ರ ಸರ್ಕಾರವನ್ನು ಅಸ್ಥಿರಗೊಳಿಸುವುದು ಕೇಂದ್ರದ ಬಿಜೆಪಿ ಸರ್ಕಾರ ದೇಶದ ವಿವಿಧ ರಾಜ್ಯಗಳಲ್ಲಿ ಮಾಡಿರುವ ಷಡ್ಯಂತ್ರ. ಅದನ್ನೇ ಇಲ್ಲಿಯೂ ಮಾಡಲು ಹೊರಟಿದೆ ಎಂದು ಕಿಡಿಕಾರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವರಾದ ಅಮಿತ್‌ ಶಾ ಅವರೇ, ನೀವು ಇಡಿ, ಐಟಿ, ಸಿಬಿಐ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ನಡೆಸುತ್ತಿರುವ ಸೇಡಿನ ರಾಜಕಾರಣವನ್ನು ನಮ್ಮ ಜನ ಗಮನಿಸುತ್ತಿದ್ದಾರೆ.

ಈ ದುಷ್ಕೃತ್ಯಗಳ ಸರಣಿ‌ ಮುಂದುವರಿದರೆ ಜನತೆಯೇ ನಿಮ್ಮ ವಿರುದ್ಧ ಬಂಡೆದ್ದು ಪಾಠ ಕಲಿಸಲು ಸಿದ್ಧರಾಗಬಹುದು. ಬೇರೆ ರಾಜ್ಯಗಳಲ್ಲಿ ಆಡಿದ ಈ ಕಳ್ಳಾಟವನ್ನು ಕರ್ನಾಟಕದಲ್ಲಿ ಆಡಲು ಮುಂದಾಗಬೇಡಿ.
ಕನ್ನಡಿಗರು ಸಹನೆ, ಸೌಹಾರ್ದತೆಗೆ ಹೆಸರಾದವರಷ್ಟೆ ಅಲ್ಲ, ಅನ್ಯಾಯ, ಮೋಸವನ್ನು ಸಹಿಸದವರು, ಸತ್ಯ ಮತ್ತು ನ್ಯಾಯದ ಪರವಾಗಿ ಹೋರಾಡಬಲ್ಲ ಛಾತಿ ಉಳ್ಳವರು ಕೂಡಾ ಆಗಿದ್ದಾರೆ ಎನ್ನುವುದು ನೆನಪಿರಲಿ ಎಂದು ಹೇಳಿದ್ದಾರೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

6 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

6 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

6 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

7 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago