ಬೆಂಗಳೂರು: ಆರ್ಥಿಕ ಮುಗ್ಗಟ್ಟು ಕುರಿತು ಸರ್ಕಾರಕ್ಕೆ ಇಂಧನ ಇಲಾಖೆ ಬರೆದ ಪತ್ರ ಉಲ್ಲೇಖಿಸಿ ಇಂದು ರಾಜ್ಯ ಬಿಜೆಪಿ ಘಟಕ ತನ್ನ ‘ಎಕ್ಸ್’ ಖಾತೆಯಲ್ಲಿ ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿದೆ. ‘ಕರ್ನಾಟಕವನ್ನು ಎಲ್ಲಾ ವಲಯಗಳಲ್ಲೂ ಬರ್ಬಾದ್ ಮಾಡುವುದೇ ಕಾಂಗ್ರೆಸ್ ಸರ್ಕಾರದ ಅಸಲಿ ಕರ್ನಾಟಕ ಮಾಡೆಲ್, ಈಗಾಗಲೇ ಸುಭಿಕ್ಷವಾಗಿದ್ದ ಕರ್ನಾಟಕವನ್ನು ಒಂದು ವರ್ಷದಲ್ಲಿ ಹಾಳು ಮಾಡಿದ್ದು, ಇದರ ಸಂಪೂರ್ಣ ಶ್ರೇಯ ಕಾಂಗ್ರೆಸ್ ಪಕ್ಷಕ್ಕೆ ಸಲ್ಲುತ್ತದೆ ಎಂದು ವಾಗ್ದಾಳಿ ನಡೆಸಿದೆ.
ಜೊತೆಗೆ ‘ದೈನಂದಿನ ಖರ್ಚಿಗೂ ಹಣವಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿ, ಹೆಚ್ಚಿನ ಸಾಲ ಪಡೆಯಲು ಅನುಮತಿ ನೀಡಿ, ಇಲ್ಲವೇ ಸರ್ಕಾರದಿಂದ ಬರಬೇಕಿರುವ ಬಾಕಿ ಪಾವತಿಸಿ ಎಂದು ಪತ್ರ ಬರೆದಿರುವುದು, ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಎಷ್ಟರ ಮಟ್ಟಿಗೆ ಹದಗೆಡಿಸಿದೆ ಎಂಬುದರ ಸ್ಪಷ್ಟ ನಿದರ್ಶನವಾಗಿದೆ. ಸಿಎಂ ಸಿದ್ದರಾಮಯ್ಯ ಅವರೇ, ಕರ್ನಾಟಕ ಬರ್ಬಾದ್ ಆಗಿದೆ ಎಂಬುದು ನಿಮ್ಮ ಇಂಧನ ಇಲಾಖೆ ಬರೆದ ಪತ್ರದಿಂದಲೇ ಕೊನೆಗೂ ಋಜುವಾತಾಗಿದೆ. ಸಿದ್ದರಾಮಯ್ಯ, ಕರ್ನಾಟಕ ಕಂಡ ಅತ್ಯಂತ ದುರ್ಬಲ ಸಿಎಂ ಎನ್ನುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿಯ ಅಗತ್ಯವಿದೆಯೇ ಎಂದು ಬಿಜೆಪಿ ಘಟಕ ಕಿಡಿಕಾರಿದೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…