Featured

ಸುಮಲತಾಗೆ ಟಿಕೆಟ್​ ನೀಡಲು ಸಾಧ್ಯವಿಲ್ಲ: ಸಿದ್ದರಾಮಯ್ಯ – Vishwanews24

ಬೆಂಗಳೂರು: ಸುಮಲತಾ, ಸಿದ್ದರಾಮಯ್ಯ ಅವರ ನಿವಾಸಕ್ಕೆ ಭೇಟಿ ನೀಡಿ ಚುನಾವಣೆ ಎದುರಿಸುವ ಕುರಿತು ಚರ್ಚಿಸಿದ್ದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್​ನಿಂದ ಸುಮಲತಾಗೆ ಟಿಕೆಟ್​ ನೀಡುವ ಸಾಧ್ಯತೆಯ ಬಗ್ಗೆ ಚರ್ಚೆಯಾಗಿತ್ತು. ಆದರೀಗ ಸಿದ್ದರಾಮಯ್ಯ ಮಂಡ್ಯ ಜೆಡಿಎಸ್​ ಸಂಸದರಿರುವ ಕ್ಷೇತ್ರವಾದ್ದರಿಂದ ಸುಮಲತಾ ಅವರಿಗೆ ಟಿಕೆಟ್​ ಕೊಡುವ ಮಾತೇ ಬರುವುದಿಲ್ಲ ಎಂದಿದ್ದಾರೆ.

ಮಂಡ್ಯ ಕ್ಷೇತ್ರದಿಂದ ಯಾರಿಗೆ ಟಿಕೆಟ್​ ನೀಡಬೇಕು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಭಾರೀ ಚರ್ಚೆ ನಡೆಯುತ್ತಿದೆ. ದೇವೇಗೌಡರ ಕುಟುಂಬದ ಕುಡಿ ನಿಖಿಲ್​ ಕುಮಾರಸ್ವಾಮಿ​ ಅವರನ್ನು ಈ ಕ್ಷೇತ್ರದಿಂದ ಕಣಕ್ಕಿಳಿಸಲು ಜೆಡಿಎಸ್​ ಸಿದ್ಧತೆ ನಡೆಸಿದೆ.

ಸೋಮವಾರ ಕಾಂಗ್ರೆಸ್​ – ಜೆಡಿಎಸ್​ ಸಮನ್ವಯ ಸಮಿತಿ ಸಭೆ ನಡೆಸಲಾಗಿತ್ತು. ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಕಾಂಗ್ರೆಸ್​ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್​, ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್​, ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಸೇರಿದಂತೆ ಸಮನ್ವಯ ಸಮಿತಿಯ ಎಲ್ಲಾ ಸದಸ್ಯರು ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಮುಖ್ಯವಾಗಿ ಚರ್ಚೆಯಾದ ವಿಚಾರ ಲೋಕಸಭಾ ಟಿಕೆಟ್​ ಹಂಚಿಕೆ. ಜೆಡಿಎಸ್​ 12 ಸ್ಥಾನಗಳಿಗೆ ಪಟ್ಟು ಹಿಡಿದಿದ್ದರೆ, ಕಾಂಗ್ರೆಸ್​ 9 ಸ್ಥಾನ ನೀಡಲು ಒಪ್ಪಿತ್ತು.

ಈಗ ಅದರ ಮುಂದುವರೆದ ಭಾಗವಾಗಿ ಕಾಂಗ್ರೆಸ್​ನಿಂದ ಸುಮಲತಾ ಅಂಬರೀಶ್​ಗೆ ಟಿಕೆಟ್​ ನೀಡಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಮೂಲಗಳ ಪ್ರಕಾರ ಸುಮಲತಾರಿಗೆ ಕಾಂಗ್ರೆಸ್​ನಿಂದ ಟಿಕೆಟ್​ ಸಿಕ್ಕರೆ ಅದು ಸಿದ್ದರಾಮಯ್ಯ ಅವರಿಂದ ಮಾತ್ರ ಸಾಧ್ಯ ಎನ್ನಲಾಗಿತ್ತು. ಆದರೀಗ ಸಿದ್ದರಾಮಯ್ಯ ಕೂಡ ಸುಮಲತಾ ಟಿಕೆಟ್​ ನೀಡಲು ಸಾಧ್ಯವಿಲ್ಲ ಎಂದಿದ್ದಾರೆ.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago