ಬೆಂಗಳೂರು: ಸುಮಲತಾ, ಸಿದ್ದರಾಮಯ್ಯ ಅವರ ನಿವಾಸಕ್ಕೆ ಭೇಟಿ ನೀಡಿ ಚುನಾವಣೆ ಎದುರಿಸುವ ಕುರಿತು ಚರ್ಚಿಸಿದ್ದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ನಿಂದ ಸುಮಲತಾಗೆ ಟಿಕೆಟ್ ನೀಡುವ ಸಾಧ್ಯತೆಯ ಬಗ್ಗೆ ಚರ್ಚೆಯಾಗಿತ್ತು. ಆದರೀಗ ಸಿದ್ದರಾಮಯ್ಯ ಮಂಡ್ಯ ಜೆಡಿಎಸ್ ಸಂಸದರಿರುವ ಕ್ಷೇತ್ರವಾದ್ದರಿಂದ ಸುಮಲತಾ ಅವರಿಗೆ ಟಿಕೆಟ್ ಕೊಡುವ ಮಾತೇ ಬರುವುದಿಲ್ಲ ಎಂದಿದ್ದಾರೆ.
ಮಂಡ್ಯ ಕ್ಷೇತ್ರದಿಂದ ಯಾರಿಗೆ ಟಿಕೆಟ್ ನೀಡಬೇಕು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಭಾರೀ ಚರ್ಚೆ ನಡೆಯುತ್ತಿದೆ. ದೇವೇಗೌಡರ ಕುಟುಂಬದ ಕುಡಿ ನಿಖಿಲ್ ಕುಮಾರಸ್ವಾಮಿ ಅವರನ್ನು ಈ ಕ್ಷೇತ್ರದಿಂದ ಕಣಕ್ಕಿಳಿಸಲು ಜೆಡಿಎಸ್ ಸಿದ್ಧತೆ ನಡೆಸಿದೆ.
ಸೋಮವಾರ ಕಾಂಗ್ರೆಸ್ – ಜೆಡಿಎಸ್ ಸಮನ್ವಯ ಸಮಿತಿ ಸಭೆ ನಡೆಸಲಾಗಿತ್ತು. ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಸಮನ್ವಯ ಸಮಿತಿಯ ಎಲ್ಲಾ ಸದಸ್ಯರು ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಮುಖ್ಯವಾಗಿ ಚರ್ಚೆಯಾದ ವಿಚಾರ ಲೋಕಸಭಾ ಟಿಕೆಟ್ ಹಂಚಿಕೆ. ಜೆಡಿಎಸ್ 12 ಸ್ಥಾನಗಳಿಗೆ ಪಟ್ಟು ಹಿಡಿದಿದ್ದರೆ, ಕಾಂಗ್ರೆಸ್ 9 ಸ್ಥಾನ ನೀಡಲು ಒಪ್ಪಿತ್ತು.
ಈಗ ಅದರ ಮುಂದುವರೆದ ಭಾಗವಾಗಿ ಕಾಂಗ್ರೆಸ್ನಿಂದ ಸುಮಲತಾ ಅಂಬರೀಶ್ಗೆ ಟಿಕೆಟ್ ನೀಡಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಮೂಲಗಳ ಪ್ರಕಾರ ಸುಮಲತಾರಿಗೆ ಕಾಂಗ್ರೆಸ್ನಿಂದ ಟಿಕೆಟ್ ಸಿಕ್ಕರೆ ಅದು ಸಿದ್ದರಾಮಯ್ಯ ಅವರಿಂದ ಮಾತ್ರ ಸಾಧ್ಯ ಎನ್ನಲಾಗಿತ್ತು. ಆದರೀಗ ಸಿದ್ದರಾಮಯ್ಯ ಕೂಡ ಸುಮಲತಾ ಟಿಕೆಟ್ ನೀಡಲು ಸಾಧ್ಯವಿಲ್ಲ ಎಂದಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…