Featured

ಸುಮಲತಾಗೆ ಟಿಕೆಟ್​ ನೀಡಲು ಸಾಧ್ಯವಿಲ್ಲ: ಸಿದ್ದರಾಮಯ್ಯ – Vishwanews24

ಬೆಂಗಳೂರು: ಸುಮಲತಾ, ಸಿದ್ದರಾಮಯ್ಯ ಅವರ ನಿವಾಸಕ್ಕೆ ಭೇಟಿ ನೀಡಿ ಚುನಾವಣೆ ಎದುರಿಸುವ ಕುರಿತು ಚರ್ಚಿಸಿದ್ದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್​ನಿಂದ ಸುಮಲತಾಗೆ ಟಿಕೆಟ್​ ನೀಡುವ ಸಾಧ್ಯತೆಯ ಬಗ್ಗೆ ಚರ್ಚೆಯಾಗಿತ್ತು. ಆದರೀಗ ಸಿದ್ದರಾಮಯ್ಯ ಮಂಡ್ಯ ಜೆಡಿಎಸ್​ ಸಂಸದರಿರುವ ಕ್ಷೇತ್ರವಾದ್ದರಿಂದ ಸುಮಲತಾ ಅವರಿಗೆ ಟಿಕೆಟ್​ ಕೊಡುವ ಮಾತೇ ಬರುವುದಿಲ್ಲ ಎಂದಿದ್ದಾರೆ.

ಮಂಡ್ಯ ಕ್ಷೇತ್ರದಿಂದ ಯಾರಿಗೆ ಟಿಕೆಟ್​ ನೀಡಬೇಕು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಭಾರೀ ಚರ್ಚೆ ನಡೆಯುತ್ತಿದೆ. ದೇವೇಗೌಡರ ಕುಟುಂಬದ ಕುಡಿ ನಿಖಿಲ್​ ಕುಮಾರಸ್ವಾಮಿ​ ಅವರನ್ನು ಈ ಕ್ಷೇತ್ರದಿಂದ ಕಣಕ್ಕಿಳಿಸಲು ಜೆಡಿಎಸ್​ ಸಿದ್ಧತೆ ನಡೆಸಿದೆ.

ಸೋಮವಾರ ಕಾಂಗ್ರೆಸ್​ – ಜೆಡಿಎಸ್​ ಸಮನ್ವಯ ಸಮಿತಿ ಸಭೆ ನಡೆಸಲಾಗಿತ್ತು. ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಕಾಂಗ್ರೆಸ್​ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್​, ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್​, ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಸೇರಿದಂತೆ ಸಮನ್ವಯ ಸಮಿತಿಯ ಎಲ್ಲಾ ಸದಸ್ಯರು ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಮುಖ್ಯವಾಗಿ ಚರ್ಚೆಯಾದ ವಿಚಾರ ಲೋಕಸಭಾ ಟಿಕೆಟ್​ ಹಂಚಿಕೆ. ಜೆಡಿಎಸ್​ 12 ಸ್ಥಾನಗಳಿಗೆ ಪಟ್ಟು ಹಿಡಿದಿದ್ದರೆ, ಕಾಂಗ್ರೆಸ್​ 9 ಸ್ಥಾನ ನೀಡಲು ಒಪ್ಪಿತ್ತು.

ಈಗ ಅದರ ಮುಂದುವರೆದ ಭಾಗವಾಗಿ ಕಾಂಗ್ರೆಸ್​ನಿಂದ ಸುಮಲತಾ ಅಂಬರೀಶ್​ಗೆ ಟಿಕೆಟ್​ ನೀಡಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಮೂಲಗಳ ಪ್ರಕಾರ ಸುಮಲತಾರಿಗೆ ಕಾಂಗ್ರೆಸ್​ನಿಂದ ಟಿಕೆಟ್​ ಸಿಕ್ಕರೆ ಅದು ಸಿದ್ದರಾಮಯ್ಯ ಅವರಿಂದ ಮಾತ್ರ ಸಾಧ್ಯ ಎನ್ನಲಾಗಿತ್ತು. ಆದರೀಗ ಸಿದ್ದರಾಮಯ್ಯ ಕೂಡ ಸುಮಲತಾ ಟಿಕೆಟ್​ ನೀಡಲು ಸಾಧ್ಯವಿಲ್ಲ ಎಂದಿದ್ದಾರೆ.

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

6 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

6 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

6 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

7 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

7 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

7 hours ago