Featured

ಸುಮಲತಾಗೆ ಟಿಕೆಟ್​ ನೀಡಲು ಸಾಧ್ಯವಿಲ್ಲ: ಸಿದ್ದರಾಮಯ್ಯ – Vishwanews24

ಬೆಂಗಳೂರು: ಸುಮಲತಾ, ಸಿದ್ದರಾಮಯ್ಯ ಅವರ ನಿವಾಸಕ್ಕೆ ಭೇಟಿ ನೀಡಿ ಚುನಾವಣೆ ಎದುರಿಸುವ ಕುರಿತು ಚರ್ಚಿಸಿದ್ದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್​ನಿಂದ ಸುಮಲತಾಗೆ ಟಿಕೆಟ್​ ನೀಡುವ ಸಾಧ್ಯತೆಯ ಬಗ್ಗೆ ಚರ್ಚೆಯಾಗಿತ್ತು. ಆದರೀಗ ಸಿದ್ದರಾಮಯ್ಯ ಮಂಡ್ಯ ಜೆಡಿಎಸ್​ ಸಂಸದರಿರುವ ಕ್ಷೇತ್ರವಾದ್ದರಿಂದ ಸುಮಲತಾ ಅವರಿಗೆ ಟಿಕೆಟ್​ ಕೊಡುವ ಮಾತೇ ಬರುವುದಿಲ್ಲ ಎಂದಿದ್ದಾರೆ.

ಮಂಡ್ಯ ಕ್ಷೇತ್ರದಿಂದ ಯಾರಿಗೆ ಟಿಕೆಟ್​ ನೀಡಬೇಕು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಭಾರೀ ಚರ್ಚೆ ನಡೆಯುತ್ತಿದೆ. ದೇವೇಗೌಡರ ಕುಟುಂಬದ ಕುಡಿ ನಿಖಿಲ್​ ಕುಮಾರಸ್ವಾಮಿ​ ಅವರನ್ನು ಈ ಕ್ಷೇತ್ರದಿಂದ ಕಣಕ್ಕಿಳಿಸಲು ಜೆಡಿಎಸ್​ ಸಿದ್ಧತೆ ನಡೆಸಿದೆ.

ಸೋಮವಾರ ಕಾಂಗ್ರೆಸ್​ – ಜೆಡಿಎಸ್​ ಸಮನ್ವಯ ಸಮಿತಿ ಸಭೆ ನಡೆಸಲಾಗಿತ್ತು. ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಕಾಂಗ್ರೆಸ್​ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್​, ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್​, ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಸೇರಿದಂತೆ ಸಮನ್ವಯ ಸಮಿತಿಯ ಎಲ್ಲಾ ಸದಸ್ಯರು ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಮುಖ್ಯವಾಗಿ ಚರ್ಚೆಯಾದ ವಿಚಾರ ಲೋಕಸಭಾ ಟಿಕೆಟ್​ ಹಂಚಿಕೆ. ಜೆಡಿಎಸ್​ 12 ಸ್ಥಾನಗಳಿಗೆ ಪಟ್ಟು ಹಿಡಿದಿದ್ದರೆ, ಕಾಂಗ್ರೆಸ್​ 9 ಸ್ಥಾನ ನೀಡಲು ಒಪ್ಪಿತ್ತು.

ಈಗ ಅದರ ಮುಂದುವರೆದ ಭಾಗವಾಗಿ ಕಾಂಗ್ರೆಸ್​ನಿಂದ ಸುಮಲತಾ ಅಂಬರೀಶ್​ಗೆ ಟಿಕೆಟ್​ ನೀಡಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಮೂಲಗಳ ಪ್ರಕಾರ ಸುಮಲತಾರಿಗೆ ಕಾಂಗ್ರೆಸ್​ನಿಂದ ಟಿಕೆಟ್​ ಸಿಕ್ಕರೆ ಅದು ಸಿದ್ದರಾಮಯ್ಯ ಅವರಿಂದ ಮಾತ್ರ ಸಾಧ್ಯ ಎನ್ನಲಾಗಿತ್ತು. ಆದರೀಗ ಸಿದ್ದರಾಮಯ್ಯ ಕೂಡ ಸುಮಲತಾ ಟಿಕೆಟ್​ ನೀಡಲು ಸಾಧ್ಯವಿಲ್ಲ ಎಂದಿದ್ದಾರೆ.

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago