Featured

ಸುರತ್ಕಲ್‌ನಲ್ಲಿ‌ ರಾಜ್ಯದ ಮೊದಲ ಹೈಟೆಕ್ ಬಸ್ ನಿಲ್ದಾಣ ನಿರ್ಮಾಣ – Vishwanews24

ಸುರತ್ಕಲ್‌ನಲ್ಲಿ‌ ರಾಜ್ಯದ ಮೊದಲ ಹೈಟೆಕ್ ಬಸ್ ನಿಲ್ದಾಣ ನಿರ್ಮಾಣ

ಮಂಗಳೂರು: ರಾಜ್ಯದ ಮೊದಲ ಹೈಟೆಕ್ ಬಸ್ ನಿಲ್ದಾಣ ಮಂಗಳೂರಿನ ಸುರತ್ಕಲ್‌ನಲ್ಲಿ‌ ನಿರ್ಮಾಣವಾಗಿದೆ. ಸುರತ್ಕಲ್ ಗೋವಿಂದಾಸ್ ಕಾಲೇಜು ಮುಂಭಾಗ 10 ಲಕ್ಷ ರೂಪಾಯಿ ವೆಚ್ಚದಲ್ಲಿ ಬಸ್ ನಿಲ್ದಾಣ ನಿರ್ಮಾಣವಾಗಿದ್ದು, ಈ ಹೈಟೆಕ್ ಬಸ್ ನಿಲ್ದಾಣವನ್ನು ಅತ್ಯಾಧುನಿಕ ತಂತ್ರಜ್ಞಾನ ಮತ್ತು ಹೆಚ್ಚು ಭಧ್ರತೆಯ ಸಾಧನಗಳನ್ನು ಬಳಸಿ ನಿರ್ಮಾಣ ಮಾಡಲಾಗಿದೆ.

ಶಾಸಕ ಡಾ.ವೈ ಭರತ್ ಶೆಟ್ಟಿ ಅವರ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಸುರತ್ಕಲ್ ಬಸ್ ನಿಲ್ದಾಣ ಇದಾಗಿದ್ದು, ಸ್ಮಾರ್ಟ್ ಮತ್ತು ಡಿಜಿಟಲ್ ಸುರತ್ಕಲ್ ಧ್ಯೇಯದಡಿ ಇದನ್ನು ನಿರ್ಮಾಣ ಮಾಡಲಾಗಿದೆ. ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಸುರತ್ಕಲ್‌ನ ಹೈಟೆಕ್‌ ಬಸ್ ನಿಲ್ದಾಣದಲ್ಲಿ ಮಹಿಳೆಯರ ಸುರಕ್ಷತೆ ಎಸ್‌ಒಎಸ್ ಅಳವಡಿಕೆ ಮಾಡಲಾಗಿದೆ. ಅಪಾಯದ ಸಂಧರ್ಭದಲ್ಲಿ ಮಹಿಳೆಯರು ಎಸ್‌ಒಎಸ್ ಬಟನ್ ಒತ್ತಿದರೆ ಪೊಲೀಸರಿಗೆ ಆಟೋಮ್ಯಾಟಿಕ್ ಕಾಲ್ ಹೋಗಲಿದೆ. ಪೊಲೀಸ್ ಅಧಿಕಾರಿಗಳು, ಪಾಲಿಕೆಯ ಅಧಿಕಾರಿಗಳ ನಂಬರ್‌ಗಳಿಗೆ ಆಟೋಮ್ಯಾಟಿಕ್ ಕಾಲ್, ಸಂದೇಶ ಹೋಗಲಿದೆ. ಈ ಬಸ್ ನಿಲ್ದಾಣದಲ್ಲಿ ಮೂರು ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಸಿಸಿ ಕ್ಯಾಮೆರಾಗಳ ನೇರ ದೃಶ್ಯ ಪೊಲೀಸ್ ಠಾಣೆ, ಪಾಲಿಕೆಯ ಕಛೇರಿ ಮತ್ತು ಪೊಲೀಸ್ ಅಧಿಕಾರಿಗಳ ಮೊಬೈಲ್‌ಗೆ ಹೋಗಲಿದೆ.

ಅಲ್ಲದೇ ಈ ಬಸ್ ನಿಲ್ದಾಣದಲ್ಲಿ ಉಚಿತ ಅನ್ ಲಿಮಿಟೆಡ್ ವೈಫೈ, ಮೂರು ಸಿಸಿ ಕ್ಯಾಮೆರಾಗಳು, ಶುದ್ಧ ಕುಡಿಯುವ ನೀರು, ಎಫ್‌ಎಂ ರೇಡಿಯೋ, ಇನ್ವಾಟರ್ ವ್ಯವಸ್ಥೆಯನ್ನೂ ಕೂಡ ಕಲ್ಪಿಸಲಾಗಿದೆ. ಪ್ರಯಾಣಿಕರ ಅನುಕೂಲತೆಗಾಗಿ ಫ್ಯಾನ್, ಬೆಂಕಿ ನಿರೋಧಕ ಸಾಧನ, ಮೊಬೈಲ್, ಲ್ಯಾಪ್‌ ಟಾಪ್ ಚಾರ್ಜಿಂಗ್‌ ವ್ಯವಸ್ಥೆ, ಪ್ರಥಮ ಚಿಕಿತ್ಸೆಯ ಬಾಕ್ಸ್ ಅಳವಡಿಸಲಾಗಿದೆ. ಹಾಗೂ ಈ ಬಸ್ ನಿಲ್ದಾಣದಲ್ಲಿ 12 ಚೇರ್‌ಗಳನ್ನು ಹಾಕಲಾಗಿದೆ.

ಹಾಗೆಯೇ ಬಸ್ ನಿಲ್ದಾಣದಲ್ಲಿ ವಿಶೇಷವಾಗಿ ಟಚ್ ಸ್ಕ್ರೀನ್ ಡಿಸ್ ಪ್ಲೇ ಅಳವಡಿಸಲಾಗಿದ್ದು, ಈ ಡಿಸ್‌ ಪ್ಲೇನಲ್ಲಿ‌ ಬಸ್‌ಗಳ ಸಮಯ, ಬಸ್ ಬರುತ್ತಿರುವ ನಿರ್ದಿಷ್ಟ ಸ್ಥಳ, ಮತ್ತು ಸುತ್ತಮುತ್ತಲಿನ ಪ್ರವಾಸೋದ್ಯಮ ಸ್ಥಳಗಳ ಮಾಹಿತಿಯೂ ಇರಲಿದೆ. ಮತ್ತು ಐ ಲವ್ ಸುರತ್ಕಲ್ ಎಂಬ ಸೆಲ್ಫೀ ಪಾಯಿಂಟ್ ಕೂಡ ಇದೆ. ಇನ್ನು ಬಸ್‌ ನಿಲ್ದಾಣದ‌ ಹಿಂಭಾಗ ಎಂಸಿಎಫ್ ಪ್ರಾಯೋಜಕತ್ವದ ಅಡಿಯಲ್ಲಿ ಸುಸಜ್ಜಿತ ಶೌಚಾಲಯ ನಿರ್ಮಾಣವಾಗಲಿದೆ.

ಈ ಬಸ್ ನಿಲ್ದಾಣವನ್ನು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ವೈ ಭರತ್ ಶೆಟ್ಟಿ ಉದ್ಘಾಟನೆ ಮಾಡಿದ್ದಾರೆ. ಅಲ್ಲದೇ ಅವರು ಸಾರ್ವಜನಿಕರು ಇದರ ಉಪಯೋಗ ಪಡೆಯುವಂತೆ ಕೋರಿದ್ದಾರೆ. ಇದರ ನಿರ್ವಹಣೆಗೆ ಓರ್ವ ಖಾಯಂ ಸಿಬ್ಬಂದಿಯನ್ನು ನೇಮಿಸಲಾಗಿದೆ. ರಾತ್ರಿ ಬೆಂಗಳೂರು ಬಸ್‌ಗಳು ಇದೇ ನಿಲ್ದಾಣಕ್ಕೆ ಬರುವುದರಿಂದ ಸಾರ್ವಜನಿಕರು‌ ನಿರ್ಭೀತಿಯಾಗಿ ಇಲ್ಲಿನ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬಹುದು ಎಂದು ಶಾಸಕ ಭರತ್ ಶೆಟ್ಟಿ ಮಾಹಿತಿ ನೀಡಿದರು.

Vishwa News 24

Recent Posts

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

53 minutes ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 hour ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 hours ago

ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! vishwanews24

ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…

2 hours ago

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ – vishwanews24

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ ಕೊಪ್ಪಳ: ಗೂಡ್ಸ್‌ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…

3 hours ago