Featured

ಸುರತ್ಕಲ್‌ ಟೋಲ್‌ ಕೇಂದ್ರವನ್ನು ಮುಚ್ಚುವಂತೆ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ನಿಯೋಗದಿಂದ ಮನವಿ -Vishwanews24

ಸುರತ್ಕಲ್‌: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮುಕ್ಕದಲ್ಲಿರುವ ಸುರತ್ಕಲ್‌ ಟೋಲ್‌ ಗೇಟ್‌ನ ಪರವಾನಗಿ ಅವಧಿ ನವೆಂಬರ್‌ 15ರಂದು ಅಂತ್ಯಗೊಳ್ಳಲಿದ್ದು, ಆ ಬಳಿಕ ಟೋಲ್‌ ಕೇಂದ್ರವನ್ನು ಮುಚ್ಚುವಂತೆ ಸುರತ್ಕಲ್‌ ಟೋಲ್‌ ವಿರೋಧಿ ಹೋರಾಟ ಸಮಿತಿ ನಿಯೋಗ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (ಎನ್‌ಎಚ್‌ಎಐ) ಮನವಿ ಸಲ್ಲಿಸಿದೆ.

ಹೋರಾಟ ಸಮಿತಿ ಸಂಚಾಲಕ ಮುನೀರ್‌ ಕಾಟಿಪಳ್ಳ ಹಾಗೂ ಮಾಜಿ ಶಾಸಕ ವಿಜಯಕುಮಾರ್‌ ಶೆಟ್ಟಿ ನೇತೃತ್ವದಲ್ಲಿ ಎನ್‌ಎಚ್‌ಎಐ ಮಂಗಳೂರು ಯೋಜನಾ ನಿರ್ದೇಶಕ ಶಿಸು ಮೋಹನ್‌ ಅವರನ್ನು ಭೇಟಿಮಾಡಿದ ನಿಯೋಗ, ಟೋಲ್‌ ಗೇಟ್‌ ಪರವಾನಗಿ ನವೀಕರಿಸದಂತೆ ಆಗ್ರಹಿಸಿ ಮನವಿ ಸಲ್ಲಿಸಿದರು.

ಹೆದ್ದಾರಿ ಗುಂಡಿಗಳಿಂದ ಅಪಾಯಕಾರಿ ಸ್ಥಿತಿಗೆ ತಲುಪಿರುವ ಸುರತ್ಕಲ್, ನಂತೂರು ಹೆದ್ದಾರಿಯನ್ನು ತಕ್ಷಣ ದುರಸ್ತಿಗೊಳಿಸಬೇಕು, ದುರ್ಬಲಗೊಂಡು ಸಂಚಾರಕ್ಕೆ ಅಯೋಗ್ಯಗೊಂಡಿರುವ ಕೂಳೂರು ಸೇತುವೆಗೆ ಪರ್ಯಾಯವಾಗಿ ಹೊಸ ಸೇತುವೆಯನ್ನು ನಿರ್ಮಿಸಬೇಕು ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಆಗ್ರಹಿಸಿದೆ.

ತಾತ್ಕಾಲಿಕ ನೆಲೆಯಲ್ಲಿ ಪ್ರಾರಂಭವಾದ ಸುರತ್ಕಲ್‌ ಟೋಲ್‌ ಗೇಟ್‌ ಐದು ವರ್ಷದಿಂದ ಕಾರ್ಯಾಚರಿಸುತ್ತಿದೆ. ಸ್ಥಳೀಯರ ವಿರೋಧ, ಪ್ರತಿಭಟನೆಗಳ ನಡುವೆಯೂ ಮುಂದುವರಿಸಲಾಗಿದೆ. ಎರಡು ವರ್ಷಗಳಿಂದ ಕಡಿಮೆ ಅವಧಿಗೆ ಪದೇ ಪದೇ ಗುತ್ತಿಗೆ ನವೀಕರಣ ಮಾಡಲಾಗುತ್ತಿದೆ. ಈ ಹಿಂದಿನ ನಿರ್ಧಾರದಂತೆ ಸುರತ್ಕಲ್‌ ಟೋಲ್‌ ಕೇಂದ್ರವನ್ನು ಹೆಜಮಾಡಿ ಟೋಲ್‌ ಕೇಂದ್ರದ ಜೊತೆ ವಿಲೀನ ಮಾಡಬೇಕು ಎಂದು ಆಗ್ರಹಿಸಲಾಗಿದೆ.

ಬೇಡಿಕೆಯಂತೆ ಟೋಲ್‌ ಕೇಂದ್ರ ರದ್ದು ಮಾಡಬೇಕು. ಹೆದ್ದಾರಿಯ ದುರಸ್ತಿ ಮಾಡಬೇಕು. ತಪ್ಪಿದಲ್ಲಿ ಪ್ರಾಧಿಕಾರದ ವಿರುದ್ಧ ತೀವ್ರವಾದ ಹೋರಾಟ ಆರಂಭಿಸಲಾಗುವುದು ಎಂದು ಸಮಿತಿ ಎಚ್ಚರಿಕೆ ನೀಡಿದೆ.

ನಿಯೋಗದಲ್ಲಿ ಮುನೀರ್ ಕಾಟಿಪಳ್ಳ, ಭರತ್ ಶೆಟ್ಟಿ ಕುಳಾಯಿ ( ಅಧ್ನಕ್ಷರು, ನಾಗರಿಕ ಸಮಿತಿ ಕುಳಾಯಿ) ಗಂಗಾಧರ ಭಂಜನ್ (ಕಾರ್ಯದರ್ಶಿ, ನಾಗರಿಕ ಸಮಿತಿ ಕುಳಾಯಿ) ಡಿವೈಎಫ್ಐ ಮುಖಂಡರಾದ ಸಂತೋಷ್ ಬಜಾಲ್ ಹೋರಾಟ ಸಮಿತಿ ಪ್ರಮುಖರಾದ ಶ್ರೀಮಾಥ್ ಕುಲಾಲ್, ನಿತಿನ್ ಬಂಗೇರ, ಅಜ್ಮಾಲ್ ಅಹ್ಮದ್, ಜನಾರ್ಧನ ಸಾಲ್ಯಾನ್ ಕುಳಾಯಿ ಹಾಜರಿದ್ದರು.

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

10 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

11 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

11 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

11 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

14 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

14 hours ago