Featured

ಸುರತ್ಕಲ್‌ ಟೋಲ್‌ ಕೇಂದ್ರವನ್ನು ಮುಚ್ಚುವಂತೆ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ನಿಯೋಗದಿಂದ ಮನವಿ -Vishwanews24

ಸುರತ್ಕಲ್‌: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮುಕ್ಕದಲ್ಲಿರುವ ಸುರತ್ಕಲ್‌ ಟೋಲ್‌ ಗೇಟ್‌ನ ಪರವಾನಗಿ ಅವಧಿ ನವೆಂಬರ್‌ 15ರಂದು ಅಂತ್ಯಗೊಳ್ಳಲಿದ್ದು, ಆ ಬಳಿಕ ಟೋಲ್‌ ಕೇಂದ್ರವನ್ನು ಮುಚ್ಚುವಂತೆ ಸುರತ್ಕಲ್‌ ಟೋಲ್‌ ವಿರೋಧಿ ಹೋರಾಟ ಸಮಿತಿ ನಿಯೋಗ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (ಎನ್‌ಎಚ್‌ಎಐ) ಮನವಿ ಸಲ್ಲಿಸಿದೆ.

ಹೋರಾಟ ಸಮಿತಿ ಸಂಚಾಲಕ ಮುನೀರ್‌ ಕಾಟಿಪಳ್ಳ ಹಾಗೂ ಮಾಜಿ ಶಾಸಕ ವಿಜಯಕುಮಾರ್‌ ಶೆಟ್ಟಿ ನೇತೃತ್ವದಲ್ಲಿ ಎನ್‌ಎಚ್‌ಎಐ ಮಂಗಳೂರು ಯೋಜನಾ ನಿರ್ದೇಶಕ ಶಿಸು ಮೋಹನ್‌ ಅವರನ್ನು ಭೇಟಿಮಾಡಿದ ನಿಯೋಗ, ಟೋಲ್‌ ಗೇಟ್‌ ಪರವಾನಗಿ ನವೀಕರಿಸದಂತೆ ಆಗ್ರಹಿಸಿ ಮನವಿ ಸಲ್ಲಿಸಿದರು.

ಹೆದ್ದಾರಿ ಗುಂಡಿಗಳಿಂದ ಅಪಾಯಕಾರಿ ಸ್ಥಿತಿಗೆ ತಲುಪಿರುವ ಸುರತ್ಕಲ್, ನಂತೂರು ಹೆದ್ದಾರಿಯನ್ನು ತಕ್ಷಣ ದುರಸ್ತಿಗೊಳಿಸಬೇಕು, ದುರ್ಬಲಗೊಂಡು ಸಂಚಾರಕ್ಕೆ ಅಯೋಗ್ಯಗೊಂಡಿರುವ ಕೂಳೂರು ಸೇತುವೆಗೆ ಪರ್ಯಾಯವಾಗಿ ಹೊಸ ಸೇತುವೆಯನ್ನು ನಿರ್ಮಿಸಬೇಕು ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಆಗ್ರಹಿಸಿದೆ.

ತಾತ್ಕಾಲಿಕ ನೆಲೆಯಲ್ಲಿ ಪ್ರಾರಂಭವಾದ ಸುರತ್ಕಲ್‌ ಟೋಲ್‌ ಗೇಟ್‌ ಐದು ವರ್ಷದಿಂದ ಕಾರ್ಯಾಚರಿಸುತ್ತಿದೆ. ಸ್ಥಳೀಯರ ವಿರೋಧ, ಪ್ರತಿಭಟನೆಗಳ ನಡುವೆಯೂ ಮುಂದುವರಿಸಲಾಗಿದೆ. ಎರಡು ವರ್ಷಗಳಿಂದ ಕಡಿಮೆ ಅವಧಿಗೆ ಪದೇ ಪದೇ ಗುತ್ತಿಗೆ ನವೀಕರಣ ಮಾಡಲಾಗುತ್ತಿದೆ. ಈ ಹಿಂದಿನ ನಿರ್ಧಾರದಂತೆ ಸುರತ್ಕಲ್‌ ಟೋಲ್‌ ಕೇಂದ್ರವನ್ನು ಹೆಜಮಾಡಿ ಟೋಲ್‌ ಕೇಂದ್ರದ ಜೊತೆ ವಿಲೀನ ಮಾಡಬೇಕು ಎಂದು ಆಗ್ರಹಿಸಲಾಗಿದೆ.

ಬೇಡಿಕೆಯಂತೆ ಟೋಲ್‌ ಕೇಂದ್ರ ರದ್ದು ಮಾಡಬೇಕು. ಹೆದ್ದಾರಿಯ ದುರಸ್ತಿ ಮಾಡಬೇಕು. ತಪ್ಪಿದಲ್ಲಿ ಪ್ರಾಧಿಕಾರದ ವಿರುದ್ಧ ತೀವ್ರವಾದ ಹೋರಾಟ ಆರಂಭಿಸಲಾಗುವುದು ಎಂದು ಸಮಿತಿ ಎಚ್ಚರಿಕೆ ನೀಡಿದೆ.

ನಿಯೋಗದಲ್ಲಿ ಮುನೀರ್ ಕಾಟಿಪಳ್ಳ, ಭರತ್ ಶೆಟ್ಟಿ ಕುಳಾಯಿ ( ಅಧ್ನಕ್ಷರು, ನಾಗರಿಕ ಸಮಿತಿ ಕುಳಾಯಿ) ಗಂಗಾಧರ ಭಂಜನ್ (ಕಾರ್ಯದರ್ಶಿ, ನಾಗರಿಕ ಸಮಿತಿ ಕುಳಾಯಿ) ಡಿವೈಎಫ್ಐ ಮುಖಂಡರಾದ ಸಂತೋಷ್ ಬಜಾಲ್ ಹೋರಾಟ ಸಮಿತಿ ಪ್ರಮುಖರಾದ ಶ್ರೀಮಾಥ್ ಕುಲಾಲ್, ನಿತಿನ್ ಬಂಗೇರ, ಅಜ್ಮಾಲ್ ಅಹ್ಮದ್, ಜನಾರ್ಧನ ಸಾಲ್ಯಾನ್ ಕುಳಾಯಿ ಹಾಜರಿದ್ದರು.

Vishwa News 24

Recent Posts

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

15 minutes ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

51 minutes ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

60 minutes ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

1 hour ago

ಕಟಪಾಡಿ: ಮಟ್ಟು ಬೀಚ್‌ನಲ್ಲಿ ಮುಂದುವರಿದ ಕಡಲ್ಕೊರೆತ – vishwanews24

ಕಟಪಾಡಿ: ಮಟ್ಟು ಬೀಚ್‌ನಲ್ಲಿ ಮುಂದುವರಿದ ಕಡಲ್ಕೊರೆತ ಕಟಪಾಡಿ: ಕಾಪು ತಾಲೂಕು ಕೋಟೆ ಗ್ರಾ.ಪಂ. ವ್ಯಾಪ್ತಿಯ ಮಟ್ಟು ಬೀಚ್‌ನಲ್ಲಿ ಕಡಲ್ಕೂರೆತ ಮುಂದುವರಿದಿದೆ.…

1 hour ago

ರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ ಎಲ್ಲಾ ಸಂಘಟನೆಗಳಿಗೆ ಧನ್ಯವಾದಗಳು : ಸಿಎಂ – vishwanews24

ರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ ಎಲ್ಲಾ ಸಂಘಟನೆಗಳಿಗೆ ಧನ್ಯವಾದಗಳು :ಸಿಎಂ   ಬೆಂಗಳೂರು: ʻರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ…

2 hours ago