ಸುರತ್ಕಲ್: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮುಕ್ಕದಲ್ಲಿರುವ ಸುರತ್ಕಲ್ ಟೋಲ್ ಗೇಟ್ನ ಪರವಾನಗಿ ಅವಧಿ ನವೆಂಬರ್ 15ರಂದು ಅಂತ್ಯಗೊಳ್ಳಲಿದ್ದು, ಆ ಬಳಿಕ ಟೋಲ್ ಕೇಂದ್ರವನ್ನು ಮುಚ್ಚುವಂತೆ ಸುರತ್ಕಲ್ ಟೋಲ್ ವಿರೋಧಿ ಹೋರಾಟ ಸಮಿತಿ ನಿಯೋಗ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (ಎನ್ಎಚ್ಎಐ) ಮನವಿ ಸಲ್ಲಿಸಿದೆ.
ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಹಾಗೂ ಮಾಜಿ ಶಾಸಕ ವಿಜಯಕುಮಾರ್ ಶೆಟ್ಟಿ ನೇತೃತ್ವದಲ್ಲಿ ಎನ್ಎಚ್ಎಐ ಮಂಗಳೂರು ಯೋಜನಾ ನಿರ್ದೇಶಕ ಶಿಸು ಮೋಹನ್ ಅವರನ್ನು ಭೇಟಿಮಾಡಿದ ನಿಯೋಗ, ಟೋಲ್ ಗೇಟ್ ಪರವಾನಗಿ ನವೀಕರಿಸದಂತೆ ಆಗ್ರಹಿಸಿ ಮನವಿ ಸಲ್ಲಿಸಿದರು.
ಹೆದ್ದಾರಿ ಗುಂಡಿಗಳಿಂದ ಅಪಾಯಕಾರಿ ಸ್ಥಿತಿಗೆ ತಲುಪಿರುವ ಸುರತ್ಕಲ್, ನಂತೂರು ಹೆದ್ದಾರಿಯನ್ನು ತಕ್ಷಣ ದುರಸ್ತಿಗೊಳಿಸಬೇಕು, ದುರ್ಬಲಗೊಂಡು ಸಂಚಾರಕ್ಕೆ ಅಯೋಗ್ಯಗೊಂಡಿರುವ ಕೂಳೂರು ಸೇತುವೆಗೆ ಪರ್ಯಾಯವಾಗಿ ಹೊಸ ಸೇತುವೆಯನ್ನು ನಿರ್ಮಿಸಬೇಕು ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಆಗ್ರಹಿಸಿದೆ.
ತಾತ್ಕಾಲಿಕ ನೆಲೆಯಲ್ಲಿ ಪ್ರಾರಂಭವಾದ ಸುರತ್ಕಲ್ ಟೋಲ್ ಗೇಟ್ ಐದು ವರ್ಷದಿಂದ ಕಾರ್ಯಾಚರಿಸುತ್ತಿದೆ. ಸ್ಥಳೀಯರ ವಿರೋಧ, ಪ್ರತಿಭಟನೆಗಳ ನಡುವೆಯೂ ಮುಂದುವರಿಸಲಾಗಿದೆ. ಎರಡು ವರ್ಷಗಳಿಂದ ಕಡಿಮೆ ಅವಧಿಗೆ ಪದೇ ಪದೇ ಗುತ್ತಿಗೆ ನವೀಕರಣ ಮಾಡಲಾಗುತ್ತಿದೆ. ಈ ಹಿಂದಿನ ನಿರ್ಧಾರದಂತೆ ಸುರತ್ಕಲ್ ಟೋಲ್ ಕೇಂದ್ರವನ್ನು ಹೆಜಮಾಡಿ ಟೋಲ್ ಕೇಂದ್ರದ ಜೊತೆ ವಿಲೀನ ಮಾಡಬೇಕು ಎಂದು ಆಗ್ರಹಿಸಲಾಗಿದೆ.
ಬೇಡಿಕೆಯಂತೆ ಟೋಲ್ ಕೇಂದ್ರ ರದ್ದು ಮಾಡಬೇಕು. ಹೆದ್ದಾರಿಯ ದುರಸ್ತಿ ಮಾಡಬೇಕು. ತಪ್ಪಿದಲ್ಲಿ ಪ್ರಾಧಿಕಾರದ ವಿರುದ್ಧ ತೀವ್ರವಾದ ಹೋರಾಟ ಆರಂಭಿಸಲಾಗುವುದು ಎಂದು ಸಮಿತಿ ಎಚ್ಚರಿಕೆ ನೀಡಿದೆ.
ನಿಯೋಗದಲ್ಲಿ ಮುನೀರ್ ಕಾಟಿಪಳ್ಳ, ಭರತ್ ಶೆಟ್ಟಿ ಕುಳಾಯಿ ( ಅಧ್ನಕ್ಷರು, ನಾಗರಿಕ ಸಮಿತಿ ಕುಳಾಯಿ) ಗಂಗಾಧರ ಭಂಜನ್ (ಕಾರ್ಯದರ್ಶಿ, ನಾಗರಿಕ ಸಮಿತಿ ಕುಳಾಯಿ) ಡಿವೈಎಫ್ಐ ಮುಖಂಡರಾದ ಸಂತೋಷ್ ಬಜಾಲ್ ಹೋರಾಟ ಸಮಿತಿ ಪ್ರಮುಖರಾದ ಶ್ರೀಮಾಥ್ ಕುಲಾಲ್, ನಿತಿನ್ ಬಂಗೇರ, ಅಜ್ಮಾಲ್ ಅಹ್ಮದ್, ಜನಾರ್ಧನ ಸಾಲ್ಯಾನ್ ಕುಳಾಯಿ ಹಾಜರಿದ್ದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…