ಸುರತ್ಕಲ್‌ ಬೀಚ್‌ : ನೀರಿನಲ್ಲಿ ಆಟವಾಡುತ್ತಿದ್ದಾಗ ಮುಳುಗಿ ಓರ್ವ ವಿದ್ಯಾರ್ಥಿನಿ ಮೃತ್ಯು, ಇಬ್ಬರ ರಕ್ಷಣೆ -Vishwanews24

ಸುರತ್ಕಲ್‌ : ಸುರತ್ಕಲ್‌ ಎನ್‌ಐಟಿಕೆ ಬಳೀ ಬೀಚ್‌ನಲ್ಲಿ ಆಟವಾಡಲು ತೆರಳಿದ್ದ 23 ವಿದ್ಯಾರ್ಥಿನಿಯರ ಪೈಕಿ ಒಬ್ಬಳೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು ಇನ್ನಿಬ್ಬರನ್ನು ಸ್ಥಳಿಯರು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಮೃತಪಟ್ಟ ವಿದ್ಯಾರ್ಥಿನಿಯನ್ನು ಮಧ್ಯಪ್ರದೇಶದ ಸಾಗರ್‌ ನಿವಾಸಿ ವಾರಂಗಲ್‌ ಎನ್‌ಐಟಿಕೆ ವಿದ್ಯಾರ್ಥಿನಿ ನಿರ್ಮಲಾ ದಂಗವಾಲ್‌ ಎಂದು ಗುರುತಿಸಲಾಗಿದೆ.

ಎನ್‌ಐಟಿ ವಾರಂಗಲ್‌ನ ೨೩ ವಿದ್ಯಾರ್ಥಿಗಳು ಸುರತ್ಕಲ್‌ ಎನ್‌ಐಟಿಕೆಯಲ್ಲಿ ನಡೆದಿದ್ದ ಆಲ್‌ ಇಂಡಿಯಾ ಅಂತರ್‌ ಎನ್‌ಐಟಿ ಕ್ರೀಡಕೂಟದಲ್ಲಿ ಭಾಗವಹಿಸಿದ್ದು ಈ ಕ್ರೀಡಾಕೂಟ ಮುಗಿದ ಬಳಿಕ ದೈಹಿಕ ಶಿಕ್ಷಕ ರಾಜು ಒಡೆಲಾ ಅವರೊಂದಿಗೆ ಎನ್‌ಐಟಿಕೆ ಬೀಚ್‌ಗೆ ತೆರಳಿದ್ದರು.

ನೀರಿನಲ್ಲಿ ಆಟವಾಡುತ್ತಿದ್ದ ವಿದ್ಯಾರ್ಥಿನಿಯರ ಪೈಕಿ ನಿರ್ಮಲಾ, ಮೇಘನಾ ಹಾಗೂ ಕನೋಜ್‌ ಎಂಬವರು ಸಮುದ್ರದ ಅಲೆಗಳ ರಭಸಕ್ಕೆ ಸಿಲುಕಿ ಮುಳುಗುತ್ತಿದ್ದು ಇತರೆ ವಿದ್ಯಾರ್ಥಿಗಳು ಸಹಾಯಕ್ಕೆಂದು ಕೂಗಿಕೊಂಡಿದ್ದಾರೆ. ಸ್ಥಳೀಯ ರಕ್ಷಣಾ ಕಾರ್ಯಕರ್ತರು ಮೂವರು ವಿದ್ಯಾರ್ಥಿಗಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಿದ್ದು ಆ ಪೈಕಿ ನಿರ್ಮಲಾ ದಂಗವಾಲ್‌ ಅವರು ಮೃತಪಟ್ಟಿರುವುದಾಗಿ ವೈದ್ಯರು ಖಚಿತ ಪಡಿಸಿದ್ದಾರೆ.

ಈ ಬಗ್ಗೆ ಕ್ರೀಡಾ ಕೂಟದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಒಬ್ಬರು ಪ್ರಾಧ್ಯಪಕರು ಈ ಬೀಚ್‌ ಹೆಸರುವಾಸಿಯಾಗಿದ್ದು ಅಲ್ಲಿ ವಿಹರಿಸಿ ಆಟವಾಡಿ. ಆದರೆ ಅತೀ ಎಚ್ಚರವಾಗಿರಿ. ಇಲ್ಲಿನ ಸಮುದ್ರ ಬಹಳ ಅಪಾಯಾಕಾರಿ ಎಂದು ಎಚ್ಚರಿಕೆ ನೀಡಿದ್ದರು.

ಈ ಬಗ್ಗೆ ಸುರತ್ಕಲ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

4 minutes ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

20 minutes ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

35 minutes ago

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

2 hours ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

3 hours ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

3 hours ago