Featured

ಸುರತ್ಕಲ್ :  ಅ.18ಕ್ಕೆ ಟೋಲ್ ಗೇಟ್ ಮುತ್ತಿಗೆ: ಕುಂದಾಪುರದಿಂದ ನೂರಾರು ಮಂದಿ ಭಾಗವಹಿಸಲು ನಿರ್ಧಾರ – Vishwanews24

ಸುರತ್ಕಲ್ :  ಅ.18ಕ್ಕೆ ಟೋಲ್ ಗೇಟ್ ಮುತ್ತಿಗೆ: ಕುಂದಾಪುರದಿಂದ ನೂರಾರು ಮಂದಿ ಭಾಗವಹಿಸಲು ನಿರ್ಧಾರ

ಕುಂದಾಪುರ : ಹತ್ತು ಕಿ.ಮೀ ಅಂತರದಲ್ಲಿ ಎರಡು ಕಡೆ ಟೋಲ್ ಸಂಗ್ರಹಿಸುವುದು ಹೆದ್ದಾರಿ ದರೋಡೆಗೆ ಸಮ. ಈ ರೀತಿ ಪ್ರಯಾಣಿಕರನ್ನು ಬಲವಂತವಾಗಿ ವಸೂಲಿ ಮಾಡುವುದು ನಿಯಮಗಳ ಉಲ್ಲಂಘನೆಯಾಗಿದೆ. ಆರು ತಿಂಗಳ ತಾತ್ಕಾಲಿಕ ಅವಧಿಗೆ ಆರಂಭಗೊಂಡ ಸುರತ್ಕಲ್ ಟೋಲ್ ಗೇಟ್ ಜನರ ಪ್ರಬಲ ವಿರೋಧದ ಹೊರತಾಗಿಯೂ ಏಳು ವಷ೯ಗಳನ್ನು ಅಕ್ರಮವಾಗಿ ಪೂರೈಸಿದೆ.

ಈ ಅವಧಿಯಲ್ಲಿ ಸುರತ್ಕಲ್, ಬಿ.ಸಿ. ರೋಡ್ ಹೆದ್ದಾರಿಯಲ್ಲಿ ಸುಂಕ ಸಂಗ್ರಹದ ಹೆಸರನಲ್ಲಿ ವಾಹನ ಸವಾರರಿಂದ ವಸೂಲಿ ಮಾಡಿದ ಮೊತ್ತ ಸರಿ ಸುಮಾರು 400 ಕೋಟಿ ರೂಪಾಯಿ. ಇಷ್ಟಾದರೂ ಆಳುವವರ ಹಣದ ದಾಹ ತಣಿಯುತ್ತಿಲ್ಲ ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಆರೋಪಿಸಿದರು.

ಮಲ್ಪೆ: ಆಕಸ್ಮಿಕವಾಗಿ ಕಾಲು ಜಾರಿ ಬೋಟ್ ನಿಂದ ಬಿದ್ದು ಮೀನುಗಾರ ಸಾವು – Vishwanews24

ಕುಂದಾಪುರ ಕಾಮಿ೯ಕ ಭವನದ ಸಬಾಂಗಣದಲ್ಲಿ ಜರುಗಿದ ಟೋಲ್ ಗೇಟ್ ಮುತ್ತಿಗೆ ಹೋರಾಟದ ಯಶಸ್ಸಿಗಾಗಿ ಏಪ‌೯ಡಿಸಿದ ಸಿದ್ಧತಾ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಹೋರಾಟ‌ ಸಮಿತಿಯ ಮುಖಂಡ ಸಹಕಾರಿ ‌ದುರೀಣ ಕೊಳ್ಕೆಬೈಲ್ ಕಿಸನ್ ಹೆಗ್ಡೆ ಮಾತನಾಡಿ, ಟೋಲ್ ಗೇಟ್ ಮುತ್ತಿಗೆ ಹೋರಾಟಕ್ಕೆ ಬಸ್ಸ್ ಮಾಲಕರ ಸಂಘವು ಸಂಪೂಣ೯ ಬೆಂಬಲ ಕೊಡುತ್ತದೆ‌. ಉಡುಪಿ ಜಿಲ್ಲೆಯ ಬಡ ಮಧ್ಯಮ ವರ್ಗದ ಹಾಗೂ ಟ್ಯಾಕ್ಸಿ ಚಾಲಕರನ್ನು ಟೋಲ್ ಗೇಟ್ ಹಿಂದಿರುವ ಶಕ್ತಿಗಳು ನಿರಂತರ ಶೋಷಿಸುತ್ತಿದೆ. ಈ ಶೋಷಣೆಯ ನಾಂದಿಗೆ ನೂರಾರು ಮಂದಿ ಜಿಲ್ಲೆಯಿಂದ ಭಾಗವಹಿಸುವಂತೆ ಕರೆ ನೀಡಿದರು.

ಸಿಐಟಿಯು ಜಿಲ್ಲಾ ಪ್ರಧಾನ ಕಾಯ೯ದಶಿ೯ ಸುರೇಶ ಕಲ್ಲಾಗರ, ಚಂದ್ರಶೇಖರ.ವಿ. ರಮೇಶ್.ವಿ.ರಾಜು ದೇವಾಡಿಗ ರವಿ.ವಿ.ಎಂ.‌,ದಲಿತ ಸಂಘಷ೯ ಸಮಿತಿ ಮುಖಂಡ ನಾಗರಾಜ, ಶ್ರೀನಿವಾಸ ಮಲ್ಯಾಡಿ, ಶ್ರೀನಾಥ ಕುಲಾಲ್, ಗಣೇಶ ಮೆಂಡನ್ ಬಾಲಕೃಷ್ಢ ಎಂ. ವೆಂಕಟೇಶ್ ಕೋಣಿ ಮತ್ತು ಇತರ ಸಮಾನ ಮನಸ್ಕ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

ಪಡುಬಿದ್ರಿ: ಬ್ಲೂಫ್ಲ್ಯಾಗ್‌ ಬೀಚ್‌ ನಿರ್ವಹಣೆಯಲ್ಲಿ ಅಕ್ರಮ..ನಕಲಿ ರಶೀದಿ ಮುದ್ರಿಸಿ ಬೋಟಿಂಗ್‌ಗೆ ಹಣ ವಸೂಲಿ : ಡಿಸಿಗೆ ದೂರು – Vishwanews24

ಟೋಲ್ ಗೇಟ್ ಮುತ್ತಿಗೆ ನೇರ ಕಾಯಾ೯ಚರಣೆಯ ಅಂಗವಾಗಿ ಕುಂದಾಪುರ ಪೇಟೆಯಲ್ಲಿ ಪಾದಯಾತ್ರೆ ಮೂಲಕ ಪ್ರಚಾರ ಜಾಥಾ ನಡೆಸಲು ನಿಧ೯ರಿಸಲಾಯಿತು. ಇಂಟಕ್ ಮುಖಂಡ ಲಕ್ಷ್ಮಣ ಶೆಟ್ಟಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

1 hour ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

1 hour ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

1 hour ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

16 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

17 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

17 hours ago