ಕುಂದಾಪುರ : ಹತ್ತು ಕಿ.ಮೀ ಅಂತರದಲ್ಲಿ ಎರಡು ಕಡೆ ಟೋಲ್ ಸಂಗ್ರಹಿಸುವುದು ಹೆದ್ದಾರಿ ದರೋಡೆಗೆ ಸಮ. ಈ ರೀತಿ ಪ್ರಯಾಣಿಕರನ್ನು ಬಲವಂತವಾಗಿ ವಸೂಲಿ ಮಾಡುವುದು ನಿಯಮಗಳ ಉಲ್ಲಂಘನೆಯಾಗಿದೆ. ಆರು ತಿಂಗಳ ತಾತ್ಕಾಲಿಕ ಅವಧಿಗೆ ಆರಂಭಗೊಂಡ ಸುರತ್ಕಲ್ ಟೋಲ್ ಗೇಟ್ ಜನರ ಪ್ರಬಲ ವಿರೋಧದ ಹೊರತಾಗಿಯೂ ಏಳು ವಷ೯ಗಳನ್ನು ಅಕ್ರಮವಾಗಿ ಪೂರೈಸಿದೆ.
ಈ ಅವಧಿಯಲ್ಲಿ ಸುರತ್ಕಲ್, ಬಿ.ಸಿ. ರೋಡ್ ಹೆದ್ದಾರಿಯಲ್ಲಿ ಸುಂಕ ಸಂಗ್ರಹದ ಹೆಸರನಲ್ಲಿ ವಾಹನ ಸವಾರರಿಂದ ವಸೂಲಿ ಮಾಡಿದ ಮೊತ್ತ ಸರಿ ಸುಮಾರು 400 ಕೋಟಿ ರೂಪಾಯಿ. ಇಷ್ಟಾದರೂ ಆಳುವವರ ಹಣದ ದಾಹ ತಣಿಯುತ್ತಿಲ್ಲ ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಆರೋಪಿಸಿದರು.
ಮಲ್ಪೆ: ಆಕಸ್ಮಿಕವಾಗಿ ಕಾಲು ಜಾರಿ ಬೋಟ್ ನಿಂದ ಬಿದ್ದು ಮೀನುಗಾರ ಸಾವು – Vishwanews24
ಕುಂದಾಪುರ ಕಾಮಿ೯ಕ ಭವನದ ಸಬಾಂಗಣದಲ್ಲಿ ಜರುಗಿದ ಟೋಲ್ ಗೇಟ್ ಮುತ್ತಿಗೆ ಹೋರಾಟದ ಯಶಸ್ಸಿಗಾಗಿ ಏಪ೯ಡಿಸಿದ ಸಿದ್ಧತಾ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಹೋರಾಟ ಸಮಿತಿಯ ಮುಖಂಡ ಸಹಕಾರಿ ದುರೀಣ ಕೊಳ್ಕೆಬೈಲ್ ಕಿಸನ್ ಹೆಗ್ಡೆ ಮಾತನಾಡಿ, ಟೋಲ್ ಗೇಟ್ ಮುತ್ತಿಗೆ ಹೋರಾಟಕ್ಕೆ ಬಸ್ಸ್ ಮಾಲಕರ ಸಂಘವು ಸಂಪೂಣ೯ ಬೆಂಬಲ ಕೊಡುತ್ತದೆ. ಉಡುಪಿ ಜಿಲ್ಲೆಯ ಬಡ ಮಧ್ಯಮ ವರ್ಗದ ಹಾಗೂ ಟ್ಯಾಕ್ಸಿ ಚಾಲಕರನ್ನು ಟೋಲ್ ಗೇಟ್ ಹಿಂದಿರುವ ಶಕ್ತಿಗಳು ನಿರಂತರ ಶೋಷಿಸುತ್ತಿದೆ. ಈ ಶೋಷಣೆಯ ನಾಂದಿಗೆ ನೂರಾರು ಮಂದಿ ಜಿಲ್ಲೆಯಿಂದ ಭಾಗವಹಿಸುವಂತೆ ಕರೆ ನೀಡಿದರು.
ಸಿಐಟಿಯು ಜಿಲ್ಲಾ ಪ್ರಧಾನ ಕಾಯ೯ದಶಿ೯ ಸುರೇಶ ಕಲ್ಲಾಗರ, ಚಂದ್ರಶೇಖರ.ವಿ. ರಮೇಶ್.ವಿ.ರಾಜು ದೇವಾಡಿಗ ರವಿ.ವಿ.ಎಂ.,ದಲಿತ ಸಂಘಷ೯ ಸಮಿತಿ ಮುಖಂಡ ನಾಗರಾಜ, ಶ್ರೀನಿವಾಸ ಮಲ್ಯಾಡಿ, ಶ್ರೀನಾಥ ಕುಲಾಲ್, ಗಣೇಶ ಮೆಂಡನ್ ಬಾಲಕೃಷ್ಢ ಎಂ. ವೆಂಕಟೇಶ್ ಕೋಣಿ ಮತ್ತು ಇತರ ಸಮಾನ ಮನಸ್ಕ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.
ಟೋಲ್ ಗೇಟ್ ಮುತ್ತಿಗೆ ನೇರ ಕಾಯಾ೯ಚರಣೆಯ ಅಂಗವಾಗಿ ಕುಂದಾಪುರ ಪೇಟೆಯಲ್ಲಿ ಪಾದಯಾತ್ರೆ ಮೂಲಕ ಪ್ರಚಾರ ಜಾಥಾ ನಡೆಸಲು ನಿಧ೯ರಿಸಲಾಯಿತು. ಇಂಟಕ್ ಮುಖಂಡ ಲಕ್ಷ್ಮಣ ಶೆಟ್ಟಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…