Featured

ಸುರತ್ಕಲ್‌  : ಆಸ್ಪತ್ರೆಯಲ್ಲಿ ಮಹಿಳೆಯ‌ರು ಬಟ್ಟೆ ಬದಲಾಯಿಸುವ ಕೊಠಡಿಯಲ್ಲಿ ರಹಸ್ಯ ಕ್ಯಾಮರಾ : ನರ್ಸಿಂಗ್ ವಿದ್ಯಾರ್ಥಿ ಅರೆಸ್ಟ್‌ – Vishwanews24

ಸುರತ್ಕಲ್‌  : ಆಸ್ಪತ್ರೆಯಲ್ಲಿ ಮಹಿಳೆಯ‌ರು ಬಟ್ಟೆ ಬದಲಾಯಿಸುವ ಕೊಠಡಿಯಲ್ಲಿ ರಹಸ್ಯ ಕ್ಯಾಮರಾ : ನರ್ಸಿಂಗ್ ವಿದ್ಯಾರ್ಥಿ ಅರೆಸ್ಟ್‌

ಸುರತ್ಕಲ್‌ನ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಹಿಳೆಯರು ಉಡುಪು ಬದಲಾಯಿಸುವ ಕೊಠಡಿಯಲ್ಲಿ ರಹಸ್ಯ ಕ್ಯಾಮರಾ ಇರಿಸಿ ದೃಶ್ಯಗಳನ್ನು ಸೆರೆ ಹಿಡಿದ ಆರೋಪದಲ್ಲಿ 21 ವರ್ಷದ ನರ್ಸಿಂಗ್ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ನರ್ಸಿಂಗ್‌ ವಿದ್ಯಾರ್ಥಿ ಪವನ್ ಕುಮಾರ್ ಈ ಕೃತ್ಯವೆಸಗಿದ ಆರೋಪಿ. ಮೂಲತಃ ಕಲಬುರಗಿಯವನಾದ ಪವನ್ ಬಜಪೆಯಲ್ಲಿ ವಾಸವಾಗಿದ್ದ.ಆಸ್ಪತ್ರೆಗೆ ತಪಾಸಣೆಗೆ ಬಂದವರು ಸ್ಯಾನಿಂಗ್‌ಗೆ ಒಳಗಾಗುವ ಮುನ್ನ ಬಟ್ಟೆ ಬದಲಾಯಿಸಬೇಕಾಗುತ್ತದೆ.

ಪವನ್ ಮಹಿಳೆಯರು ಬಟ್ಟೆ ಬದಲಾಯಿಸುವ ಕೂಠಡಿಯಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದು, ಸ್ಯಾನಿಂಗ್‌ಗೆ ಒಳಗಾಗಲು ಬಂದಿದ್ದ ಯುವತಿಯೊಬ್ಬರು ಉಡುಪು ಬದಲಾಯಿಸುವ ಮೊದಲು ಕೊಠಡಿಯನ್ನು ಸೂಕ್ತವಾಗಿ ಪರಿಶೀಲಿಸಿದಾಗ ಮೂಲೆಯಲ್ಲಿ ರಹಸ್ಯ ಕ್ಯಾಮರಾ ಇರುವುದು ಪತ್ತೆಯಾಗಿದೆ.

ಕೂಡಲೇ ಅವರು ಈ ವಿಷಯವನ್ನು ವೈದ್ಯರ ಗಮನಕ್ಕೆ ತಂದಿದ್ದಾರೆ, ತನಿಖೆ ನಡೆಸಿದಾಗ ಪವನ್ ಕುಮಾರ್‌ ಕ್ಯಾಮರಾ ಇಟ್ಟಿರುವುದು ಪತ್ತೆಯಾಗಿದೆ. ಸುರತ್ಕಲ್ ಠಾಣೆಗೆ ಅವನ ವಿರುದ್ಧ ದೂರು ನೀಡಲಾಗಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

23 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

23 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago