ಸುರತ್ಕಲ್: ಪ್ರವಾಸಕ್ಕೆಂದು ಬಂದಿದ್ದ ನಾಲ್ವರು ಸ್ನೇಹಿತರು ಈಜಾಡಲು ನೀರಿಗೆ ಇಳಿದಿದ್ದು, ಈ ಪೈಕಿ ಮೂವರು ನೀರಿನಲ್ಲಿ ಕೊಚ್ಚಿ ಹೋಗಿದ್ದು, ಒಬ್ಬರನ್ನು ರಕ್ಷಿಸಿದ ಘಟನೆ ಜ.8ರ ಬುಧವಾರ ಇಲ್ಲಿನ ಹೊಸಬೆಟ್ಟು ಬೀಚ್ ನ ನಿರ್ಮಾಣ ಹಂತದ ಜೆಟ್ಟಿ ಬಳಿಯಿರುವ ಬೀಚ್ ನಲ್ಲಿ ಸಂಭವಿಸಿದೆ.
ಬೆಂಗಳೂರು ಜೆಪಿನಗರ ನಿವಾಸಿ ಸತ್ಯವೇಲು (30), ಶಿವಮೊಗ್ಗದ ಶಿವಕುಮಾರ್, ಚಿತ್ರದುರ್ಗ ಜಿಲ್ಲೆಯ ಗುಳಿ ಹೊಸಹಳ್ಳಿ, ಉಪ್ಪರಿಗೇನಹಳ್ಳಿಯ ಶಿವಲಿಂಗಪ್ಪ ಅವರ ಪುತ್ರ ಮಂಜುನಾಥ್. ಎಸ್ (31) ಮೃತಪಟ್ಟವರಾಗಿದ್ದು, ಬೀದರ್ ಜಿಲ್ಲೆಯ ಹಂಗಾರಗಾದ ವಿಶ್ವಂಬರ್ ಅವರ ಪುತ್ರ ಪರಮೇಶ್ವರ್ (30) ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇವರಲ್ಲಿ ಶಿವಕುಮಾರ್ ಮತ್ತು ಸತ್ಯವೇಲು ಎಂಬವರ ಮೃತದೇಹ ದೊರಕಿದ್ದು, ಮಂಜುನಾಥ್ ಅವರ ಮೃತದೇಹಕ್ಕಾಗಿ ಪತ್ತೆ ಕಾರ್ಯ ಮುಂದುವರೆದಿದೆ.
ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಬೆಟ್ಟು ಬೀಚ್ ನ ಜೆಟ್ಟಿ ಬಳಿಯಿರುವ ಬೀಚ್ ನಲ್ಲಿ ಈ ಘಟನೆ ಸಂಭವಿಸಿದ್ದು, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುವುದು.
ಮೃತದೇಹಗಳನ್ನು ನಗರದ ಎ.ಜೆ.ಆಸ್ಪತ್ರೆಗೆ ರವಾನಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…