ಸುರತ್ಕಲ್: ಪ್ರವಾಸಕ್ಕೆಂದು ಬಂದಿದ್ದ ನಾಲ್ವರು ಸ್ನೇಹಿತರು ಈಜಾಡಲು ನೀರಿಗೆ ಇಳಿದಿದ್ದು, ಈ ಪೈಕಿ ಮೂವರು ನೀರಿನಲ್ಲಿ ಕೊಚ್ಚಿ ಹೋಗಿದ್ದು, ಒಬ್ಬರನ್ನು ರಕ್ಷಿಸಿದ ಘಟನೆ ಜ.8ರ ಬುಧವಾರ ಇಲ್ಲಿನ ಹೊಸಬೆಟ್ಟು ಬೀಚ್ ನ ನಿರ್ಮಾಣ ಹಂತದ ಜೆಟ್ಟಿ ಬಳಿಯಿರುವ ಬೀಚ್ ನಲ್ಲಿ ಸಂಭವಿಸಿದೆ.
ಬೆಂಗಳೂರು ಜೆಪಿನಗರ ನಿವಾಸಿ ಸತ್ಯವೇಲು (30), ಶಿವಮೊಗ್ಗದ ಶಿವಕುಮಾರ್, ಚಿತ್ರದುರ್ಗ ಜಿಲ್ಲೆಯ ಗುಳಿ ಹೊಸಹಳ್ಳಿ, ಉಪ್ಪರಿಗೇನಹಳ್ಳಿಯ ಶಿವಲಿಂಗಪ್ಪ ಅವರ ಪುತ್ರ ಮಂಜುನಾಥ್. ಎಸ್ (31) ಮೃತಪಟ್ಟವರಾಗಿದ್ದು, ಬೀದರ್ ಜಿಲ್ಲೆಯ ಹಂಗಾರಗಾದ ವಿಶ್ವಂಬರ್ ಅವರ ಪುತ್ರ ಪರಮೇಶ್ವರ್ (30) ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇವರಲ್ಲಿ ಶಿವಕುಮಾರ್ ಮತ್ತು ಸತ್ಯವೇಲು ಎಂಬವರ ಮೃತದೇಹ ದೊರಕಿದ್ದು, ಮಂಜುನಾಥ್ ಅವರ ಮೃತದೇಹಕ್ಕಾಗಿ ಪತ್ತೆ ಕಾರ್ಯ ಮುಂದುವರೆದಿದೆ.
ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಬೆಟ್ಟು ಬೀಚ್ ನ ಜೆಟ್ಟಿ ಬಳಿಯಿರುವ ಬೀಚ್ ನಲ್ಲಿ ಈ ಘಟನೆ ಸಂಭವಿಸಿದ್ದು, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುವುದು.
ಮೃತದೇಹಗಳನ್ನು ನಗರದ ಎ.ಜೆ.ಆಸ್ಪತ್ರೆಗೆ ರವಾನಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…