ಮಂಗಳೂರು: ಸುರತ್ಕಲ್ ಸಮೀಪದ ಎನ್ಐಟಿಕೆ ಟೋಲ್ಗೇಟ್ನಲ್ಲಿ ಟೋಲ್ ಹಣ ನೀಡದೇ ಪಿಸ್ತೂಲ್ ತೋರಿಸಿ ಜೀವ ಬೆದರಿಕೆ ಹಾಕಿದ್ದಾನೆ ಎಂಬ ಆರೋಪದಲ್ಲಿ ಯುವಕನೋರ್ವನನ್ನು ಮಂಗಳೂರು ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಕೇರಳದ ಕಾಸರಗೋಡು ನಿವಾಸಿ, ಕಾರು ಚಾಲಕ ರಫೀಕ್ (36) ಬಂಧಿತ ಆರೋಪಿ.
ಗುರುವಾರ ಮಧ್ಯಾಹ್ನ 12:40ಕ್ಕೆ ಸುರತ್ಕಲ್ ಠಾಣೆ ವ್ಯಾಪ್ತಿಯ ಎನ್ಐಟಿಕೆ ಟೋಲ್ಗೇಟ್ನಲ್ಲಿ ಸುರತ್ಕಲ್ ಕಡೆಯಿಂದ ಬಂದ ಕೇರಳದ ಪಾಸಿಂಗ್ನ ಕಾರು ಚಾಲಕನು ಟೋಲ್ ನೀಡಲು ನಿರಾಕರಿಸಿದ್ದಾನೆ. ಅಲ್ಲದೆ, ಟೋಲ್ ಸಿಬ್ಬಂದಿ ಮಹಿಳೆ ಜತೆ ವಾದಕ್ಕಿಳಿದಿದ್ದಾನೆ. ಈ ವೇಳೆ ಮತ್ತೋರ್ವ ಸಿಬ್ಬಂದಿ ಯಜ್ಞೇಶ್ ಕರ್ಕೇರಾ ಆರೋಪಿಯಲ್ಲಿ ಟೋಲ್ ಹಣ ನೀಡುವಂತೆ ಕೇಳಿದ್ದು, ಆರೋಪಿಯು ಕಾರಿನ ಒಳಗಿನಿಂದ ಪಿಸ್ತೂಲ್ ತೆಗೆದು, ‘ತಾಕತ್ತಿದ್ದರೆ ತೆಗೆದುಕೊ, ಹತ್ತಿರ ಬಂದರೆ ಕೊಂದು ಹಾಕುತ್ತೇನೆ’ ಎಂದು ಜೀವ ಬೆದರಿಕೆ ಒಡ್ಡಿರುವುದಾಗಿ ದೂರು ದಾಖಲಾಗಿದೆ.
ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 506 (2) (ಜೀವ ಬೆದರಿಕೆ) ಮತ್ತು ಕಲಂ 25ರ ಇಂಡಿಯನ್ ಆರ್ಮ್ಸ್ ಆಯಕ್ಟ್ನಂತೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೂಡಲೇ ಕಾರ್ಯ ಪ್ರವೃತ್ತರಾದ ಸುರತ್ಕಲ್ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ, ಕಾರು ಮತ್ತು ಕೃತ್ಯಕ್ಕೆ ಬಳಸಿದ ಪಿಸ್ತೂಲ್ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…