ಸುರತ್ಕಲ್ : ಇಲ್ಲಿನ ಎನ್.ಐ.ಟಿ.ಕೆ ಟೋಲ್ ಗೇಟ್ ಬಳಿ ಬೈಕ್ ಅಪಘಾತಕ್ಕೀಡಾಗಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ಬಜ್ಪೆ ಕಂಜಾರು ಶ್ರೀದೇವಿ ಕಾಲೇಜು ವಿದ್ಯಾರ್ಥಿ ಮೂಲತಃ ಮಡಿಕೇರಿಯ ಸೋಮವಾರಪೇಟೆ ಬಿಟಿ ಕಟ್ಟೆಯ ನಿವಾಸಿ ಶಶಾಂಕ್(21) ಮೃತಪಟ್ಟ ಯುವಕ. ಇವರು ನಿನ್ನೆ ತಡರಾತ್ರಿ ತನ್ನ ಸ್ನೇಹಿತನೊಂದಿಗೆ ದ್ವಿಚಕ್ರ ವಾಹನದಲ್ಲಿ ಸುರತ್ಕಲ್ ಕಡೆಯಿಂದ ಮುಲ್ಕಿ ಕಡೆ ಸಂಚರಿಸುತ್ತಿದ್ದ ವೇಳೆ ಸುರತ್ಕಲ್ ಟೋಲ್ ಗೇಟ್ ಬಳಿ ಬೈಕ್ ಅಪಘಾತಕ್ಕೀಡಾಗಿದೆ. ಬೈಕ್ ನಲ್ಲಿ ಹಿಂಬದಿ ಸವಾರರಾಗಿ ತೆರಳುತ್ತಿದ್ದ ಇವರು ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ಚಲಾಯಿಸುತ್ತಿದ್ದ ಆತನ ಸ್ನೇಹಿತನಿಗೆ ಸಣ್ಣಪುಟ್ಟ ಗಾಯಗಳಾಗಿತ್ತು. ತಕ್ಷಣ ವಾಹನ ಸವಾರರು ಆತನನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಅತ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ವಿಭಾಗದ ಎಸಿಪಿ ಗೀತಾ ಕುಲಕರ್ಣಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…