ಸುರತ್ಕಲ್: ನಗರದ ಸುರತ್ಕಲ್ ಕಾಟಿಪಳ್ಳ ನಿವಾಸಿ ಸಂತೋಷ್ ಕುಮಾರ್(43) ಎಂಬವರು ಕಾಣೆಯಾಗಿದ್ದು, ಸುರತ್ಕಲ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎರಡು ವರ್ಷಗಳ ಹಿಂದೆ ಪರಿಚಿತನಾದ ದೀಪಿತ್ ಎಂಬವನೊಂದಿಗೆ ಮೂರು ತಿಂಗಳ ಹಿಂದೆ ಚಿಕ್ಕ ಗಲಾಟೆಯಾಗಿದ್ದು, ಈ ವಿಷಯದಲ್ಲಿ ಸಂತೋಷ ಕುಮಾರ್ರವರು ಮನಸ್ತಾಪ ಮಾಡಿಕೊಂಡಿದ್ದರು. ನವೆಂಬರ್ 7 ರಂದು ಮನೆ ಬಿಟ್ಟು ಹೋಗಿ ಅಣ್ಣನಿಗೆ ವ್ಯಾಟ್ಸ್ಆಪ್ ಮೂಲಕ “ಅಣ್ಣ ನನ್ನನ್ನು ಕ್ಷಮಿಸು ತಾಯಿಯನ್ನು ಚೆನ್ನಾಗಿ ನೋಡಿಕೊ ತಾನು ಸಾಯುವ ನಿರ್ಧಾರ ಮಾಡಿರುವುದಾಗಿ ತನ್ನ ಸಾವಿಗೆ ದೀಪಿತ್ ಮತ್ತು ಮಹೇಂದ್ರ” ರವರು ಕಾರಣ ಎಂದು ಮೇಸೆಜ್ ಮಾಡಿದ್ದು, ನಂತರ ಆತನ ಮೊಬೈಲ್ ಸ್ವಿಚ್ ಆಪ್ ಆಗಿರುತ್ತದೆ.
ಕಾಣೆಯಾದವರ ಚಹರೆ: ಎತ್ತರ: 6.3 ಅಡಿ, ಗೋಧಿ ಮೈಬಣ್ಣ, ಸಾಧಾರಣ ಶರೀರ, ಕಪ್ಪು ಕೂದಲು ಹೊಂದಿರುತ್ತಾರೆ. ಕಾಣೆಯಾದ ದಿನ ಸ್ಕೈ ಬ್ಲ್ಯೂ ತುಂಬು ತೋಳಿನ ಟಿ-ಶರ್ಟ್, ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದರು. ಕನ್ನಡ, ತುಳು, ಹಿಂದಿ ಭಾಷೆ ಮಾತನಾಡುತ್ತಾರೆ.
ಕಾಣೆಯಾದವರ ಬಗ್ಗೆ ಮಾಹಿತಿ ಪತ್ತೆಯಾದಲ್ಲಿ ಸುರತ್ಕಲ್ ಪೋಲಿಸ್ ಠಾಣೆ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…