Featured

ಸುರತ್ಕಲ್ : ಕೊರೊನಾ ಭಯ ; ದಂಪತಿ ಆತ್ಮಹತ್ಯೆಗೆ ಶರಣು -Vishwanews24

ಸುರತ್ಕಲ್ : ಕೊರೊನಾ ಭಯ ; ದಂಪತಿ ಆತ್ಮಹತ್ಯೆಗೆ ಶರಣು -Vishwanews24

ಸುರತ್ಕಲ್: ಕೊರೊನಾ ಸೋಂಕು ತಗುಲಿದೆ ಎಂಬ ಆತಂಕದಲ್ಲಿ ದಂಪತಿಗಳಿಬ್ಬರು ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಅವರಿಗೆ ವಾಟ್ಸಪ್ ಧ್ವನಿ ಮುದ್ರಣ ಕಳುಹಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಸುರತ್ಕಲ್ ಕುಳಾಯಿ ಚಿತ್ರಾಪುರ ಎಂಬಲ್ಲಿ ನಡೆದಿದೆ.

ಪಡುಬಿದ್ರಿ ನಿವಾಸಿ ಉದ್ಯಮಿ ರಮೇಶ್ ಸುವರ್ಣ ಮತ್ತು ಗುಣವತಿ ಸುವರ್ಣ ಆತ್ಮಹತ್ಯೆ ಮಾಡಿಕೊಂಡ ದಂಪತಿ. ಆತ್ಮಹತ್ಯೆಗೂ ಮೊದಲು ಪತಿ ರಮೇಶ್ ಸುವರ್ಣ ಅವರು ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಅವರಿಗೆ ವಾಟ್ಸಾಪ್ ಧ್ವನಿ ಮುದ್ರಣ ಕಳುಹಿಸಿದ್ದರು. ಶಶಿಕುಮಾರ್ ಅವರು ಕೂಡಲೇ ಕಾರ್ಯ ಪೃವೃತ್ತರಾಗಿ ಸ್ಥಳಕ್ಕೆ ಪೊಲೀಸ್ ಪಡೆಯನ್ನು ಕಳುಹಿಸಿದರು. ಆದರೆ ಅದಾಗಲೇ ದಂಪತಿ ನೇಣಿಗೆ ಶರಣಾಗಿದ್ದರು ಎಂದು ತಿಳಿದುಬಂದಿದೆ.

‘ನನ್ನ ಆರೋಗ್ಯದಲ್ಲಿ ಆಗುತ್ತಿರುವ ಬದಲಾವಣೆಗಳನ್ನು ನೋಡಿದಾಗ ಭಯ ಆಗುತ್ತಿದೆ. ನನ್ನ ಗಂಡನಿಗೂ ಮೂರು ದಿನದಿಂದ ಕೋವಿಡ್ ಲಕ್ಷಣಗಳು ಕಾಣಿಸಿದ್ದು, ನಮಗೆ ಜೀವನವೇ ಬೇಡ ಎಂಬ ಮನಸ್ಥಿತಿಗೆ ಬಂದಿದ್ದೇವೆ. ನಾನು ಮತ್ತು ಗಂಡ ನಿರ್ಧರಿಸಿದ ಪ್ರಕಾರ ಹಿಂದೂ ಸಂಘಟನೆಯ ಶರಣ್ ಪಂಪ್ ವೆಲ್ ಮತ್ತು ಸತ್ಯಜಿತ್ ಸುರತ್ಕಲ್ ಅವರು ನಮ್ಮ ಅಂತ್ಯಕ್ರಿಯೆಯನ್ನು ನಡೆಸಬೇಕು. ಅದಕ್ಕಾಗಿ ಒಂದು ಲಕ್ಷ ರೂ. ಇಟ್ಟಿದ್ದೇವೆ’ ಎಂದು ಪತ್ನಿ ಗುಣವತಿ ಸುವರ್ಣ ಡೆತ್ ನೋಟ್ ಬರೆದಿದ್ದಾರೆ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

6 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

6 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

7 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

7 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago