ಸುರತ್ಕಲ್: ಕೊರೊನಾ ಸೋಂಕು ತಗುಲಿದೆ ಎಂಬ ಆತಂಕದಲ್ಲಿ ದಂಪತಿಗಳಿಬ್ಬರು ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಅವರಿಗೆ ವಾಟ್ಸಪ್ ಧ್ವನಿ ಮುದ್ರಣ ಕಳುಹಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಸುರತ್ಕಲ್ ಕುಳಾಯಿ ಚಿತ್ರಾಪುರ ಎಂಬಲ್ಲಿ ನಡೆದಿದೆ.
ಪಡುಬಿದ್ರಿ ನಿವಾಸಿ ಉದ್ಯಮಿ ರಮೇಶ್ ಸುವರ್ಣ ಮತ್ತು ಗುಣವತಿ ಸುವರ್ಣ ಆತ್ಮಹತ್ಯೆ ಮಾಡಿಕೊಂಡ ದಂಪತಿ. ಆತ್ಮಹತ್ಯೆಗೂ ಮೊದಲು ಪತಿ ರಮೇಶ್ ಸುವರ್ಣ ಅವರು ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಅವರಿಗೆ ವಾಟ್ಸಾಪ್ ಧ್ವನಿ ಮುದ್ರಣ ಕಳುಹಿಸಿದ್ದರು. ಶಶಿಕುಮಾರ್ ಅವರು ಕೂಡಲೇ ಕಾರ್ಯ ಪೃವೃತ್ತರಾಗಿ ಸ್ಥಳಕ್ಕೆ ಪೊಲೀಸ್ ಪಡೆಯನ್ನು ಕಳುಹಿಸಿದರು. ಆದರೆ ಅದಾಗಲೇ ದಂಪತಿ ನೇಣಿಗೆ ಶರಣಾಗಿದ್ದರು ಎಂದು ತಿಳಿದುಬಂದಿದೆ.
‘ನನ್ನ ಆರೋಗ್ಯದಲ್ಲಿ ಆಗುತ್ತಿರುವ ಬದಲಾವಣೆಗಳನ್ನು ನೋಡಿದಾಗ ಭಯ ಆಗುತ್ತಿದೆ. ನನ್ನ ಗಂಡನಿಗೂ ಮೂರು ದಿನದಿಂದ ಕೋವಿಡ್ ಲಕ್ಷಣಗಳು ಕಾಣಿಸಿದ್ದು, ನಮಗೆ ಜೀವನವೇ ಬೇಡ ಎಂಬ ಮನಸ್ಥಿತಿಗೆ ಬಂದಿದ್ದೇವೆ. ನಾನು ಮತ್ತು ಗಂಡ ನಿರ್ಧರಿಸಿದ ಪ್ರಕಾರ ಹಿಂದೂ ಸಂಘಟನೆಯ ಶರಣ್ ಪಂಪ್ ವೆಲ್ ಮತ್ತು ಸತ್ಯಜಿತ್ ಸುರತ್ಕಲ್ ಅವರು ನಮ್ಮ ಅಂತ್ಯಕ್ರಿಯೆಯನ್ನು ನಡೆಸಬೇಕು. ಅದಕ್ಕಾಗಿ ಒಂದು ಲಕ್ಷ ರೂ. ಇಟ್ಟಿದ್ದೇವೆ’ ಎಂದು ಪತ್ನಿ ಗುಣವತಿ ಸುವರ್ಣ ಡೆತ್ ನೋಟ್ ಬರೆದಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…