ಸುರತ್ಕಲ್: ಕೋವಿಡ್ 19 ಗೆ ಬಲಿಯಾಗಿರುವ ಜನರು ಅಪೆಕ್ಸ್ ಮತ್ತು ಡಿಸಿಸಿ ಬ್ಯಾಂಕ್ ಗಳಲ್ಲಿ ಮಾಡಿರುವ ಸಾಲವನ್ನು ಮನ್ನಾ ಮಾಡಲು ಸರಕಾರ ಮುಂದಾಗಿದೆ.ಇದಕ್ಕೆ ಒಟ್ಟು 81 ಕೋಟಿ ರೂ.ಗಳ ಅವಶ್ಯಕತೆಯಿದೆ. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ತೀರ್ಮಾನ ಮಾಡಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ಹೇಳಿದ್ದಾರೆ.
ಬೈಕಂಪಾಡಿಯಲ್ಲಿ ಹಣ್ಣು ತರಕಾರಿ ಮಾರಾಟ ದ ಸ್ಮಾರ್ಟ್ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.
ಡಿಸಿಸಿ ಬ್ಯಾಂಕ್ಗಳ ಲಾಭ ನಷ್ಟ ಲೆಕ್ಕಾಚಾರವನ್ನು ಈ ವಿಚಾರದಲ್ಲಿ ಪರಿಗಣನೆಗೆ ತೆಗೆದುಕೊಳ್ಳ ಬೇಕಾಗುತ್ತದೆ ಎಂದರು.
ಕೇಂದ್ರ ಸರಕಾರ ಸಹಕಾರ ಸಚಿವಾಲಯ ಆರಂಭಿಸಿದ್ದು 1 ಲಕ್ಷ ಕೋಟಿ ಬಜೆಟ್ ನೀಡಿದೆ.ಇದರಿಂದ ಎಪಿಎಂಸಿಗಳ ಬಲವರ್ಧನೆ ಸಾಧ್ಯವಾಗಲಿದೆ ಎಂದು ಸಮರ್ಥಿಸಿಕೊಂಡರು.
ಮಂಗಳೂರು ಎಪಿಎಂಸಿಯನ್ನು ಮಾದರಿಯಾಗಿ ಮಾಡಲು ಎಲ್ಲಾ ಕಾರ್ಯಯೋಜನೆ ರೂಪಿಸಲಾಗುವುದು ಎಂದು ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ,ಉಮಾನಾಥ ಕೋಟ್ಯಾನ್,ವೇದವ್ಯಾಸ ಕಾಮತ್ಡಾ.ಭರತ್ ಶೆಟ್ಟಿ ವೈ,ಮೇಯರ್ ಪ್ರೇಮಾನಂದ ಶೆಟ್ಟಿ ಎಪಿಎಂಸಿ ಅಧ್ಯಕ್ಷ ಕೃಷ್ಣರಾಜ ಹೆಗ್ಡೆ ಉಪಾಧ್ಯಕ್ಷೆ ರಜನೀ ದುಗ್ಗಣ್ಣ,ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…