ಸುರತ್ಕಲ್ : ಚಲಿಸುತ್ತಿದ್ದ ಕಾರು ಬೆಂಕಿಗಾಹುತಿ – vishwanews24
ಸುರತ್ಕಲ್ : ಚಲಿಸುತ್ತಿರುವಾಗಲೇ ಹೊತ್ತಿ ಉರಿದ ಕಾರು
ಸುರತ್ಕಲ್ :ಮಂಗಳೂರು ರಾಷ್ಟ್ರಿಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರೊಂದು ಹಟಾತ್ತನೆ ಬೆಂಕಿಗೆ ಆಹುತಿಯಾಗಿರುವ ಘಟನೆ ಸುರತ್ಕಲ್ ಎನ್ ಐಟಿಕೆ ಹಳೆ ಟೋಲ್ ಗೇಟ್ ಬಳಿ ಗುರುವಾರ ಬೆಳಗ್ಗೆ ವರದಿಯಾಗಿದೆ.
ಸುಟ್ಟು ಕರಕಲಾದ ಕಾರು ಬಿಎಂಡಬ್ಲ್ಯೂ ಕಂಪೆನಿಯ ಕಾರೆಂದು ಹೇಳಲಾಗುತ್ತಿದ್ದು, ಕಾರು ಉಡುಪಿಕ ಡೆಯಿಂದ ರಾಷ್ಟ್ರೀಯ ಹೆದ್ದಾರಿಯಾಗಿ ಮಂಗಳೂರು ಕಡೆ ತೆರಳುತ್ತಿತ್ತು ಎನ್ನಲಾಗಿದೆ.
ಉಡುಪಿ : ಸುಸಜ್ಜಿತ ಇಎಸ್ಐ ಆಸ್ಪತ್ರೆ ಕಾಮಗಾರಿ ಶೀಘ್ರ ಆರಂಭ: ಕೋಟ – vishwanews24
ಎನ್ ಐಟಿಕೆ ಬಳಿ ಏಕಾಏಕಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಭಸ್ಮವಾಗಿದೆ ಎನ್ನಲಾಗಿದೆ. ಬೆಂಕಿ ಅವಘಡದಲ್ಲಿ ಸಾವು ನೋವು ಸಂಭವಿಸಿರುವ ಮಾಹಿತಿ ಲಭ್ಯವಾಗಿಲ್ಲ.
ಮಂಗಳೂರು ಉತ್ತರ ಸಂಚಾರ ಪೊಲೀಸರು, ಸುರತ್ಕಲ್ ಠಾಣೆಯ ಪೊಲಿಸರು ಸ್ಥಳಕ್ಕೆ ದೌಡಾಯಿಸಿದ್ದು, ಅಗ್ನಿ ಶಾಮಕ ದಳಕ್ಕೆ ಸಾರ್ವಜನಿಕರು ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.
ಮಂಗಳೂರು : ಕಡಬ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ಪ್ರಕರಣ ; ಆರೋಪಿಯ ಜಾಮೀನು ಅರ್ಜಿ ವಜಾ – vishwanews24
