ಸುರತ್ಕಲ್ : ರಜಾ ಹಿನ್ನೆಲೆ ಬೀಚ್ ಗೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿ-ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿದ್ದು, ವಿಟ್ಲ ಮೂಲದ ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಸುರತ್ಕಲ್ ಸಮೀಪದ ಚಿತ್ರಾಪುರ ಬೀಚ್ ನಲ್ಲಿ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿ ನಿಶಾ ಎಂದು ಗುರುತಿಸಲಾಗಿದ್ದು, ಈಕೆ ಮೂಲತಃ ನೇಪಾಲ ನಿವಾಸಿಯಾಗಿದ್ದು, ಪ್ರಸ್ತುತ ವಿಟ್ಲದಲ್ಲಿ ವಾಸವಾಗಿದ್ದಾಳೆ. ವಿಟ್ಲ ಮೂಲದ ದಿಗಂತ (15) ದಿವ್ಯರಾಜ್ (15) ತೇಜಸ್ (14) ಕೀರ್ತನ್ (16) ಅಶ್ಮಿತಾ (15) ನಿಶಾ (15) ಇವರೆಲ್ಲರೂ ಕುಳಾಯಿ ಚಿತ್ರಾಪುರ ಬೀಚ್ ಗೆ ನೀರಲ್ಲಿ ಆಟ ಆಡಲು ತೆರಳಿದಾಗ ನೀರಿನ ಅಲೆಯ ರಭಸಕ್ಕೆ ನೀರಿನಲ್ಲಿ ಮುಳುಗಿದ್ದು, ಇವರನ್ನು ಹತ್ತಿರದ ಮೀನುಗಾರರು ಮತ್ತು ಸ್ಥಳೀಯರು ರಕ್ಷಣೆ ಮಾಡಿದ್ದಾರೆ.
ನಾಲ್ಕು ಜನ ಆರೋಗ್ಯವಾಗಿದ್ದು, ತೇಜಸ್ ಎಂಬ ಬಾಲಕನನ್ನು ಮುಕ್ಕ ಖಾಸಗಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ನಿಶಾ ಎಂಬ ಬಾಲಕಿಯು ಮೃತಪಟ್ಟಿರುತ್ತಾರೆ. ನಿಶಾ ಮತ್ತು ಅಶ್ವಿತಾ ನೇಪಾಳ ಮೂಲದವರು ಎಂದು ವರದಿಯಾಗಿದೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…