ಮಂಗಳೂರು: ಶನಿವಾರದಂದು ರಾತ್ರಿ ಕಾಟಿಪಳ್ಳದಲ್ಲಿ ಹತ್ಯೆ ಪ್ರಕರಣವಾಗಿದ್ದು, ಸುರತ್ಕಲ್ ಜಂಕ್ಷನ್ನಲ್ಲಿ ಪೊಲೀಸರು ಬರೆ ಹಾಕಿದ್ದು, ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ.
ಸುರತ್ಕಲ್ ಪೊಲೀಸರ ವಾಹನ ನಿಲುಗಡೆ, ಓಡಾಟಕ್ಕೆ ಹಾಗೂ ಭಾನುವಾರ ಜಲೀಲ್ ಅವರ ಪಾರ್ಥಿವ ಶರೀರ ಕೊಂಡೊಯ್ಯಲು ಸುರತ್ಕಲ್ ಜಂಕ್ಷನ್ ನಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದ್ದು, ಸೋಮವಾರ ಬ್ಯಾರಿಕೇಡ್ ತೆರವುಗೊಳಿಸಲಾಗಿಲ್ಲ. ಪೊಲೀಸರ ಉಪಸ್ಥಿತಿಯೂ ಇಲ್ಲ. ವಾಹನ ಸವಾರರು ಪರದಾಡುವಂತಾಗಿದೆ.
ಸುರತ್ಕಲ್ ಜಂಕ್ಷನ್ ಬಂದ್ ಮಾಡಿರುವ ಕಾರಣ ಹಾಗೂ ಸೋಮವಾರವಾಗಿರುವುದರಿಂದ ವಾಹನ ದಟ್ಟಣೆ ಹೆಚ್ಚಾಗಿದ್ದು, ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ. ಆಂಬುಲೆನ್ಸ್ ಒಂದು ಫ್ಲೈ ಓವರ್ ನಲ್ಲಿ ಬಾಕಿ ಆದ ಘಟನೆಯೂ ನಡೆದಿದೆ.
ಇನ್ನು ಬ್ಯಾರಿಕೇಡ್ ಹಾಕಿದ ಉದ್ದೇಶವಾದರೂ ಏನು ಎಂಬುದುದನ್ನು ಸಾರ್ವಜನಿಕರ ಪ್ರಶ್ನಿಸುತ್ತಿದ್ದು, ರಸ್ತೆಯ ನಡುವೆ ವಾಹನ ಪಾರ್ಕಿಂಗ್ ಮಾಡಲಾಗುತ್ತಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…