ಮಂಗಳೂರು: ಸಿದ್ದರಾಮಯ್ಯ ಮತ್ತೆ ಸಿಎಂ ಆಗುವ ಕನಸು ಕಾಣುತ್ತಿದ್ದಾರೆ. ತಿರುಕನೋರ್ವ ಊರಮುಂದೆ ಕನಸು ಕಾಣುತ್ತಿದ್ದನು. ನಾವು ಶಾಲೆಗೆ ಹೋಗುವಾಗ ಈ ಪದ್ಯ ಕೇಳಿದ್ದೇವೆ. ಆ ಹಾಡಿನಂತೆ ಸಿದ್ದರಾಮಯ್ಯ ಪರಿಸ್ಥಿತಿ ಆಗುತ್ತದೆ. ಸಿದ್ದರಾಮಯ್ಯ ಅವರ ಅಪ್ಪನಾಣೆಗೂ ಮುಖ್ಯಮಂತ್ರಿ ಆಗೋದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಸುರತ್ಕಲ್ನ ಜಲೀಲ್ ಕೊಲೆ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಇಂತಹ ಕೃತ್ಯದಿಂದ ರಾಜಕೀಯ ಲಾಭ ಪಡೆಯುತ್ತದೆ. ಕಟ್ಟುನಿಟ್ಟಿನ ಕ್ರಮ ನಮ್ಮ ಸರಕಾರ ಕೈಗೊಳ್ಳುತ್ತದೆ. ಪೊಲೀಸ್ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇವೆ ಎಂದರು.
ಜನಾರ್ದನ ರೆಡ್ಡಿ ಹೊಸ ಪಕ್ಷ ಘೋಷಣೆ ಮಾಡಿದ್ದಾರೆ. ನಾವು ಅವರ ಜೊತೆ ಮಾತುಕತೆ ಮಾಡುತ್ತೇವೆ. ಶ್ರೀರಾಮುಲು ಜೊತೆ ಈ ಬಗ್ಗೆ ಮಾತನಾಡಿದ್ದೇನೆ. ಶ್ರೀರಾಮುಲು ಜನಾರ್ದನ ರೆಡ್ಡಿ ಜೊತೆ ಮಾತನಾಡುವುದಾಗಿ ಹೇಳಿದ್ದಾರೆ ಎಂದಿದ್ದಾರೆ.
ಇನ್ನು ಬಿಜೆಪಿ ಒಂದು ರಾಷ್ಟ್ರೀಯ ಪಕ್ಷ. ಚುನಾವಣೆ ಸ್ಪರ್ಧೆ ವಿಚಾರದಲ್ಲಿ ಹಲವಾರು ಯೋಜನೆ ಯೋಜನೆಗಳು ಇವೆ. ಹತ್ತಾರು ಪಾರ್ಟಿ ಹಿಂದೆಯೂ ಬಂದಿದೆ ಮುಂದೆ ಯೂ ಬರುತ್ತದೆ. ಬಿಜೆಪಿಗೆ ಯಾವುದೇ ಲಾಸ್ ಇಲ್ಲ. ಬಿಜೆಪಿ ದೇಶದ ನಂಬರ್ 1 ಪಾರ್ಟಿ. ನಾವು ಕಾಂಗ್ರೆಸ್ ನಂತಹ ಪಾರ್ಟಿಯನ್ನೇ ಎದುರಿಸಿ ಬಂದವರು. ನಮ್ಮ ಎಲ್ಲಾ ಹಿರಿಯರು ಮಾತುಕತೆ ಮಾಡುತ್ತಾರೆ, ಏನಾಗುತ್ತೋ ನೋಡೋಣ ಎಂದು ಹೇಳಿದ್ದಾರೆ.
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…
ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು ಶಿರ್ವ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬೆಳಪು ಬಡಿಕೇರಿ ಹೌಸ್ ನಿವಾಸಿ…
ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್ ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…