Featured

ಸುರತ್ಕಲ್ ಜಲೀಲ್ ಹತ್ಯೆ: ಅಮಾಯಕರ ಕೊಲೆ ಹದಗೆಟ್ಟಿರುವ ಶಾಂತಿ ಸುವ್ಯವಸ್ಥೆಗೆ ಹಿಡಿದ ಕೈಗನ್ನಡಿ : ಅಕ್ಷಿತ್ ಸುವರ್ಣ – Vishwanews24

ಸುರತ್ಕಲ್ ಜಲೀಲ್ ಹತ್ಯೆ: ಅಮಾಯಕರ ಕೊಲೆ ಹದಗೆಟ್ಟಿರುವ ಶಾಂತಿ ಸುವ್ಯವಸ್ಥೆಗೆ ಹಿಡಿದ ಕೈಗನ್ನಡಿ : ಅಕ್ಷಿತ್ ಸುವರ್ಣ

ಮಂಗಳೂರು: ಕ್ಷುಲ್ಲಕ ಕಾರಣಗಳಿಗಾಗಿ ದಕ ಜಿಲ್ಲೆಯಲ್ಲಿ ಅಮಾಯಕರನ್ನು ಕೊಲೆಗೈಯ್ಯುತ್ತಿರುವುದು ಹದಗೆಟ್ಟಿರುವ ಶಾಂತಿ ಸುವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ದಕ ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ ಹೇಳಿದ್ದಾರೆ.

ಸುರತ್ಕಲ್ ನಲ್ಲಿ ಅಂಗಡಿ ನಡೆಸಿಕೊಂಡಿದ್ದ ಅಮಾಯಕ ಜಲೀಲ್ ಅವರನ್ನು ದುಷ್ಕರ್ಮಿಗಳು ಚೂರಿಯಿಂದ ಇರಿದು ಕೊಲೆಗೈದಿರುವುದು ಖಂಡನಾರ್ಹವಾಗಿದೆ. ಅಮಾಯಕರನ್ನು ಗುರಿಯಾಗಿಸಿ ಕೊಲೆ ಮಾಡುತ್ತಿರುವ ದುಷ್ಕರ್ಮಿಗಳನ್ನು ಪೊಲೀಸರು ಕೂಡಲೇ ಬಂಧಿಸಬೇಕು. ಆರೋಪಿಗಳು ಯಾವುದೇ ಧರ್ಮ ಜಾತಿ, ಪಕ್ಷಕ್ಕೆ ಸೇರಿದ್ದರೂ ಕೂಡ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮವನ್ನು ಕೈಗೊಳ್ಳಬೇಕು.

ದಕ ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ನೈತಿಕ ಪೊಲೀಸ್ ಗಿರಿ, ಕೊಲೆಗಳಿಂದ ಜಿಲ್ಲೆಗೆ ಕೆಟ್ಟ ಹೆಸರು ಬರುತ್ತಿದ್ದು ಆಳುವ ಪಕ್ಷ ಇದರ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕಾಗಿದೆ. ಶಿಕ್ಷಣಕ್ಕೆ ಹೆಸರಾದ ಜಿಲ್ಲೆಗೆ ಬೇರೆ ರಾಜ್ಯ ದೇಶದಿಂದ ವಿದ್ಯಾರ್ಥಿಗಳು ಆಗಮಿಸುತ್ತಿದ್ದು ಇಂತಹ ಘಟನೆಗಳಿಂದ ಇಲ್ಲಿ ವಾಸ ಮಾಡಲು ಭಯಪಡುವಂತಹ ವಾತಾವರಣ ನಿರ್ಮಾಣವಾಗಿದೆ. ಪೊಲೀಸ್ ಇಲಾಖೆ ಜನರಲ್ಲಿ ಧ್ಯೇರ್ಯ ಮೂಡಿಸುವ ಕೆಲಸ ಮಾಡಬೇಕಾಗಿದೆ ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಪಶ್ಚಾತ್ತಾಪ ಪಡಬೇಕಾದ ಪರಿಸ್ಥಿತಿ ನಿರ್ಮಾಣವಾದೀತು. ಈ ನಿಟ್ಟಿನಲ್ಲಿ ಪೊಲೀಸರು ಕೂಡಲೇ ಕಾರ್ಯ ಪ್ರವೃತ್ತರಾಗಿ ಶೀಘ್ರವೇ ಆರೋಪಿಗಳನ್ನು ಬಂಧಿಸುವಂತೆ ಅವರು ಆಗ್ರಹಿಸಿದ್ದಾರೆ

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

20 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

20 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago