Featured

ಸುರತ್ಕಲ್ ಜಲೀಲ್ ಹತ್ಯೆ: ಅಮಾಯಕರ ಕೊಲೆ ಹದಗೆಟ್ಟಿರುವ ಶಾಂತಿ ಸುವ್ಯವಸ್ಥೆಗೆ ಹಿಡಿದ ಕೈಗನ್ನಡಿ : ಅಕ್ಷಿತ್ ಸುವರ್ಣ – Vishwanews24

ಸುರತ್ಕಲ್ ಜಲೀಲ್ ಹತ್ಯೆ: ಅಮಾಯಕರ ಕೊಲೆ ಹದಗೆಟ್ಟಿರುವ ಶಾಂತಿ ಸುವ್ಯವಸ್ಥೆಗೆ ಹಿಡಿದ ಕೈಗನ್ನಡಿ : ಅಕ್ಷಿತ್ ಸುವರ್ಣ

ಮಂಗಳೂರು: ಕ್ಷುಲ್ಲಕ ಕಾರಣಗಳಿಗಾಗಿ ದಕ ಜಿಲ್ಲೆಯಲ್ಲಿ ಅಮಾಯಕರನ್ನು ಕೊಲೆಗೈಯ್ಯುತ್ತಿರುವುದು ಹದಗೆಟ್ಟಿರುವ ಶಾಂತಿ ಸುವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ದಕ ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ ಹೇಳಿದ್ದಾರೆ.

ಸುರತ್ಕಲ್ ನಲ್ಲಿ ಅಂಗಡಿ ನಡೆಸಿಕೊಂಡಿದ್ದ ಅಮಾಯಕ ಜಲೀಲ್ ಅವರನ್ನು ದುಷ್ಕರ್ಮಿಗಳು ಚೂರಿಯಿಂದ ಇರಿದು ಕೊಲೆಗೈದಿರುವುದು ಖಂಡನಾರ್ಹವಾಗಿದೆ. ಅಮಾಯಕರನ್ನು ಗುರಿಯಾಗಿಸಿ ಕೊಲೆ ಮಾಡುತ್ತಿರುವ ದುಷ್ಕರ್ಮಿಗಳನ್ನು ಪೊಲೀಸರು ಕೂಡಲೇ ಬಂಧಿಸಬೇಕು. ಆರೋಪಿಗಳು ಯಾವುದೇ ಧರ್ಮ ಜಾತಿ, ಪಕ್ಷಕ್ಕೆ ಸೇರಿದ್ದರೂ ಕೂಡ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮವನ್ನು ಕೈಗೊಳ್ಳಬೇಕು.

ದಕ ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ನೈತಿಕ ಪೊಲೀಸ್ ಗಿರಿ, ಕೊಲೆಗಳಿಂದ ಜಿಲ್ಲೆಗೆ ಕೆಟ್ಟ ಹೆಸರು ಬರುತ್ತಿದ್ದು ಆಳುವ ಪಕ್ಷ ಇದರ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕಾಗಿದೆ. ಶಿಕ್ಷಣಕ್ಕೆ ಹೆಸರಾದ ಜಿಲ್ಲೆಗೆ ಬೇರೆ ರಾಜ್ಯ ದೇಶದಿಂದ ವಿದ್ಯಾರ್ಥಿಗಳು ಆಗಮಿಸುತ್ತಿದ್ದು ಇಂತಹ ಘಟನೆಗಳಿಂದ ಇಲ್ಲಿ ವಾಸ ಮಾಡಲು ಭಯಪಡುವಂತಹ ವಾತಾವರಣ ನಿರ್ಮಾಣವಾಗಿದೆ. ಪೊಲೀಸ್ ಇಲಾಖೆ ಜನರಲ್ಲಿ ಧ್ಯೇರ್ಯ ಮೂಡಿಸುವ ಕೆಲಸ ಮಾಡಬೇಕಾಗಿದೆ ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಪಶ್ಚಾತ್ತಾಪ ಪಡಬೇಕಾದ ಪರಿಸ್ಥಿತಿ ನಿರ್ಮಾಣವಾದೀತು. ಈ ನಿಟ್ಟಿನಲ್ಲಿ ಪೊಲೀಸರು ಕೂಡಲೇ ಕಾರ್ಯ ಪ್ರವೃತ್ತರಾಗಿ ಶೀಘ್ರವೇ ಆರೋಪಿಗಳನ್ನು ಬಂಧಿಸುವಂತೆ ಅವರು ಆಗ್ರಹಿಸಿದ್ದಾರೆ

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago