ಮಂಗಳೂರು: ಚುನಾವಣೆ ಹತ್ತಿರವಾಗುತ್ತಿದ್ದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಪ್ರಚೋದಿತ ಕೊಲೆಗಳು, ಅನೈತಿಕ ಪೊಲೀಸ್ ಗಿರಿ, ಕೋಮು ವೈಷಮ್ಯಗಳು ಹೆಚ್ಚಾಗುತ್ತಾ ಇವೆ. ಇದಕ್ಕೆ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ವಿಮೆನ್ ಇಂಡಿಯಾ ಮೂವ್ಮೆಂಟ್ ಆರೋಪಿಸಿದೆ.
ಚುನಾಯಿತ ಪ್ರತಿನಿಧಿಗಳ ತಾರತಮ್ಯ ನೀತಿ, ಪೊಲೀಸರ ನಿರ್ಲಕ್ಷ್ಯ ಧೋರಣೆಗಳಿಂದಾಗಿ, ಶೋಷಿತ ವರ್ಗದ ಜನರಿಗೆ ವ್ಯವಸ್ಥೆಯ ಮೇಲೆ ಭರವಸೆ ಇಲ್ಲದಂತಾಗಿದೆ. ಹಿಂದಿನ ಕೊಲೆ ಪ್ರಕರಣಗಳಲ್ಲಿನ ನ್ಯಾಯದ ಮರೀಚಿಕೆ ಹಾಗೂ ಸರಕಾರದ ಫ್ಯಾಶಿಸ್ಟ್ ಧೋರಣೆ ಇಂದು ಸುರತ್ಕಲ್’ನಲ್ಲಿ ಕೃಷ್ಣಾಪುರ ನಿವಾಸಿ ಜಲೀಲ್ ಅವರ ಅಮಾನುಷ ಕೊಲೆಗೆ ಮುಖ್ಯ ಕಾರಣ. ಇದರಿಂದ ಇನ್ನಷ್ಟು ಸಮಾಜಘಾತುಕ ಕೃತ್ಯಗಳಲ್ಲಿ ತೊಡಗಿಸಿಕೊಳ್ಳಲು ಅಪರಾಧಿಗಳ ಆತ್ಮಸ್ಥೈರ್ಯ ಹೆಚ್ಚುವುದರಲ್ಲಿ ಸಂಶಯವಿಲ್ಲ ಎಂದು ಇಂಡಿಯಾ ಮೂವ್ಮೆಂಟ್ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಝಹನಾ ಬಂಟ್ವಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸರ್ಕಾರ ಈ ಕೂಡಲೇ ಎಚ್ಚೆತ್ತುಕೊಂಡು ಶಾಂತಿ – ಸುವ್ಯವಸ್ಥೆಯನ್ನು ಕಾಪಾಡಲು ಕ್ರಮ ಕೈಗೊಳ್ಳಬೇಕು. ಮಾತ್ರವಲ್ಲದೇ ಜಲೀಲ್ ಅವರ ಕುಟುಂಬಕ್ಕೆ ಸೂಕ್ತ ಪರಿಹಾರವನ್ನು ಒದಗಿಸಬೇಕು. ಪೊಲೀಸರು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಅಪರಾಧಿಗಳಿಗೆ ಕಠಿಣ ಶಿಕ್ಷೆಯನ್ನು ನೀಡಬೇಕು ಎಂದು ಝಹನಾ ಬಂಟ್ವಾಳ ಆಗ್ರಹಿಸಿದ್ದಾರೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…