ಮಂಗಳೂರು: ಕೃಷ್ಣಾಪುರದಲ್ಲಿ ಶನಿವಾರ ರಾತ್ರಿ ನಡೆದ ಅಬ್ದುಲ್ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಧಿತರ ಪೈಕಿ ಇಬ್ಬರು ಕೃತ್ಯ ಎಸಗಿದ ಆರೋಪಿಗಳಾಗಿದ್ದರೆ, ಇನ್ನೋರ್ವ ಆರೋಪಿಗಳಿಗೆ ಪರಾರಿಯಾಗಲು ನೆರವಾದವನು. ಆರೋಪಿಗಳನ್ನು ರವಿವಾರ ರಾತ್ರಿ ಬಂಧಿಸಲಾಗಿದ್ದು, ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಕಸ್ಟಡಿಗೆ ಪಡೆಯಲಾಗುವುದು ಎಂದು ಹೇಳಿದ್ದಾರೆ.
ಸದ್ಯ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಮಾಡಿದ್ದೇವೆ. 14 ದಿನ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿದರು.
ಇವರಲ್ಲಿ ಇಬ್ಬರು ನೇರ ಭಾಗಿಯಾಗಿದ್ದು, ಓರ್ವ ಅವರನ್ನು ಬೈಕ್’ನಲ್ಲಿ ತಂದು ಬಿಟ್ಟಿದ್ದ. ಗುರುತು ಪತ್ತೆ ಆಗುವವರೆಗೂ ಆರೋಪಿಗಳ ಮಾಹಿತಿ ನೀಡುವುದಿಲ್ಲ. ನಿನ್ನೆ ರಾತ್ರಿ ಅವರನ್ನು ವಶಕ್ಕೆ ಪಡೆಯಲಾಗಿದೆ, ಹೆಚ್ಚಿನ ವಿಚಾರಣೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಕೊಲೆಗೆ ಕಾರಣ ಏನು ಎನ್ನುವುದನ್ನು ಪೂರ್ಣ ತನಿಖೆ ಬಳಿಕ ತಿಳಿಸಲಾಗುವುದು. ಮೂವರಲ್ಲಿ ಇಬ್ಬರು ಈ ಹಿಂದೆ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾದವರಾಗಿದ್ದು, 2021ರಲ್ಲಿ ನಡೆದ ಕೊಲೆ ಯತ್ನ ಕೇಸ್ ವೊಂದರಲ್ಲೂ ಅವರು ಇದ್ದರು ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಶಶಿಕುಮಾರ್ ತಿಳಿಸಿದರು.
ಜಲೀಲ್ ಕೇಸ್’ನಲ್ಲಿ ಮಹಿಳೆಯರೂ ಸೇರಿ 10-12 ಜನರನ್ನು ವಶಕ್ಕೆ ಪಡೆದಿದ್ದೆವು. ಜಲೀಲ್ ಕುಟುಂಬಸ್ಥರು ಸೇರಿ ಕೆಲವರ ವಿಚಾರಣೆ ನಡೆದಿದೆ. ಆದರೆ ಸದ್ಯ ಒಟ್ಟು ಮೂವರನ್ನು ಮಾತ್ರ ಬಂಧನ ಮಾಡಲಾಗಿದೆ ಎಂದು ಹೇಳಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…