ಮಂಗಳೂರು: ಕೃಷ್ಣಾಪುರದಲ್ಲಿ ಶನಿವಾರ ರಾತ್ರಿ ನಡೆದ ಅಬ್ದುಲ್ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಧಿತರ ಪೈಕಿ ಇಬ್ಬರು ಕೃತ್ಯ ಎಸಗಿದ ಆರೋಪಿಗಳಾಗಿದ್ದರೆ, ಇನ್ನೋರ್ವ ಆರೋಪಿಗಳಿಗೆ ಪರಾರಿಯಾಗಲು ನೆರವಾದವನು. ಆರೋಪಿಗಳನ್ನು ರವಿವಾರ ರಾತ್ರಿ ಬಂಧಿಸಲಾಗಿದ್ದು, ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಕಸ್ಟಡಿಗೆ ಪಡೆಯಲಾಗುವುದು ಎಂದು ಹೇಳಿದ್ದಾರೆ.
ಸದ್ಯ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಮಾಡಿದ್ದೇವೆ. 14 ದಿನ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿದರು.
ಇವರಲ್ಲಿ ಇಬ್ಬರು ನೇರ ಭಾಗಿಯಾಗಿದ್ದು, ಓರ್ವ ಅವರನ್ನು ಬೈಕ್’ನಲ್ಲಿ ತಂದು ಬಿಟ್ಟಿದ್ದ. ಗುರುತು ಪತ್ತೆ ಆಗುವವರೆಗೂ ಆರೋಪಿಗಳ ಮಾಹಿತಿ ನೀಡುವುದಿಲ್ಲ. ನಿನ್ನೆ ರಾತ್ರಿ ಅವರನ್ನು ವಶಕ್ಕೆ ಪಡೆಯಲಾಗಿದೆ, ಹೆಚ್ಚಿನ ವಿಚಾರಣೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಕೊಲೆಗೆ ಕಾರಣ ಏನು ಎನ್ನುವುದನ್ನು ಪೂರ್ಣ ತನಿಖೆ ಬಳಿಕ ತಿಳಿಸಲಾಗುವುದು. ಮೂವರಲ್ಲಿ ಇಬ್ಬರು ಈ ಹಿಂದೆ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾದವರಾಗಿದ್ದು, 2021ರಲ್ಲಿ ನಡೆದ ಕೊಲೆ ಯತ್ನ ಕೇಸ್ ವೊಂದರಲ್ಲೂ ಅವರು ಇದ್ದರು ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಶಶಿಕುಮಾರ್ ತಿಳಿಸಿದರು.
ಜಲೀಲ್ ಕೇಸ್’ನಲ್ಲಿ ಮಹಿಳೆಯರೂ ಸೇರಿ 10-12 ಜನರನ್ನು ವಶಕ್ಕೆ ಪಡೆದಿದ್ದೆವು. ಜಲೀಲ್ ಕುಟುಂಬಸ್ಥರು ಸೇರಿ ಕೆಲವರ ವಿಚಾರಣೆ ನಡೆದಿದೆ. ಆದರೆ ಸದ್ಯ ಒಟ್ಟು ಮೂವರನ್ನು ಮಾತ್ರ ಬಂಧನ ಮಾಡಲಾಗಿದೆ ಎಂದು ಹೇಳಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…