ಸುರತ್ಕಲ್ ಟೋಲ್ಗೇಟ್ ತೆರವು : ಕಾರ್ಕಳ ಬಸ್ ನಿಲ್ದಾಣ ಬಳಿ ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮ – Vishwanews24
ಸುರತ್ಕಲ್ ಟೋಲ್ಗೇಟ್ ತೆರವು : ಕಾರ್ಕಳ ಬಸ್ ನಿಲ್ದಾಣ ಬಳಿ ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮ
ಕಾರ್ಕಳ : ಇಲ್ಲಿನ ಜನರ ಆಕ್ರೋಶಕ್ಕೆ ಕಾರಣವಾಗಿದ್ದ ಸುರತ್ಕಲ್ ಅಕ್ರಮ ಟೋಲ್ ಗೇಟ್ನ್ನು ಬಂದ್ ಮಾಡಲಾಗಿದೆ.
ಟೋಲ್ ಗೇಟ್ ವಿರೋಧಿಸಿ ಸುರತ್ಕಲ್ ನೇತೃತ್ವದಲ್ಲಿ ಕಳೆದ ಆರು ವರ್ಷಗಳಿಂದ ಹೋರಾಟ ಮಾಡಲಾಗಿತ್ತು. ಇದಕ್ಕೆ ಸಂತಸ ವ್ಯಕ್ತಪಡಿಸಿದ ಕಾರ್ಕಳ ಪುರಸಭೆ ಸದಸ್ಯ ಶುಭದ ರಾವ್, ಕಾರ್ಕಳ ಬಸ್ ನಿಲ್ದಾಣ ಬಳಿ ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಬಳಿಕ ಮಾತನಾಡಿದ ಶುಭದ ರಾವ್, ಟೋಲ್ ಗೇಟ್ ತೆರವು ಹೋರಾಟ ಹಲವು ಸವಾಲುಗಳನ್ನು ಎದುರಿಸಿತ್ತು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋರಾಟ ಮಾಡಲಾಯಿತು ಎಂದರು.
ಇನ್ನೂ, ಹೋರಾಟಕ್ಕೆ ಸಾಥ್ ನೀಡಿದ ಕಾರ್ಕಳದ ಟ್ಯಾಕ್ಸಿ ಚಾಲಕರು, ಬಸ್ ಏಜಂಟರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ತುಳುನಾಡಿನ ಸಮಸ್ತ ಜನತೆಗೂ ಅಭಿನಂದನೆಗಳನ್ನು ಶುಭದ ರಾವ್ ಸಲ್ಲಿಸಿದರು.
ಸುರತ್ಕಲ್ ಟೋಲ್ಗೇಟ್ ತೆರವು : ಕೇಕ್ ಕತ್ತರಿಸಿ ಟೋಲ್ ವಿರೋಧಿ ಹೋರಾಟಗಾರರ ವಿಜಯೋತ್ಸವ – Vishwanews24
