Featured

ಸುರತ್ಕಲ್‌ ಟೋಲ್‌ಗೇಟ್ ತೆರವು :  ಕೇಕ್ ಕತ್ತರಿಸಿ ಟೋಲ್‌ ವಿರೋಧಿ ಹೋರಾಟಗಾರರ ವಿಜಯೋತ್ಸವ – Vishwanews24

ಸುರತ್ಕಲ್‌ ಟೋಲ್‌ಗೇಟ್ ತೆರವು :  ಕೇಕ್ ಕತ್ತರಿಸಿ ಟೋಲ್‌ ವಿರೋಧಿ ಹೋರಾಟಗಾರರ ವಿಜಯೋತ್ಸವ

ಮಂಗಳೂರು: ವಿವಾದಾತ್ಮಕವಾಗಿದ್ದ ಸುರತ್ಕಲ್‌ ಎನ್‌ಐಟಿಕೆ ಟೋಲ್‌ಗೇಟ್‌ ಡಿಸೆಂಬರ್ 1ರಿಂದ ರದ್ದುಗೊಂಡಿದ್ದು, ಇಂದಿನಿಂದ ಮುಕ್ತ ಸಂಚಾರ ಶುರುವಾಗಿದೆ. ಕಳೆದ 35 ದಿನಗಳ ಹೋರಾಟ ಅಂತ್ಯಕಂಡಿದ್ದು, ಇದು ಸುರತ್ಕಲ್ ಎನ್‌ಐಟಿಕೆ ಟೋಲ್‌ಗೇಟ್ ವಿರೋಧಿ ಹೋರಾಟಗಾರರಿಗೆ ಸಂದ ಗೆಲುವು ಆಗಿದೆ ಎಂದು ಹೋರಾಟಗಾರರು ನಿನ್ನೆ ರಾತ್ರಿಯೇ ಟೋಲ್‌ಗೇಟ್ ಬಳಿ ವಿಜಯೋತ್ಸವವನ್ನು ಆಚರಿಸಿದ್ದಾರೆ.

ಎನ್ಐಟಿಕೆ ಟೋಲ್ ಗೇಟ್ ನಲ್ಲಿ ನವೆಂಬರ್ 30ರಂದು ಮಧ್ಯರಾತ್ರಿಯಿಂದ ಟೋಲ್ ಶುಲ್ಕ ಸಂಗ್ರಹ ನಿಲ್ಲಿಸಿದ್ದು, ಇದು ಹೋರಾಟಕ್ಕೆ ಸಿಕ್ಕಿದ ಜಯ ಎಂದು ಹೋರಾಟ ಸಮಿತಿಯ ಮುಖಂಡರು ತಿಳಿಸಿದ್ದಾರೆ. ಟೋಲ್ ಗೇಟ್‌ನಲ್ಲಿ ಟೋಲ್ ಸಂಗ್ರಹ ನಿಲ್ಲಿಸಿದ ಕ್ಷಣವೇ ಹೋರಾಟಗಾರರ ಸಂಭ್ರಮ ಮುಗಿಲು ಮುಟ್ಟಿತ್ತು.

ಹೋರಾಟ ಸಮಿತಿಯ ಮುಖಂಡರು ಕೇಕ್ ಗಳನ್ನು ಕತ್ತರಿಸುವ ಮೂಲಕ ಸಂಭ್ರಮಾಚರಣೆ ನಡೆಸಿದರು. ಹೋರಾಟ ಸಮಿತಿಯ ಮುಖಂಡರು, ಕಾರ್ಯಕರ್ತರು ಹಾಗೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಮಾನ ಮನಸ್ಕ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಕೇಕ್‌ ಕತ್ತರಿಸುವ ಮೂಲಕ ಸಂಭ್ರಮಾಚರಣೆ ನಡೆಯಿತು. ಸಂಭ್ರಮಾಚರಣೆಯ ವೇಳೆ ಹೋರಾಟ ಸಮಿತಿಗೆ‌ ಜಯಘೋಷಗಳನ್ನು ಕೂಗಿದರು.

ಚೆಂಡೆಯ ವಾದನ, ಹಾಡುಗಳಿಗೆ ಕುಣಿದು ಕುಪ್ಪಳಿಸಿದ ಕಾರ್ಯಕರ್ತರು, ಟೋಲ್ ಗೇಟ್ ಬಳಿ ಹಾಕಲಾಗಿದ್ದ ಧರಣಿ‌ ಮಂಟಪದ ಬಳಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಹಾಗೂ ಮಾಜಿ ಶಾಸಕ ಮೊಯ್ದೀನ್‌ ಬಾವ ಅವರನ್ನು ಎತ್ತಿ ಸಂಭ್ರಮಿಸಿದರು.

ಸಂಭ್ರಮಾಚರಣೆಯ ವೇಳೆ ಹೋರಾಟ ಸಮಿತಿಗೆ‌ ಜಯಘೋಷಗಳನ್ನು ಕೂಗಿದರು. ಚಂಡೆಯ ವಾದನ, ಹಾಡುಗಳಿಗೆ ಕುಣಿದು ಕುಪ್ಪಳಿಸಿದ ಕಾರ್ಯಕರ್ತರು, ಟೋಲ್ ಗೇಟ್ ಬಳಿ ಹಾಕಲಾಗಿದ್ದ ಧರಣಿ‌ ಮಂಟಪದ ಬಳಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಜೊತೆಗೆ ಅವಿಭಜಿತ ದ.ಕ. ಜಿಲ್ಲೆಯ ಸಂಸದರು, ಶಾಸಕರಿಗೆ ದಿಕ್ಕಾರ ಕೂಗಿದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago