ಮಂಗಳೂರು: ವಿವಾದಾತ್ಮಕವಾಗಿದ್ದ ಸುರತ್ಕಲ್ ಎನ್ಐಟಿಕೆ ಟೋಲ್ಗೇಟ್ ಡಿಸೆಂಬರ್ 1ರಿಂದ ರದ್ದುಗೊಂಡಿದ್ದು, ಇಂದಿನಿಂದ ಮುಕ್ತ ಸಂಚಾರ ಶುರುವಾಗಿದೆ. ಕಳೆದ 35 ದಿನಗಳ ಹೋರಾಟ ಅಂತ್ಯಕಂಡಿದ್ದು, ಇದು ಸುರತ್ಕಲ್ ಎನ್ಐಟಿಕೆ ಟೋಲ್ಗೇಟ್ ವಿರೋಧಿ ಹೋರಾಟಗಾರರಿಗೆ ಸಂದ ಗೆಲುವು ಆಗಿದೆ ಎಂದು ಹೋರಾಟಗಾರರು ನಿನ್ನೆ ರಾತ್ರಿಯೇ ಟೋಲ್ಗೇಟ್ ಬಳಿ ವಿಜಯೋತ್ಸವವನ್ನು ಆಚರಿಸಿದ್ದಾರೆ.
ಎನ್ಐಟಿಕೆ ಟೋಲ್ ಗೇಟ್ ನಲ್ಲಿ ನವೆಂಬರ್ 30ರಂದು ಮಧ್ಯರಾತ್ರಿಯಿಂದ ಟೋಲ್ ಶುಲ್ಕ ಸಂಗ್ರಹ ನಿಲ್ಲಿಸಿದ್ದು, ಇದು ಹೋರಾಟಕ್ಕೆ ಸಿಕ್ಕಿದ ಜಯ ಎಂದು ಹೋರಾಟ ಸಮಿತಿಯ ಮುಖಂಡರು ತಿಳಿಸಿದ್ದಾರೆ. ಟೋಲ್ ಗೇಟ್ನಲ್ಲಿ ಟೋಲ್ ಸಂಗ್ರಹ ನಿಲ್ಲಿಸಿದ ಕ್ಷಣವೇ ಹೋರಾಟಗಾರರ ಸಂಭ್ರಮ ಮುಗಿಲು ಮುಟ್ಟಿತ್ತು.
ಹೋರಾಟ ಸಮಿತಿಯ ಮುಖಂಡರು ಕೇಕ್ ಗಳನ್ನು ಕತ್ತರಿಸುವ ಮೂಲಕ ಸಂಭ್ರಮಾಚರಣೆ ನಡೆಸಿದರು. ಹೋರಾಟ ಸಮಿತಿಯ ಮುಖಂಡರು, ಕಾರ್ಯಕರ್ತರು ಹಾಗೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಮಾನ ಮನಸ್ಕ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಕೇಕ್ ಕತ್ತರಿಸುವ ಮೂಲಕ ಸಂಭ್ರಮಾಚರಣೆ ನಡೆಯಿತು. ಸಂಭ್ರಮಾಚರಣೆಯ ವೇಳೆ ಹೋರಾಟ ಸಮಿತಿಗೆ ಜಯಘೋಷಗಳನ್ನು ಕೂಗಿದರು.
ಚೆಂಡೆಯ ವಾದನ, ಹಾಡುಗಳಿಗೆ ಕುಣಿದು ಕುಪ್ಪಳಿಸಿದ ಕಾರ್ಯಕರ್ತರು, ಟೋಲ್ ಗೇಟ್ ಬಳಿ ಹಾಕಲಾಗಿದ್ದ ಧರಣಿ ಮಂಟಪದ ಬಳಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಹಾಗೂ ಮಾಜಿ ಶಾಸಕ ಮೊಯ್ದೀನ್ ಬಾವ ಅವರನ್ನು ಎತ್ತಿ ಸಂಭ್ರಮಿಸಿದರು.
ಸಂಭ್ರಮಾಚರಣೆಯ ವೇಳೆ ಹೋರಾಟ ಸಮಿತಿಗೆ ಜಯಘೋಷಗಳನ್ನು ಕೂಗಿದರು. ಚಂಡೆಯ ವಾದನ, ಹಾಡುಗಳಿಗೆ ಕುಣಿದು ಕುಪ್ಪಳಿಸಿದ ಕಾರ್ಯಕರ್ತರು, ಟೋಲ್ ಗೇಟ್ ಬಳಿ ಹಾಕಲಾಗಿದ್ದ ಧರಣಿ ಮಂಟಪದ ಬಳಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಜೊತೆಗೆ ಅವಿಭಜಿತ ದ.ಕ. ಜಿಲ್ಲೆಯ ಸಂಸದರು, ಶಾಸಕರಿಗೆ ದಿಕ್ಕಾರ ಕೂಗಿದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…