Featured

ಸುರತ್ಕಲ್: ಟೋಲ್ ಗೇಟ್‌ ಗೆ ಮುತ್ತಿಗೆ ಹಾಕಿದ ಪ್ರಕರಣ; 101 ಜನರಿಗೆ ಸಮನ್ಸ್ – Vishwanews24

ಸುರತ್ಕಲ್: ಟೋಲ್ ಗೇಟ್‌ ಗೆ ಮುತ್ತಿಗೆ ಹಾಕಿದ ಪ್ರಕರಣ; 101 ಜನರಿಗೆ ಸಮನ್ಸ್

ಸುರತ್ಕಲ್‌: ಇಲ್ಲಿನ ಎನ್‌ಐಟಿಕೆಯಲ್ಲಿ ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಟೋಲ್ ಗೇಟ್‌ಗೆ ಮುತ್ತಿಗೆ ಹಾಕಿದ್ದ ಹೋರಾಟ ಸಮಿತಿಯ 101 ಜನರಿಗೆ ಮಂಗಳೂರು ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ. ಹಾಗೂ ಮೇ 4ರಂದು ನ್ಯಾಯಾಲಯಕ್ಕೆ ಹಾಜರಾಗಲು ಸೂಚಿಸಿದೆ.

2022ರ ನವೆಂಬರ್‌ನಲ್ಲಿ ಟೋಲ್ ಗೇಟ್ ತೆರವು ಹೋರಾಟ ಸಮಿತಿಯು ಟೋಲ್ ಗೇಟ್ ತೆರವಿಗಾಗಿ ನೇರ ಕಾರ್ಯಾಚಣೆಗೆ ಕರೆ ನೀಡಿತ್ತು. ಈ ಹಿನ್ನೆಲೆ ಸಾವಿರಾರು ಹೋರಾಟಗಾರರು ಟೋಲ್ ಕೇಂದ್ರಕ್ಕೆ ಮುತ್ತಿಗೆ ಹಾಕಿದ್ದರು. ಈ ಸಂದರ್ಭ 250 ಕ್ಕೂ ಅಧಿಕ ಹೋರಾಟಗಾರರನ್ನು ಬಂಧಿಸಲಾಗಿತ್ತು.

ಈ ಸಂಬಂಧ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ಸೇರಿ ಒಟ್ಟು 101 ಹೋರಾಟಗಾರರ ವಿರುದ್ಧ ಪ್ರಕರಣ ದಾಖಲಾಗಿತ್ತು. ಬಳಿಕ ಇವರೆಲ್ಲರ ವಿರುದ್ಧ 2023ರ ಅಕ್ಟೋಬರ್‌ನಲ್ಲಿ ಸುರತ್ಕಲ್ ಪೊಲೀಸರು ಮಂಗಳೂರು ಜೆಂಎಫ್‌ಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಇದೀಗ ಈ 101 ಜನ ಹೋರಾಟಗಾರರು ಮೇ 4ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸಮನ್ಸ್‌ ಜಾರಿಗೊಳಿಸಲಾಗಿದೆ.

Vishwa News 24

Recent Posts

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

4 minutes ago

ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! vishwanews24

ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…

20 minutes ago

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ – vishwanews24

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ ಕೊಪ್ಪಳ: ಗೂಡ್ಸ್‌ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…

37 minutes ago

ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು – vishwanews24

ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ…

46 minutes ago

ರಾಮಮಂದಿರ ದೇಣಿಗೆ ಅವ್ಯವಹಾರ: SIT ತನಿಖೆ ನಡೆಸುತ್ತಿರುವುದು ಸ್ವಾಗತಾರ್ಹ : ಪೇಜಾವರ ಶ್ರೀ – vishwanews24

ರಾಮ ಮಂದಿರದಲ್ಲಿ ಅವ್ಯವಹಾರದಂತಹ ಘೋರ ಅಪಚಾರಗಳು ನಡೆಯಬಾರದಿತ್ತು.. ಮಂದಿರದ ಅವ್ಯವಹಾರ ಆರೋಪಗಳು ಸತ್ಯವಾಗಿದ್ದರೆ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು : ಪೇಜಾವರ…

53 minutes ago

ಪರ್ಕಳ: ಹೆದ್ದಾರಿಯಲ್ಲಿ ಕಂಟೇನರ್ ಲಾರಿ ಪಲ್ಟಿ: ತಪ್ಪಿದ ದುರಂತ – vishwanews24

ಪರ್ಕಳ: ಹೆದ್ದಾರಿಯಲ್ಲಿ ಕಂಟೇನರ್ ಲಾರಿ ಪಲ್ಟಿ: ತಪ್ಪಿದ ದುರಂತ ಮಣಿಪಾಲ: ಪರ್ಕಳದ ಕೆಳಪರ್ಕಕಳ ಹೆದ್ದಾರಿಯಲ್ಲಿ ಕೆನರಾ ಬ್ಯಾಂಕಿನ ತಿರುವಿನಲ್ಲಿ ಕಂಟೇನರ್…

1 hour ago