Featured

ಸುರತ್ಕಲ್ ಟೋಲ್‌ ಗೇಟ್ ತೆರವುಗೊಳಿಸಿ ಇಲ್ಲವಾದಲ್ಲಿ ರಾಜಿನಾಮೆ ನೀಡಿ- ಸಂಸದ, ಶಾಸಕರಿಗೆ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಒತ್ತಾಯ – Vishwnaews24

ಸುರತ್ಕಲ್ ಟೋಲ್‌ ಗೇಟ್ ತೆರವುಗೊಳಿಸಿ ಇಲ್ಲವಾದಲ್ಲಿ ರಾಜಿನಾಮೆ ನೀಡಿ- ಸಂಸದ, ಶಾಸಕರಿಗೆ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಒತ್ತಾಯ

ಮಂಗಳೂರು: ಸುರತ್ಕಲ್ ಟೋಲ್‌ ಗೇಟ್ ತೆರವುಗೊಳಿಸಬೇಕು, ಇಲ್ಲವಾದಲ್ಲಿ ರಾಜಿನಾಮೆ ನೀಡಿ ಎಂದು ಸಂಸದ ಹಾಗೂ ಶಾಸಕರಿಗೆ ಟೋಲ್ ಗೇಟ್ ವಿರೋಧಿ ಹೋರಾಟ ಸಮೀತಿ ಒತ್ತಾಯಿಸಿದೆ.

ಈ ಬಗ್ಗೆ ಇಂದು ಸುದ್ಧಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಟೋಲ್ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಅವರು, ಸುರತ್ಕಲ್ ಟೋಲ್‌ ಗೇಟ್ ತೆರವುಗೊಳಿಸಲು ನೀಡಿರುವ ಗಡುವು ಮುಗಿಯಲು ಕೆಲವೇ ದಿನಗಳು ಬಾಕಿ ಇದ್ದು, ಟೋಲ್‌ ಗೇಟ್ ತೆರವುಗೊಳಿಸಬೇಕು, ಇಲ್ಲವಾದಲ್ಲಿ ಸ್ಥಳೀಯ ಸಂಸದ ಮತ್ತು ಶಾಸಕರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಹಾಗೂ ಆರು ತಿಂಗಳ ಅವಧಿಗೆ ತಾತ್ಕಾಲಿಕ ನೆಲೆಯಲ್ಲಿ ಆರಂಭವಾಗಿದ್ದ ಸುರತ್ಕಲ್ ಟೋಲ್ ಕೇಂದ್ರವು ಏಳು ವರ್ಷಗಳಿಂದ ಅಕ್ರಮವಾಗಿ ಸುಂಕ ವಸೂಲಿ ಮಾಡುತ್ತಿದೆ. ಈ ಬಾರಿ ನಿಗದಿತ ಅವಧಿಯಲ್ಲಿ ಕೇಂದ್ರ ಮುಚ್ಚದಿದ್ದರೆ, ಹೋರಾಟ ಸಮಿತಿ ವತಿಯಿಂದ ಟೋಲ್ ಮುತ್ತಿಗೆ ಕಾರ್ಯಕ್ರಮ ನಡೆಸಲಾಗುವುದು ಮತ್ತು ನಿರಂತರ ಹೋರಾಟ ಮುಂದುವರಿಸಲಾಗುವುದು ಎಂದು ಎಚ್ಚರಿಸಿದರು.

60 ಕಿ.ಮೀ. ಒಳಗಿರುವ ಎಲ್ಲ ಟೋಲ್ ಸಂಗ್ರಹ ಕೇಂದ್ರಗಳನ್ನು 90 ದಿನಗಳ ಒಳಗೆ ತೆರವುಗೊಳಿಸುವುದಾಗಿ ಹೇಳಿದ್ದ ಕೇಂದ್ರ ಸಚಿವರ ಹೇಳಿಕೆಯನ್ನು ಸ್ಥಳೀಯ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ ಡಾ. ವೈ. ಭರತ್ ಶೆಟ್ಟಿ ಪುನರುಚ್ಚರಿಸಿದ್ದರು. ಜೂ.22ಕ್ಕೆ ಅವರು ಹೇಳಿರುವ 90 ದಿನಗಳು ಪೂರ್ಣಗೊಳ್ಳುತ್ತದೆ. ಆದರೆ, ಟೋಲ್ ಕೇಂದ್ರ ತೆರವಿಗೆ ಸಂಬಂಧಿಸಿ ಯಾವುದೇ ಪ್ರಕ್ರಿಯೆ ಆರಂಭವಾಗಿಲ್ಲ ಎಂದರು.

ಇದೇ ವೇಳೆ ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟಗಾರರು ಹಣ ಪಡೆದಿದ್ದಾರೆ ಎಂಬ ಶಾಸಕ ಭರತ್ ಶೆಟ್ಟಿ ಅವರ ಆರೋಪಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಅವರು, ಜವಾಬ್ದಾರಿ ಸ್ಥಾನದಲ್ಲಿರುವ ಶಾಸಕರು ಸಾಕ್ಷ್ಯಸಮೇತ ಆರೋಪ ಮಾಡಲಿ. ಹಣ ಪಡೆದವರ ಗುರುತು ಬಹಿರಂಗಪಡಿಸಬೇಕು ಇಲ್ಲದಿದ್ದಲ್ಲಿ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು. ಹಣ ಪಡೆದವರ ಮಾಹಿತಿ ಇದ್ದರೆ, ಅವರ ವಿರುದ್ಧ ದೂರು ದಾಖಲಿಸಿ, ಹಣ ಪಡೆದವರನ್ನು ಜೈಲಿಗೆ ಕಳುಹಿಸಲಿ, ಕ್ಷೇತ್ರದ ಶಾಸಕರಿಗೆ ಯಾವುದೇ ಅಭಿವೃದ್ಧಿ ಕೆಲಸ ತರಲು ಸಾಧ್ಯವಾಗಲಿಲ್ಲ. ಟೋಲ್ ಕೇಂದ್ರದ ವಿಷಯ ಪ್ರಸ್ತಾಪಿಸಿದರೆ, ಸಿಡಿಮಿಡಿಗೊಳ್ಳುತ್ತಾರೆ” ಎಂದರು.

ಈ ಸಂದರ್ಭದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಜಿ ಉಪ ಮೇಯರ್ ಪುರುಷೋತ್ತಮ ಚಿತ್ರಾಪುರ, ದಲಿತ ನಾಯಕ ಎಂ. ದೇವದಾಸ್, ವಕೀಲ ದಿನೇಶ್ ಹೆಗ್ಡೆ, ಹೋರಾಟ ಸಮಿತಿ ಸಹ ಸಂಚಾಲಕ ವೈ. ರಾಘವೇಂದ್ರ ರಾವ್, ಉಡುಪಿ ಜಿಲ್ಲೆ ಟ್ಯಾಕ್ಸಿ ಮೆನ್ಸ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಶನ್ ಅಧ್ಯಕ್ಷ ರಮೇಶ್ ಕೋಟ್ಯಾನ್, ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ದಿನೇಶ್ ಕುಂಪಲ, ಡಿವೈಎಫ್ ಐ ಜಿಲ್ಲಾಧ್ಯಕ್ಷ ಬಿ.ಕೆ ಇಮ್ಮಿಯಾಜ್, ಮಾಜಿ ಕಾರ್ಪೊರೇಟರ್ ಪ್ರತಿಭಾ ಕುಳಾಯಿ, ಹೆದ್ದಾರಿ ಹೋರಾಟ ಸಮಿತಿ ಉಡುಪಿ ಸಂಚಾಲಕ ಶೇಖರ ಹೆಜಮಾಡಿ, ದಕ ಜಿಲ್ಲಾ ಲಾರಿ ಮಾಲಕರ ಸಂಘದ ಉಪಾಧ್ಯಕ್ಷ ಮೂಸಬ್ಬ ಪಕ್ಷಿಕೆರೆ, ದಲಿತ ಸಂಘರ್ಷ ಸಮಿತಿ ಸಂಚಾಲಕ ರಘು ಎಕ್ಕಾರು, ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಮುಖಂಡರಾದ ಟಿ.ಎನ್. ರಮೇಶ್, ಶ್ರೀನಾಥ ಕುಲಾಲ್ ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

3 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

4 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

4 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

4 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

4 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

6 hours ago