ದಕ್ಷಿಣ ಕ್ನನಡ: ಜಿಲ್ಲೆಯ ಮಂಗಳೂರಿನ ಸುರತ್ಕಲ್ ಟೋಲ್ ತೆರವು ಆಗ್ರಹಿಸಿ ಟೋಲ್ ವಿರೋಧಿ ಸಮಿತಿ ವತಿಯಿಂದ ಪ್ರತಿಭಟನೆಯ ಭಾರೀ ಹೈಡ್ರಾಮಾ ಸೃಷ್ಟಿಯಾಗುತ್ತಿದೆ. ಒಂದೆಡೆ ಕಾಂಗ್ರೆಸ್ ಕಾರ್ಯಕರ್ತರು ಟೋಲ್ ಪ್ಲಾಜಾಗೆ ನುಗ್ಗಿದ್ದರು.
ನ್ನೊಂದೆಡೆ ಕಾಂಗ್ರೆಸ್ ಯುವ ಮುಖಂಡ ಮಿಥುನ್ ರೈ ಟೋಲ್ ಪ್ಲಾಜಾ ಮೇಲೇರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಲ್ಲದೆ ಕಾರ್ಯಕರ್ತರು ಟೋಲ್ ಸಂಗ್ರಹ ವಸ್ತುಗಳನ್ನು ಪುಡಿಮಾಡಲು ಮುಂದಾದರು.ಕಾರ್ಯಕರ್ತರು ಮತ್ತು ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು. ಇದೇ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ತಳ್ಳಾಟ ನಡೆಸಲಾಯಿತು.
ಬ್ಯಾರಿಕೇಡ್ ಕಿತ್ತೆಸೆದು, ಟೋಲ್ಗೆ ಮುತ್ತಿಗೆ ಹಾಕಿದ 500ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್ ಮುಖಂಡರಾದ ಐವಾನ್ ಡಿಸೋಜ, ಮೊಯಿದ್ದೀನ್ಬಾವ, ಜೆ.ಆರ್ ಲೋಬೋ, ಮಿಥುನ್ ರೈ ಸೇರಿ ಹಲವರ ಬಂಧಿಸಲಾಗಿದೆ. ಪ್ರತಿಭಟನೆ ಹಿನ್ನೆಲೆಯಲ್ಲಿ ಟೋಲ್ ಸುತ್ತ ಭಾರೀ ಪೊಲೀಸ್ ಭದ್ರತೆ ಕೈಗೊಳಲಾಗಿದ್ದು, 6 ಕೆಎಸ್ಆರ್ ಪಿ, 5 ಸಿಎಆರ್, 250 ಸಿವಿಲ್, 4 ಎಸಿಪಿ, 15 ಇನ್ಸ್ ಪೆಕ್ಟರ್ ಸೇರಿದಂತೆ 500ಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…