ಮಂಗಳೂರು: ಸುರತ್ಕಲ್ ಟೋಲ್ಗೇಟ್ ವಿಚಾರಕ್ಕೆ ಸಂಬಂಧಿಸಿದಂತೆ ನಡೆಯುವ ಹೋರಾಟಕ್ಕೆ ಆಭರತಿಯ ಜನತಾ ಪಾರ್ಟಿಯ ಬೆಂಬಲ ಕೂಡಾ ಇದೆ. ಈ ವಿಷಯದಲ್ಲಿ ಶೀಘ್ರವಾಗಿ ಇತ್ಯರ್ಥವಾಗದೇ ಹೋದರೆ ನಾನು ಕೂಡಾ ನ್ಯಾಯಾಲಯಕ್ಕೆ ಹೋಗಲು ಸಿದ್ಧನಿದ್ದೇನೆ. ಆದರೆ ನಾವು ಆಡಳಿತದಲ್ಲಿ ಇರುವ ಕಾರಣಕ್ಕೆ ಈ ಹೋರಾಟವನ್ನು ರಾಜಕೀಯವಾಗಿ ಮುಂದುವರೆಸುವುದು ತಪ್ಪು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಇಂದು ಮಂಗಳೂರಿನಲ್ಲಿ ಸುರತ್ಕಲ್ ಟೋಲ್ ಗೇಟ್ ಮುತ್ತಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಅವರು ಪ್ರತಿಕ್ರಿಯೆ ನೀಡಿ ‘ಶಾಂತಿಯುತ ಪ್ರತಿಭಟನೆಗೆ ನಮ್ಮ ಬೆಂಬಲವಿದೆ.
ಆದರೆ ಕಾನೂನನ್ನ ಕೈಗೆ ತೆಗೆದುಕೊಂಡು ಪ್ರತಿಭಟನೆ ನಡೆಸಿದರೆ ಸರಕಾರ ಅದರದ್ದೇ ಆದ ಕ್ರಮವನ್ನು ತೆಗೆದುಕೊಳ್ಳಬೇಕಾಗುತ್ತದೆ. ನೋಟಿಸ್ ನೀಡಿರುವ ವಿಚಾರ ನನಗೆ ಗೊತ್ತಿಲ್ಲ. ಈ ಕುರಿತು ನಾನು ಕಮಿಷನರ್ ಜೊತೆ ಮಾತನಾಡಿದ್ದೇನೆ. ಹೋರಾಟ ಸಹಜ. ಶಾಂತಿಯುತ ಹೋರಾಟಕ್ಕೆ ನಮ್ಮ ವಿರೋಧವಿಲ್ಲ.
ನಾನು ಹೋರಾಟಗಾರರ ಜೊತೆ ಮಾತನಾಡಿದರೆ ರಾಜಕೀಯ ಬರುತ್ತದೆ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳ ಜೊತೆ ನಾನು ಮಾತನಾಡಿ ಕಾಲಾವಕಾಶ ನೀಡುವಂತೆ ಮನವಿ ಮಾಡಲು ಹೇಳಿದ್ದೀನಿ. ಟೋಲ್ ತೆರವಿಗೆ 20 ದಿವಸ ಕಾಲಾವಕಾಶವನ್ನು ಟೋಲ್ ನವರು ಕೇಳಿದ್ದಾರೆ.
ಅದಕ್ಕೆ ಅವಕಾಶ ಕೊಡೋಣ. ತದನಂತರ ಅವರು ಕ್ರಮ ತೆಗೆದುಕೊಳ್ಳದಿದ್ದರೆ ಏನು ಮಾಡಬೇಕು ಎಂಬುದರ ಬಗ್ಗೆ ತೀರ್ಮಾನ ಮಾಡೋಣ ಎಂದು ವಿನಂತಿ ಮಾಡಿದ್ರು.
ಹೋರಾಟ ಮಾಡಬಾರದು ಎಂದು ಹೇಳುವ ಹಕ್ಕು ನನಗಿಲ್ಲ. ಯಾಕಂದ್ರೆ ಇದು ಪ್ರಜಾಪ್ರಭುತ್ವ. ಶಾಂತಿಯುತ ಹೋರಾಟಕ್ಕೆ ನಮ್ಮ ಅಭ್ಯಂತರ ಇಲ್ಲ.
ಆದರೆ ಕಾನೂನನ್ನು ಕೈಗೆ ಎತ್ತಿಕೊಂಡು ಹೋರಾಟ ಮಾಡಿದ್ರೆ ಮುಂದೆ ಆಗುವ ಅನಾಹುತಕ್ಕೆ ಅವರೇ ಜವಾಬ್ದಾರರು. ಟೋಲ್ ಗೇಟನ್ನು ನಾವು ತೆಗೆದೆ ತೆಗಿತೀವಿ ಎಂದು ಹೇಳಲು ನಾನು ಕಟಿಬದ್ದನಾಗಿದ್ದಿನಿ’ ಎಂದು ಹೇಳಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…