Featured

ಸುರತ್ಕಲ್ ಟೋಲ್ ಗೇಟ್ ಮುತ್ತಿಗೆ ವಿಚಾರ : ‘ಶಾಂತಿಯುತ ಪ್ರತಿಭಟನೆಗೆ ನಮ್ಮ ಬೆಂಬಲವಿದೆ :-ನಳಿನ್ ಕುಮಾರ್ ಕಟೀಲ್ – Vishwanews24

ಟೋಲ್ ತೆರವಿಗೆ 20 ದಿವಸ ಕಾಲಾವಕಾಶವನ್ನು ಟೋಲ್ ನವರು ಕೇಳಿದ್ದಾರೆ..ಅದಕ್ಕೆ ಅವಕಾಶ ಕೊಡೋಣ..

ಹೋರಾಟ ಮಾಡಬಾರದು ಎಂದು ಹೇಳುವ ಹಕ್ಕು ನನಗಿಲ್ಲ..

ಇದು ಪ್ರಜಾಪ್ರಭುತ್ವ, ಶಾಂತಿಯುತ ಹೋರಾಟಕ್ಕೆ ನಮ್ಮ ಅಭ್ಯಂತರ ಇಲ್ಲ..

ಕಾನೂನನ್ನು ಕೈಗೆ ಎತ್ತಿಕೊಂಡು ಹೋರಾಟ ಮಾಡಿದ್ರೆ ಮುಂದೆ ಆಗುವ ಅನಾಹುತಕ್ಕೆ ಅವರೇ ಜವಾಬ್ದಾರರು..

ಟೋಲ್ ಗೇಟನ್ನು ನಾವು ತೆಗೆದೆ ತೆಗಿತೀವಿ ಎಂದು ಹೇಳಲು ನಾನು ಬದ್ದ ..

ಮಂಗಳೂರು: ಸುರತ್ಕಲ್ ಟೋಲ್‌ಗೇಟ್ ವಿಚಾರಕ್ಕೆ ಸಂಬಂಧಿಸಿದಂತೆ ನಡೆಯುವ ಹೋರಾಟಕ್ಕೆ ಆಭರತಿಯ ಜನತಾ ಪಾರ್ಟಿಯ ಬೆಂಬಲ ಕೂಡಾ ಇದೆ. ಈ ವಿಷಯದಲ್ಲಿ ಶೀಘ್ರವಾಗಿ ಇತ್ಯರ್ಥವಾಗದೇ ಹೋದರೆ ನಾನು ಕೂಡಾ ನ್ಯಾಯಾಲಯಕ್ಕೆ ಹೋಗಲು ಸಿದ್ಧನಿದ್ದೇನೆ. ಆದರೆ ನಾವು ಆಡಳಿತದಲ್ಲಿ ಇರುವ ಕಾರಣಕ್ಕೆ ಈ ಹೋರಾಟವನ್ನು ರಾಜಕೀಯವಾಗಿ ಮುಂದುವರೆಸುವುದು ತಪ್ಪು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಇಂದು ಮಂಗಳೂರಿನಲ್ಲಿ ಸುರತ್ಕಲ್ ಟೋಲ್ ಗೇಟ್ ಮುತ್ತಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಅವರು ಪ್ರತಿಕ್ರಿಯೆ ನೀಡಿ ‘ಶಾಂತಿಯುತ ಪ್ರತಿಭಟನೆಗೆ ನಮ್ಮ ಬೆಂಬಲವಿದೆ.

ಆದರೆ ಕಾನೂನನ್ನ ಕೈಗೆ ತೆಗೆದುಕೊಂಡು ಪ್ರತಿಭಟನೆ ನಡೆಸಿದರೆ ಸರಕಾರ ಅದರದ್ದೇ ಆದ ಕ್ರಮವನ್ನು ತೆಗೆದುಕೊಳ್ಳಬೇಕಾಗುತ್ತದೆ. ನೋಟಿಸ್ ನೀಡಿರುವ ವಿಚಾರ ನನಗೆ ಗೊತ್ತಿಲ್ಲ. ಈ ಕುರಿತು ನಾನು ಕಮಿಷನರ್ ಜೊತೆ ಮಾತನಾಡಿದ್ದೇನೆ. ಹೋರಾಟ ಸಹಜ. ಶಾಂತಿಯುತ ಹೋರಾಟಕ್ಕೆ ನಮ್ಮ ವಿರೋಧವಿಲ್ಲ.

ನಾನು ಹೋರಾಟಗಾರರ ಜೊತೆ ಮಾತನಾಡಿದರೆ ರಾಜಕೀಯ ಬರುತ್ತದೆ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳ ಜೊತೆ ನಾನು ಮಾತನಾಡಿ ಕಾಲಾವಕಾಶ ನೀಡುವಂತೆ ಮನವಿ ಮಾಡಲು ಹೇಳಿದ್ದೀನಿ. ಟೋಲ್ ತೆರವಿಗೆ 20 ದಿವಸ ಕಾಲಾವಕಾಶವನ್ನು ಟೋಲ್ ನವರು ಕೇಳಿದ್ದಾರೆ.

ಮಂಗಳೂರು: ಓವರ್‌ ಟೇಕ್‌ ಮಾಡುವ ಭರದಲ್ಲಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್ ; 12 ವರ್ಷದ ಬಾಲಕ ಸಾವು – Vishwanews24

ಅದಕ್ಕೆ ಅವಕಾಶ ಕೊಡೋಣ. ತದನಂತರ ಅವರು ಕ್ರಮ ತೆಗೆದುಕೊಳ್ಳದಿದ್ದರೆ ಏನು ಮಾಡಬೇಕು ಎಂಬುದರ ಬಗ್ಗೆ ತೀರ್ಮಾನ ಮಾಡೋಣ ಎಂದು ವಿನಂತಿ ಮಾಡಿದ್ರು.

ಹೋರಾಟ ಮಾಡಬಾರದು ಎಂದು ಹೇಳುವ ಹಕ್ಕು ನನಗಿಲ್ಲ. ಯಾಕಂದ್ರೆ ಇದು ಪ್ರಜಾಪ್ರಭುತ್ವ. ಶಾಂತಿಯುತ ಹೋರಾಟಕ್ಕೆ ನಮ್ಮ ಅಭ್ಯಂತರ ಇಲ್ಲ.

ಆದರೆ ಕಾನೂನನ್ನು ಕೈಗೆ ಎತ್ತಿಕೊಂಡು ಹೋರಾಟ ಮಾಡಿದ್ರೆ ಮುಂದೆ ಆಗುವ ಅನಾಹುತಕ್ಕೆ ಅವರೇ ಜವಾಬ್ದಾರರು. ಟೋಲ್ ಗೇಟನ್ನು ನಾವು ತೆಗೆದೆ ತೆಗಿತೀವಿ ಎಂದು ಹೇಳಲು ನಾನು ಕಟಿಬದ್ದನಾಗಿದ್ದಿನಿ’ ಎಂದು ಹೇಳಿದರು.

ರಾಜ್ಯದಲ್ಲಿ ಮತ್ತೊಮ್ಮೆ ಶುರುವಾಯ್ತು `ಧರ್ಮ ದಂಗಲ್’. ದೀಪಾವಳಿ ಹಬ್ಬಕ್ಕೆ `ಹಲಾಲ್’ ಉತ್ಪನ್ನ ಬಹಿಷ್ಕಾರಕ್ಕೆ ಕರೆ – Vishwanews24

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 day ago